Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಣಾಜೆ ಇನ್‌ಸ್ಪೆಕ್ಟರ್ ವಿರುದ್ಧ...

ಕೊಣಾಜೆ ಇನ್‌ಸ್ಪೆಕ್ಟರ್ ವಿರುದ್ಧ ಕ್ರಮಕ್ಕೆ ಸೂಚನೆ: ಸಚಿವ ಖಾದರ್

ಕಾರ್ತಿಕ್ ರಾಜ್ ಹತ್ಯೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ30 April 2017 6:16 PM IST
share
ಕೊಣಾಜೆ ಇನ್‌ಸ್ಪೆಕ್ಟರ್ ವಿರುದ್ಧ ಕ್ರಮಕ್ಕೆ ಸೂಚನೆ: ಸಚಿವ ಖಾದರ್

ಮಂಗಳೂರು, ಎ.30: ಕೊಣಾಜೆ ಪೊಲೀಸ್ ಠಾಣಾ ಸಮೀಪ ಐದಾರು ತಿಂಗಳ ಹಿಂದೆ ನಡೆದ ಪಜೀರ್ ಗ್ರಾಮದ ಕಾರ್ತಿಕ್ ರಾಜ್ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದೆ ಸಮರ್ಪಕ ರೀತಿಯಲ್ಲಿ ತನಿಖೆ ನಡೆಸದ ಇನ್‌ಸ್ಪೆಕ್ಟರ್ ಅಶೋಕ್ ವಿರುದ್ಧ ತನಿಖೆ ನಡೆಸಿ ಕ್ರಮ ಜರಗಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಯು.ಟಿ.ಖಾದರ್ ತಿಳಿಸಿದರು.

ರವಿವಾರ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾರ್ತಿಕ್ ಹತ್ಯೆ ಪ್ರಕರಣದ ವಿಚಾರಣೆ ವೇಳೆ ಕೊಣಾಜೆ ಪೊಲೀಸರು 100ಕ್ಕೂ ಅಧಿಕ ಮಂದಿಯನ್ನು ತನಿಖೆಗೆ ಒಳಪಡಿಸಿದ್ದಾರೆ. ಈ ಸಂದರ್ಭ ಅನೇಕ ಮಂದಿ ಪೊಲೀಸರಿಂದ ಹೊಡೆತ ತಿಂದಿದ್ದಾರೆ. ಕೊಲೆ ನಡೆದ ತಕ್ಷಣ ಸ್ಥಳೀಯರ ಮಾಹಿತಿಯನ್ನು ಆಧರಿಸಿ ಕಾಂಗ್ರೆಸ್ ನಾಯಕರು ಕಾರ್ತಿಕ್ ರಾಜ್‌ನ ಮನೆ ಮಂದಿಯನ್ನು ವಿಚಾರಣೆ ನಡೆಸುವಂತೆ ಆಗ್ರಹಿಸಿದ್ದರು. ಆದರೆ ಕೊಣಾಜೆ ಇನ್‌ಸ್ಪೆಕ್ಟರ್ ಸರಿಯಾಗಿ ತನಿಖೆ ನಡೆಸಲಿಲ್ಲ. ಅನೇಕ ಮಂದಿಯನ್ನು ವಶಕ್ಕೆ ತೆಗೆದುಕೊಂಡು ಹಿಂಸಿಸಿದರೂ ತಾನು ಸತ್ಯಾಂಶ ಹೊರಗೆ ಬರಲಿ ಎಂದು ತಾಳ್ಮೆ ವಹಿಸಿದ್ದೆ.

ತನ್ನ ವಿರುದ್ಧ ಬಿಜೆಪಿಗರು ಆರೋಪ ಮಾಡಿದಾಗಲೂ ಮೌನವಾಗಿದ್ದೆ. ತಾನು ಪೊಲೀಸ್ ತನಿಖೆಯಲ್ಲಿ ಯಾವುದೇ ಹಸ್ತಕ್ಷೇಪ ಮಾಡದೆ ಅಪರಾಧಿಗಳನ್ನು ಬಂಧಿಸುವಂತೆ ಹೇಳಿದ್ದೆ. ಕೊಣಾಜೆ ಇನ್‌ಸ್ಪೆಕ್ಟರ್ ಅಶೋಕ್‌ಗೆ ಹತ್ಯೆಯಾದ ಕಾರ್ತಿಕ್ ರಾಜ್ ಸಂಬಂಧಿಕ. ಆದರೂ ಅವರು ಸರಿಯಾಗಿ ತನಿಖೆ ನಡೆಸಲಿಲ್ಲ. ಸಿಸಿಬಿ ಎಸಿಪಿ ವೆಲೆಂಟೈನ್ ಡಿಸೋಜ ನೇತೃತ್ವದ ತಂಡಕ್ಕೆ ತನಿಖೆಯ ಜವಾಬ್ದಾರಿ ವಹಿಸಿದ 15 ದಿನದಲ್ಲಿ ಬಂಧಿಸಲು ಸಾಧ್ಯವಾಯಿತು. ಹಾಗಾಗಿ ಕೊಣಾಜೆ ಇನ್‌ಸ್ಟೆಕ್ಟರ್ ಯಾಕೆ ನಿರ್ಲಕ್ಷ ವಹಿಸಿದರು ಎಂಬುದನ್ನು ತಿಳಿಯಲು ಅವರ ವಿರುದ್ಧವೇ ತನಿಖೆ ನಡೆಸಬೇಕಾಗಿದೆ ಎಂದರಲ್ಲದೆ, ಇದನ್ನು ರಾಜ್ಯ ಗೃಹ ಸಚಿವರ ಗಮನಕ್ಕೂ ತರವುದಾಗಿ ಹೇಳಿದರು.

ಯಡಿಯೂರಪ್ಪ ಕ್ಷಮೆ ಯಾಚಿಸಲಿ: ಕಾರ್ತಿಕ್‌ರಾಜ್ ಕೊಲೆ ಪ್ರಕರಣದಲ್ಲಿ ಯಾವ ಪುರಾವೆ ಇಲ್ಲದೆಯೂ ಒಂದು ಸಮುದಾಯದ ವಿರುದ್ಧ ಆರೋಪ ಮಾಡಿದ್ದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಇದೀಗ ಕ್ಷಮೆಯಾಚಿಸಬೇಕು ಎಂದ ಖಾದರ್, ಸ್ಥಳೀಯ ಬಿಜೆಪಿಗರು ಹೇಳಿದರೆಂಬ ಕಾರಣಕ್ಕೆ ಮಾಜಿ ಸಿಎಂ ಎಂಬ ವಿವೇಚನೆಯೂ ಇಲ್ಲದೆ, ಕಟ್ಟುಕಥೆ ಹೆಣೆದು ಸಿಎಂಗೆ ಮಾಜಿ ಸಿಎಂ ಯಡಿಯೂರಪ್ಪ ಮನವಿ ಸಲ್ಲಿಸಿದ್ದರು. ಇದೀಗ ಸತ್ಯಾಂಶ ಹೊರ ಬಿದ್ದಿದೆ. ಈ ಘಟನೆಯು ಹಂತಕರಿಗೂ, ರಾಜಕೀಯ ಬೇಳೆ ಬೇಯಿಸಲು ಹೊರಟವರಿಗೂ ಸ್ಪಷ್ಟ ಸಂದೇಶ ನೀಡಿದೆ. ಕೊಲೆ ಮಾಡಿದವರೂ ಸಿಕ್ಕಿದ್ದಾರೆ. ನಾಟಕ ಮಾಡಿದವರ ಬಣ್ಣವೂ ಬದಲಾಗಿದೆ ಎಂದರು.

ಅಭಿನಂದನೆ: ಸ್ವಲ್ಪ ತಡವಾಗಿಯಾದರೂ ಮಂಗಳೂರು ಕಮಿಷನರ್ ಚಂದ್ರಶೇಖರ್ ನೇತೃತ್ವದಲ್ಲಿ ಎಸಿಪಿ ವೆಲೆಂಟೈನ್ ಡಿಸೋಜರ ಸಿಸಿಬಿ ತಂಡ ನಿಗೂಢ ಪ್ರಕರಣವನ್ನು ಭೇದಿಸಿ ಸತ್ಯವನ್ನು ಸಮಾಜದ ಮುಂದೆ ತಂದಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ. ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದಿದ್ದ ರಾಜು ಮೊಗೇರ, ಸ್ವಾನ್ ಮತ್ತು ಕಾರ್ತಿಕ್‌ರಾಜ್ ಸೇರಿದಂತೆ ಮೂರೂ ಹತ್ಯೆಗಳ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕ್ರಿಮಿನಲ್ ಯಾವ ಪಕ್ಷ, ಧರ್ಮದವನಾದರೂ ಬೆಂಬಲಿಸಬಾರದು. ಜನಪ್ರತಿನಿಧಿಗಳು ಸಮಾಜವನ್ನು ಕಟ್ಟಬೇಕೇ ವಿನಃ ಒಡೆಯಬಾರದು. ಇಲ್ಲಿ ಕೊಲೆಯಾದ ಕಾರ್ತಿಕ್‌ರಾಜ್‌ನ ದುಃಖತಪ್ತ ಹೆತ್ತವರನ್ನೂ ಬಲಾತ್ಕಾರವಾಗಿ ಪ್ರತಿಭಟನಾ ಸ್ಥಳಕ್ಕೆ ತಂದು ಕೂರಿಸಿ ರಾಜಕೀಯ ಲಾಭ ಪಡೆಯುವ ಪ್ರಯತ್ನ ಮಾಡಿದವರು ಈಗ ಯಾಕೆ ವೌನ ತಾಳಿದ್ದಾರೆ ಎಂದು ಖಾದರ್ ಪ್ರಶ್ನಿಸಿದರು.

ಕರೋಪಾಡಿ ಹತ್ಯೆ: ಕರೋಪಾಡಿ ಗ್ರಾಪಂ ಉಪಾಧ್ಯಕ್ಷ ಜಲೀಲ್ ಕರೋಪಾಡಿ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದರಲ್ಲಿ ಭೂಗತ ಪಾತಕಿ ಹೆಸರು ಕೇಳಿಬಂದಿದ್ದು, ಸ್ಥಳೀಯರ ಮಾಹಿತಿ ಇಲ್ಲದೆ ಈ ಘಟನೆ ನಡೆಯಲು ಸಾಧ್ಯವಿಲ್ಲ. ಗೃಹ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಲಿದೆ. ವಿದೇಶದಲ್ಲಿ ಕುಳಿತು ಹತ್ಯೆ ಮಾಡಿಸುವವರ ಜಾಡು ಹಿಡಿದು ಶಿಕ್ಷಿಸುವ ಎಲ್ಲ ಪ್ರಯತ್ನ ಇಲಾಖೆ ಮಾಡಲಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X