Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟ್ರಾಕ್ಟರ್ ನೋಂದಾಯಿಸಲು ಆರ್‌ಟಿಒ...

ಟ್ರಾಕ್ಟರ್ ನೋಂದಾಯಿಸಲು ಆರ್‌ಟಿಒ ನಿರಾಕರಣೆ; ರೈತರಿಗೆ ಸಂಕಷ್ಟ

ಬಿಎಸ್-3 ವಾಹನ ನಿಷೇಧ ಕಾಯ್ದೆಯ ನೆಪ

ವಾರ್ತಾಭಾರತಿವಾರ್ತಾಭಾರತಿ30 April 2017 4:45 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಟ್ರಾಕ್ಟರ್ ನೋಂದಾಯಿಸಲು ಆರ್‌ಟಿಒ ನಿರಾಕರಣೆ; ರೈತರಿಗೆ ಸಂಕಷ್ಟ

 ಹೊಸದಿಲ್ಲಿ, ಎ.30: ಬಿಎಸ್-3 ವಾಹನಗಳ ಮೇಲೆ ಸುಪ್ರೀಂಕೋರ್ಟ್ ನಿಷೇಧದ ಹಿನ್ನೆಲೆಯಲ್ಲಿ ಟ್ರಾಕ್ಟರ್‌ಗಳು ಮತ್ತು ನಿರ್ಮಾಣ ಸಾಧನ ವಾಹನಗಳ ಉತ್ಪಾದನೆ ಮತ್ತು ಮಾರಾಟದ ಮೇಲೆ ಭಾರೀ ಹೊಡೆತ ಬಿದ್ದಿದೆ. ಈ ವಾಹನಗಳಿಗೆ ಪರಿಸರ ಮಾಲಿನ್ಯ ನಿಯಂತ್ರಣ ಕಾಯ್ದೆಯಡಿ ಪ್ರತ್ಯೇಕ ಮಾನದಂಡವಿದ್ದರೂ ಹಲವು ರಾಜ್ಯಗಳಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ(ಆರ್‌ಟಿಒ)ಗಳು ಚತುಷ್ಚಕ್ರ ವಾಹನ ಎಂಬ ಕಾರಣ ನೀಡಿ ಇವುಗಳ ನೋಂದಾವಣೆಗೆ ಅವಕಾಶ ನೀಡುತ್ತಿಲ್ಲ. ಎಪ್ರಿಲ್ 1ರಿಂದ ನಿಷೇಧ ಜಾರಿಗೆ ಬಂದ ಬಳಿಕ ದಿಲ್ಲಿ, ಉ.ಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಅಸ್ಸಾಂ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳ ಆರ್‌ಟಿಒಗಳು ಸುಮಾರು 25000 ಟ್ರಾಕ್ಟರ್‌ಗಳು, 1,500ಕ್ಕೂ ಹೆಚ್ಚು ನಿರ್ಮಾಣ ಸಾಧನ ವಾಹನಗಳನ ನೋಂದಾವಣೆಗೆ ನಿರಾಕರಿಸಿದ್ದಾರೆ.

 ಟ್ರಾಕ್ಟರ್‌ಗಳು ‘ಭಾರತ್ ಟ್ರಾಕ್ಟರ್ ವಾಯುಮಾಲಿನ್ಯ’ ಮಾನದಂಡ 3ಎ ಅನುಸರಿಸಿದರೆ ನಿರ್ಮಾಣ ಸಾಧನ ವಾಹನಗಳು ‘ಭಾರತ್ ಸ್ಟೇಜ್ 3’ ಮಾನದಂಡ ಅನುಸರಿಸುತ್ತಿವೆ. ದೇಶದಲ್ಲಿ ಇತರ ವಾಹನಗಳು ಅನುಸರಿಸುವ ವಾಯುಮಾಲಿನ್ಯ ಮಾನದಂಡಕ್ಕಿಂತ ಇವು ಭಿನ್ನವಾಗಿವೆ.
ದ್ವಿಚಕ್ರ, ತ್ರಿಚಕ್ರ, ಚತುಷ್ಚಕ್ರ ಅಥವಾ ವಾಣಿಜ್ಯ ವಾಹನಗಳಿರಲಿ, ಇವು ಬಿಎಸ್-4 ವ್ಯವಸ್ಥೆ ಹೊಂದಿಲ್ಲದಿದ್ದರೆ ಇವನ್ನು ಎಪ್ರಿಲ್ 1ರಿಂದ ಮಾರುವಂತಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶ ನೀಡಿತ್ತು.

 ಈ ಆದೇಶವನ್ನು ಹಲವು ರಾಜ್ಯಗಳಲ್ಲಿ ಆರ್‌ಟಿಒ ಅಧಿಕಾರಿಗಳು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಇದರಿಂದ ಟ್ರಾಕ್ಟರ್ ಅಥವಾ ನಿರ್ಮಾಣ ಸಾಧನ ವಾಹನಗಳನ್ನು ನೋಂದಾವಣೆ ಮಾಡಲಾಗುತ್ತಿಲ್ಲ ಎಂದು ಭಾರತೀಯ ನಿರ್ಮಾಣ ಸಾಧನ ಉತ್ಪಾದಕರ ಸಂಘದ ಅಧ್ಯಕ್ಷ ಆನಂದ್ ಸುಂದರೇಶನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ನಿರ್ಮಾಣ ಕಾಮಗಾರಿ ಅಧಿಕವಾಗಿರುವ ಸಂದರ್ಭದಲ್ಲೇ ಈ ರೀತಿ ಆಗಿರುವುದು ದುರದೃಷ್ಟಕರ. ಬಹುತೇಕ ನಿರ್ಮಾಣ ಸಂಸ್ಥೆಗಳು ಕಾರ್ಯ ಸ್ಥಗಿತಗೊಳಿಸಿದ ಕಾರಣ ದಿನಗೂಲಿ ನೌಕರರು ಸಮಸ್ಯೆಗೆ ಸಿಲುಕಿದ್ದಾರೆ .ಅಲ್ಲದೆ ನಿರ್ಮಾಣ ಸಾಧನ ವಾಹನಗಳ ಮಾರಾಟ ತಿಂಗಳಿಗೆ ಶೇ.30ರಷ್ಟು ಕಡಿಮೆಯಾಗಿದೆ ಎಂದವರು ತಿಳಿಸಿದ್ದಾರೆ.

ಟ್ರಾಕ್ಟರ್ ಉತ್ಪಾದಕ ಮತ್ತು ಮಾರಾಟ ಮಾಡುವ ಸಂಸ್ಥೆಗಳೂ ಇದೇ ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ. ಟ್ರಾಕ್ಟರ್‌ಗಳು ಚತುಷ್ಚಕ್ರ ಹೊಂದಿರುವ ಕಾರಣ ಬಿಎಸ್-4 ಮಾನದಂಡ ಅನ್ವಯಿಸುತ್ತದೆ ಎಂಬುದು ಆರ್‌ಟಿಒಗಳ ವಾದ. ಆದರೆ ಕೃಷಿ ಕಾರ್ಯದ ಟ್ರಾಕ್ಟರ್‌ಗಳು ಪ್ರತ್ಯೇಕ ವಾಯುಮಾಲಿನ್ಯ ಮಾನದಂಡ ಹೊಂದಿವೆ ಎಂಬುದು ಅವರಿಗೇ ತಿಳಿದಿಲ್ಲ. ಈ ಬಗ್ಗೆ ರಾಜ್ಯ ಸಾರಿಗೆ ಆಯುಕ್ತರು ಅಥವಾ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಸ್ಪಷ್ಟನೆ ನೀಡಬೇಕು ಎಂದು ಟ್ರಾಕ್ಟರ್ ಉತ್ಪಾದಿಸುವ ಸಂಸ್ಥೆಯ ಅಧಿಕಾರಿಯೋರ್ವರು ಹೇಳುತ್ತಾರೆ.

  ಒಂದು ಅಂದಾಜಿನ ಪ್ರಕಾರ ಮಾರ್ಚ್ ಮತ್ತು ಎಪ್ರಿಲ್ ತಿಂಗಳಲ್ಲಿ ಉ.ಪ್ರದೇಶ ರಾಜ್ಯವೊಂದರಲ್ಲೇ ಸುಮಾರು 14,660 ಟ್ರಾಕ್ಟರ್‌ಗಳು ಮಾರಾಟವಾಗಿವೆ. ಮಹಾರಾಷ್ಟ್ರದಲ್ಲಿ 10000, ತೆಲಂಗಾಣದಲ್ಲಿ 4,600, ಆಂಧ್ರಪ್ರದೇಶದಲ್ಲಿ 3,250, ತಮಿಳುನಾಡಿನಲ್ಲಿ 2,150 ಮತ್ತು ಅಸ್ಸಾಂನಲ್ಲಿ 1,100 ಟ್ರಾಕ್ಟರ್ ಮಾರಾಟವಾಗಿದೆ. ಟ್ರಾಕ್ಟರ್ ಖರೀದಿಸಿದ ರೈತರು ಈಗ ಇಕ್ಕಟ್ಟಿಗೆ ಸಿಲುಕಿದ್ದಾರೆ.

ಇದೀಗ ನಿಯಮವನ್ನು ಸ್ಪಷ್ಟಗೊಳಿಸಬೇಕೆಂದು ಕೋರಿ ಟ್ರಾಕ್ಟರ್ ಉತ್ಪಾದಕ ಸಂಸ್ಥೆಗಳು ಸುಪ್ರೀಂಕೋರ್ಟ್ ಮೆಟ್ಟಲೇರುವ ನಿರೀಕ್ಷೆಯಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X