Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಂಕಿ ಅಕಸ್ಮಿಕಕ್ಕೆ ‘ವಿಧವೆಯರ ಮನೆ’...

ಬೆಂಕಿ ಅಕಸ್ಮಿಕಕ್ಕೆ ‘ವಿಧವೆಯರ ಮನೆ’ ಆಹುತಿ

ವಾರ್ತಾಭಾರತಿವಾರ್ತಾಭಾರತಿ29 April 2017 9:32 PM IST
share
ಬೆಂಕಿ ಅಕಸ್ಮಿಕಕ್ಕೆ ‘ವಿಧವೆಯರ ಮನೆ’ ಆಹುತಿ

ಉಡುಪಿ, ಎ.29: ನಗರದ ಮಿಷನ್ ಕಾಂಪೌಂಡ್‌ನಲ್ಲಿರುವ ಯುಬಿಎಂಸಿ ಚರ್ಚ್‌ಗೆ ಹಿಂದಿರುವ ‘ವಿಧವೆಯರ ಮನೆ’ ಇಂದು ಅಪರಾಹ್ನ ಅಕಸ್ಮಿಕ ಬೆಂಕಿ ಅವಘಡಕ್ಕೆ ಸಂಪೂರ್ಣ ಸುಟ್ಟು ಹೋಗಿದೆ. ಈ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯವಾಗಿಲ್ಲ.

ಮನೆಯ ಹೊರಗೆ ಒಬ್ಬ ವೃದ್ಧೆ ಇದ್ದರೂ ಆಕೆ ಅಪಾಯ ಅರಿತು ದೂರ ಓಡಿ ಬಚಾವಾಗಿದ್ದಾರೆ. ಬೆಂಕಿಗೆ ಇಡೀ ಮನೆಯ ಮಾಡು, ಮನೆಯೊಳಗಿದ್ದ ಹೆಚ್ಚಿನ ಪಾತ್ರೆಪಗಡಿ, ಬಟ್ಟೆಗಳು ಸಂಪೂರ್ಣ ಸುಟ್ಟು ಹೋಗಿವೆ. ಕೋಣೆ ಯೊಳಗಿದ್ದ ಗಾದ್ರೇಜ್‌ನಲ್ಲಿದ್ದ ಕೆಲವು ವಸ್ತುಗಳು ಉಳಿದುಕೊಂಡಿವೆ ಎಂದು ಬೆಂಕಿ ನಂದಿಸುವಲ್ಲಿ ಶ್ರಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ತಿಳಿಸಿದ್ದಾರೆ.

 ಈ ವಿಧವಾ ಗೃಹದಲ್ಲಿ ಮೂವರು ವೃದ್ಧೆಯರು ವಾಸವಾಗಿದ್ದರೆಂದು ತಿಳಿದುಬಂದಿದೆ. ಅವರಲ್ಲಿ ಇಬ್ಬರು ಘಟನೆಯ ವೇಳೆ ಹೊರಗೆ ಹೋಗಿದ್ದರೆ, ಒಬ್ಬರು ಅಡಿಗೆ ತಯಾರಿಸಲು ಬೆಂಕಿ ಉರಿಸುವಾಗ ಬೆಂಕಿಯ ಕಿಡಿ ಹಾರಿ ಒಣಗಿದ ಕಟ್ಟಿಗೆಯ ಮೇಲೆ ಬಿದ್ದು ಅದಕ್ಕೆ ಬೆಂಕಿ ಹಿಡಿದು ಘಟನೆ ನಡೆದಿರಬೇಕೆಂದು ಶಂಕಿಸಲಾಗಿದೆ. 11 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಬಿಸಿಲು ಹಾಗೂ ಗಾಳಿಯಿಂದಾಗಿ ಬೆಂಕಿ ತಕ್ಷಣವೇ ಇಡೀ ಮನೆಗೆ ವ್ಯಾಪಿಸಿತು ಎಂದು ಹೇಳಲಾಗಿದೆ. ಕೂಡಲೇ ಮಾಹಿತಿ ಪಡೆದ ಉಡುಪಿ ಹಾಗೂ ಮಲ್ಪೆಯ ಎರಡು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಪರಿಸರದವರ ಸಹಕಾರದೊಂದಿಗೆ ಬೆಂಕಿ ನಂದಿಸಲು ಯಶಸ್ವಿಯಾದವು. ಘಟನೆಯಿಂದ ಸುಮಾರು ಐದು ಲಕ್ಷ ರೂ.ನಷ್ಟ ಸಂಭವಿಸಿರುವ ಅಂದಾಜು ಮಾಡಲಾಗಿದೆ.

ಮನೆಯೊಳಗೆ ಅಡುಗೆಕೋಣೆಯಲ್ಲಿ ಅನಿಲದ ಸಿಲಿಂಡರ್‌ಗಳಿದ್ದರೂ, ಪುಣ್ಯವಶಾತ್ ಅವುಗಳವರೆಗೆ ಬೆಂಕಿ ಹಬ್ಬಿರಲಿಲ್ಲ. ನಾವು ಬಂದ ತಕ್ಷಣ ಮನೆಯೊಳಗಿನಿಂದ ಸಿಲಿಂಡರ್‌ಗಳನ್ನು ಜಾಗೃತೆಯಾಗಿ ಹೊರಗೆ ತಂದೆವು ಎಂದು ಅಗ್ನಿಶಾಮಕ ದಳದ ಅಧಿಕಾರಿ ಚಂದ್ರಶೇಖರ ಭಂಡಾರಿ ತಿಳಿಸಿದರು. ಸುಮಾರು ಒಂದೂವರೆ ಗಂಟೆಗಳ ಪ್ರಯತ್ನದ ಬಳಿಕ ಬೆಂಕಿಯನ್ನು ನಿಯಂತ್ರಿಸಲು ಸಾಧ್ಯವಾಯಿತು ಎಂದರು. ಆದರೂ ಮನೆಯೊಳಗೆ ಹೆಚ್ಚಿನ ವಸ್ತುಗಳು ಬೆಂಕಿಗಾಹುತಿಯಾಗಿವೆ ಎಂದರು.

ಮನೆಯ ಮೂವರು ವೃದ್ಧೆಯರಿಗೆ ತಾತ್ಕಾಲಿಕ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾ ಗಿದೆ. ಈ ಸಂದರ್ಭದಲ್ಲಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್, ಮೂವರು ಮಹಿಳೆಯರಿಗೆ ತಲಾ 5000 ರೂ.ಗಳನ್ನು ಪರಿಹಾರ ಧನವಾಗಿ ನೀಡಿದರು. ಸರಕಾರದಿಂದ ಗರಿಷ್ಠ ನೆರವು ದೊರಕುವಂತೆ ಪ್ರಯತ್ನಿಸುವುದಾಗಿ ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X