Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜಸ್ಥಾನ: ಐದು ವರ್ಷಗಳಲ್ಲಿ 23 ಲಕ್ಷ...

ರಾಜಸ್ಥಾನ: ಐದು ವರ್ಷಗಳಲ್ಲಿ 23 ಲಕ್ಷ ಗರ್ಭಿಣಿಯರು 'ನಾಪತ್ತೆ'!

ವಾರ್ತಾಭಾರತಿವಾರ್ತಾಭಾರತಿ1 May 2017 9:04 AM IST
share
ರಾಜಸ್ಥಾನ: ಐದು ವರ್ಷಗಳಲ್ಲಿ 23 ಲಕ್ಷ ಗರ್ಭಿಣಿಯರು ನಾಪತ್ತೆ!

ಜೈಪುರ, ಮೇ 1: ಶೀರ್ಷಿಕೆ ನೋಡಿ ದಂಗಾಗಬೇಡಿ. ರಾಜಸ್ಥಾನದಲ್ಲಿ 2011ರಿಂದ 2016ರ ನಡುವೆ 23 ಲಕ್ಷ ಗರ್ಭಿಣಿಯರು 'ನಾಪತ್ತೆಯಾಗಿದ್ದಾರೆ. ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ ನೋಂದಣಿಯಾದ ಗರ್ಭಿಣಿಯರ ಸಂಖ್ಯೆಗೂ ಸಾಂಸ್ಥಿಕ ಹೆರಿಗೆಯಾದ ಮಹಿಳೆಯರ ಸಂಖ್ಯೆಗೂ ಅಜ ಗಜಾಂತರ ವ್ಯತ್ಯಾಸವಿದೆ ಎನ್ನುವುದನ್ನು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ತಮ್ಮ ವರದಿಯಲ್ಲಿ ಬಹಿರಂಗಪಡಿಸಿದ್ದಾರೆ. ಅಂದರೆ ವಾಸ್ತವವಾಗಿ ಗರ್ಭಿಣಿಯರು ನಾಪತ್ತೆಯಾಗಿರುವುದು ಸರಕಾರಿ ಕಡತಗಳಿಂದ.

ರಾಜ್ಯದಲ್ಲಿ ಕಳೆದ ಐದು ವರ್ಷದಲ್ಲಿ ನೋಂದಣಿಯಾದ ಗರ್ಭಿಣಿಯರ ಸಂಖ್ಯೆಗೂ ಸಾಂಸ್ಥಿಕ ಹೆರಿಗೆಯಾದ ಮಹಿಳೆಯರ ಸಂಖ್ಯೆಗೂ ಅಜ ಗಜಾಂತರ ವ್ಯತ್ಯಾಸವಿದೆ ಎನ್ನುವುದನ್ನು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ತಮ್ಮ ವರದಿಯಲ್ಲಿ ಬಹಿರಂಗಪಡಿಸಿದ್ದಾರೆ.

ಇದರಿಂದಾಗಿ 23 ಲಕ್ಷ ಮಹಿಳೆಯರ ಆರೋಗ್ಯದ ಅಂಶಗಳ ಬಗ್ಗೆ ಜಾಡು ಹಿಡಿಯುವುದು ಸರಕಾರಕ್ಕೆ ಸಾಧ್ಯವಾಗಿಲ್ಲ ಎಂದು ಆಕ್ಷೇಪಿಸಿದ್ದಾರೆ. ರಾಜ್ಯದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಹೆರಿಗೆ ಸಾವು ಸಂಭವಿಸಲು ಮತ್ತು ಶಿಶು ಮರಣ ಪ್ರಮಾಣ ಹೆಚ್ಚಲು, ಸರಕಾರದ ವೈಫಲ್ಯವೇ ಕಾರಣ ಎಂದು ವರದಿ ಹೇಳಿದೆ. ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್ ಯೋಜನೆಯ ಸಾಧನೆ ಪರಿಶೀಲನಾ ವರದಿಯಲ್ಲಿ ಈ ಅಂಶವನ್ನು ವಿವರಿಸಲಾಗಿದೆ.

ಕೇಂದ್ರ ಸರಕಾರ 2005ರಲ್ಲಿ ಚಾಲನೆ ನೀಡಿದ ಈ ಯೋಜನೆಯಡಿ, ಶಿಶುಗಳ ಹಾಗೂ ಹೆರಿಗೆ ಅವಧಿಯಲ್ಲಿ ಮಹಿಳೆಯರ ಸಾವನ್ನು ಕಡಿಮೆ ಮಾಡುವುದು ಹಾಗೂ ಗ್ರಾಮೀಣ ಜನರ ಸಾಮಾನ್ಯ ಆರೋಗ್ಯ ಸುಧಾರಿಸುವ ಉದ್ದೇಶ ಹೊಂದಲಾಗಿದೆ.

ಐದು ವರ್ಷಗಳ ಅವಧಿಯಲ್ಲಿ 95 ಲಕ್ಷ ಗರ್ಭಿಣಿಯರು ಪ್ರಸವಪೂರ್ವ ನೋಂದಣಿ ಮಾಡಿಸಿಕೊಂಡಿದ್ದರೆ, ರಾಜ್ಯದಲ್ಲಿ ಈ ಅವಧಿಯಲ್ಲಿ 67 ಲಕ್ಷ ಮಹಿಳೆಯರು ಮಾತ್ರ ಆಸ್ಪತ್ರೆಗಳಲ್ಲಿ ಹೆರಿಗೆ ಮಾಡಿಸಿಕೊಂಡಿದ್ದಾರೆ. 5.08 ಲಕ್ಷ ಹೆರಿಗೆಗಳು ಮನೆಗಳಲ್ಲಿ ತರಬೇತಿ ಇಲ್ಲದ ದಾದಿಯರ ನೆರವಿನೊಂದಿಗೆ ಅಥವಾ ಸಂಬಂಧಿಕರ ನೆರವಿನೊಂದಿಗೆ ನಡೆದಿವೆ ಎಂದು ಅಂಕಿ ಅಂಶ ಹೇಳುತ್ತದೆ. ಆದರೆ 23 ಲಕ್ಷ ಮಹಿಳೆಯರ ಬಗ್ಗೆ ಯಾವ ಮಾಹಿತಿಯೂ ಇಲ್ಲ.

ಸಾಂಸ್ಥಿಕ ಹೆರಿಗೆ ನಿರಂತರವಾಗಿ ಹೆಚ್ಚುತ್ತಿದೆ ಎಂದು ಸರಕಾರ ಹೇಳಿಕೊಂಡಿದ್ದರೂ, ವಾಸ್ತವವಾಗಿ, ಈ ಪ್ರಮಾಣ ಐದು ವರ್ಷಗಳ ಅವಧಿಯಲ್ಲಿ ಶೇಕಡ 75 ರಿಂದ ಶೇಕಡ 78ರ ಆಸುಪಾಸಿನಲ್ಲೇ ಸ್ಥಗಿತವಾಗಿದೆ ಎಂದು ವರದಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X