Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಧಾನಪರಿಷತ್‌ಗೆ ನಾಮನಿರ್ದೇಶನ; ಹೆಸರು...

ವಿಧಾನಪರಿಷತ್‌ಗೆ ನಾಮನಿರ್ದೇಶನ; ಹೆಸರು ಕೈ ಬಿಟ್ಟರೆ ಹೋರಾಟ ನಿಶ್ಚಿತ : ಕೆ.ಪಿ.ನಂಜುಂಡಿ

ವಾರ್ತಾಭಾರತಿವಾರ್ತಾಭಾರತಿ30 April 2017 10:15 PM IST
share
ವಿಧಾನಪರಿಷತ್‌ಗೆ ನಾಮನಿರ್ದೇಶನ; ಹೆಸರು ಕೈ ಬಿಟ್ಟರೆ ಹೋರಾಟ ನಿಶ್ಚಿತ : ಕೆ.ಪಿ.ನಂಜುಂಡಿ

ಬೆಂಗಳೂರು, ಎ.30: ವಿಧಾನಪರಿಷತ್‌ಗೆ ನಾಮನಿರ್ದೇಶನ ಮಾಡುವ ಸಂಬಂಧ ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯ ಸರಕಾರ ಸಿದ್ಧಪಡಿಸುತ್ತಿರುವ ಅರ್ಹರ ಪಟ್ಟಿಯಿಂದ ನನ್ನ ಹೆಸರನ್ನು ಕೈ ಬಿಟ್ಟರೆ ರಾಜ್ಯಾದ್ಯಂತ ಹೋರಾಟ ಮಾಡುವುದು ನಿಶ್ಚಿತ ಎಂದು ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ಕೆ.ಪಿ.ನಂಜುಂಡಿ ತಿಳಿಸಿದ್ದಾರೆ.

 ರವಿವಾರ ನಗರದ ಆನಂದ್‌ರಾವ್ ವೃತ್ತದಲ್ಲಿರುವ ಗಾಂಧಿ ಪ್ರತಿಮೆ ಬಳಿ ಆಯೋಜಿಸಿದ್ದ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಟ್ಟಿಯಿಂದ ನನ್ನ ಹೆಸರನ್ನು ಅಧಿಕೃತವಾಗಿ ಕೈ ಬಿಟ್ಟಿರುವ ಕುರಿತು ಮಾಹಿತಿಯಿಲ್ಲ. ಒಂದು ವೇಳೆ ನನ್ನ ಹೆಸರನ್ನು ಕೈ ಬಿಟ್ಟರೆ ರಾಜ್ಯದ ಎಲ್ಲ ಜಿಲ್ಲಾ, ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಹೋರಾಟವನ್ನು ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯ ಸರಕಾರ ನಮಗೆ ವಿಶ್ವಕರ್ಮ ಪ್ರಾಧಿಕಾರ ಮಾಡಿಕೊಟ್ಟಿದೆ. ಆದರೆ ರಾಜಕೀಯವಾಗಿ ನಮ್ಮನ್ನು ದೂರವಿಟ್ಟಿದೆ. ಮೇ 28ರಂದು ವಿಶ್ವಕರ್ಮ ಯುವಕರ ಜಾಗೃತಿ ಸಮಾವೇಶವನ್ನು ಆಯೋಜಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಸನ್ಮಾನಿಸಬೇಕು ಅಂದುಕೊಂಡಿದ್ದೆ. ಆದರೆ, ಈಗಿನ ವಿದ್ಯಾಮಾನಗಳನ್ನು ನೋಡಿ ಕಾರ್ಯಕ್ರಮವನ್ನು ರದ್ದು ಮಾಡಿದ್ದೇವೆ ಎಂದು ಅವರು ಹೇಳಿದರು.

ನನ್ನ ಮಾತು ನಿಂತು ಹೋಗಿದೆ. ಈ ಸಮಾಜಕ್ಕೆ ಏನಾದರೂ ಮಾಡಬೇಕು ಅಂದುಕೊಂಡಿದ್ದೆ. ಆದರೆ, ಈಗ ಅದು ನಿಂತ ನೀರಾಗಿದೆ. ನಮ್ಮ ಸಮುದಾಯದವರಿಗೆ ಎಲ್ಲ ಸವಲತ್ತುಗಳು ಸಿಗಬೇಕು ಅಂದರೆ ನಮಗೆ ಒಂದು ಪಕ್ಷ ಬೇಕಿತ್ತು. ಅದಕ್ಕಾಗಿ ನಾನು ಕಳೆದ 16 ವರ್ಷಗಳಿಂದ ನಮ್ಮ ಸಮುದಾಯದ ಸ್ವಾಮಿಗಳು ಸೇರಿದಂತೆ ಎಲ್ಲರನ್ನು ಕಾಂಗ್ರೆಸ್ ಪಕ್ಷಕ್ಕೆ ದುಡಿಯುವಂತೆ ಹೇಳಿದ್ದೆ ಎಂದು ನಂಜುಂಡಿ ತಿಳಿಸಿದರು.

ನಾನು ಮಾಡಿದ ಕೆಲಸಕ್ಕೆ ಕೂಲಿ ಕೇಳಿದ್ದೆ. ನನಗೆ ರಾಜಕೀಯ ಮಾಡಿ ಅಭ್ಯಾಸವಿಲ್ಲ. ನನಗೆ ಸಿದ್ದರಾಮಯ್ಯನವರ ಮೇಲೆ ಆಪಾರ ಗೌರವವಿದೆ. ಸಿದ್ಧರಾಮಯ್ಯ ಎಷ್ಟೋ ಬಾರಿ ಬೇರೆಯವರ ಬಳಿ ನನ್ನನ್ನು ಮಾದರಿಯಾಗಿ ತೋರಿಸಿದ್ದಾರೆ. ಆದರೆ ಈಗ ಯಾವ ಕಾರಣಕ್ಕಾಗಿ ಸಿದ್ದರಾಮಯ್ಯ ಹೀಗೆ ನಡೆದುಕೊಳ್ಳುತ್ತಿದ್ದಾರೋ ಗೊತ್ತಿಲ್ಲ ಎಂದು ಅವರು ಹೇಳಿದರು.

ನಾನು ಇಂತಹ ಅಭ್ಯರ್ಥಿಗಳಿಗೆ ಮತ ನೀಡಿ ಎಂದರೆ ಎಲ್ಲರೂ ಅದೇ ಅಭ್ಯರ್ಥಿಗಳ ಪರವಾಗಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಆ ರೀತಿಯಲ್ಲಿ ನಾನು ನಮ್ಮ ಸಮುದಾಯವನ್ನು ಸಂಘಟಿಸಿದ್ದೇನೆ. ನಾನು ಸಮಾಜಕ್ಕೆ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷದಿಂದ ಏನೂ ಕೊಡಿಸಲು ಸಾಧ್ಯವಾಗುತ್ತಿಲ್ಲವಲ್ಲ ಎಂಬ ನೋವು ಕಾಡುತ್ತಿದ್ದೆ ಎಂದು ನಂಜುಂಡಿ ತಿಳಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಹೋಗುವುದು ಬೇಡ ಎಂದು ಸಮುದಾಯದ ಸ್ವಾಮಿಗಳು ಈ ಹಿಂದೆಯೆ ಹೇಳಿದ್ದರು. ಆದರೆ, ಅವರ ಮನವೊಲಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರಿ ಬೆಂಬಲ ನೀಡೋಣ ಎಂದಿದ್ದೆ. ಹಿಂದುಳಿದ ವರ್ಗಗಳ ನಾಯಕರಾದ ಸಿದ್ದರಾಮಯ್ಯ ಪರವಾಗಿ ಎಲ್ಲ ಹಂತಗಳಲ್ಲೂ ನಿಂತಿದ್ದೇನೆ. ಆದರೂ, ಈ ರೀತಿಯ ಅನ್ಯಾಯ ಯಾಕೆ ಎಂಬುದು ಗೊತ್ತಾಗುತ್ತಿಲ್ಲ. ಎಲ್ಲವನ್ನು ಕಾಲ ನಿರ್ಧರಿಸುತ್ತದೆ ಎಂದು ಅವರು ನೊಂದುಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X