Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆತ್ಮವಿಶ್ವಾಸ ಮತ್ತು ದೃಢ ಸಂಕಲ್ಪಕ್ಕೆ...

ಆತ್ಮವಿಶ್ವಾಸ ಮತ್ತು ದೃಢ ಸಂಕಲ್ಪಕ್ಕೆ ಬರವಿಲ್ಲ: 180 ಬಾವಿಗಳನ್ನು ತೋಡಿದ ಕೇರಳದ ಮಹಿಳೆಯರು !

ವಾರ್ತಾಭಾರತಿವಾರ್ತಾಭಾರತಿ1 May 2017 1:44 PM IST
share
ಆತ್ಮವಿಶ್ವಾಸ ಮತ್ತು ದೃಢ ಸಂಕಲ್ಪಕ್ಕೆ ಬರವಿಲ್ಲ: 180 ಬಾವಿಗಳನ್ನು ತೋಡಿದ ಕೇರಳದ ಮಹಿಳೆಯರು !

ಒತ್ತಪಲಂ, ಮೇ 1: ಕೇರಳದ ಪಾಲಕ್ಕಾಡ್ ಜಿಲ್ಲೆಯ ಪೂಕೊಟ್ಟುಕಾವು ಗ್ರಾಮವು ಸತತ ಬರಗಾಲದಿಂದ ಕಂಗಾಲಾಗಿದೆ. ನೀರಿಗಾಗಿ ಹಲವು ವರ್ಷಗಳಿಂದ ಹಪಹಪಿಸಿದೆ. ಆದರೆ ಬರಗಾಲ ಈ ಗ್ರಾಮದ ಕೆಲ ಮಹಿಳೆಯರನ್ನು ಕಂಗೆಡಿಸಿಲ್ಲ. ಇಲ್ಲಿ ಹಸಿವಿದ್ದರೂ ದಾಹ ತಣಿಸಲು ನೀರಿನ ಕೊರತೆಯಿಲ್ಲ. ಇದಕ್ಕೆ ಕಾರಣ ಈ ಗ್ರಾಮದ ಒತ್ತಪಲಂ ಬ್ಲಾಕ್ ನ ಕೆಲ ಗಟ್ಟಿಗಿತ್ತಿಯರು. ಕಳೆದ ಅಕ್ಟೋಬರ್ ತಿಂಗಳಿನಿಂದ ಅವರು ಹಾರೆ ಪಿಕ್ಕಾಸುಗಳನ್ನು ಕೈಯ್ಯಲ್ಲಿ ಹಿಡಿದುಕೊಂಡು ಬಾವಿ ತೋಡಲು ಆರಂಭಿಸಿದ್ದರು. ಇಲ್ಲಿಯ ತನಕ ಅವರು 180 ಬಾವಿಗಳನ್ನು ತೋಡಿದ್ದಾರೆ. ಪ್ರತಿ ದಿನ ನೀರು ತರಲು ಕೆಲವು ಕಿಲೋಮೀಟರ್ ದೂರದವರೆಗೆ ನಡೆದುಕೊಂಡು ಹೋಗಬೇಕಿದ್ದ ಈ ಗ್ರಾಮದ ಮಹಿಳೆಯರು ಇದೀಗ ತಮ್ಮ ಗ್ರಾಮದಲ್ಲಿಯೇ ಇರುವ ಬಾವಿಗಳಿಂದ ಶುದ್ಧ ನೀರು ಪಡೆಯುತ್ತಿದ್ದಾರೆ.

ಈ ಮಹಿಳೆಯರ ಸಾಹಸವನ್ನು ಮೆಚ್ಚಲೇ ಬೇಕು. ಪುರುಷರಿಗಿಂತ ತಾವೇನು ಕಡಿಮೆಯಿಲ್ಲವೆಂಬಂತೆ ಇವರು ಬಣ್ಣ ಬಣ್ಣದ ಲುಂಗಿ ಹಾಗೂ ಶರ್ಟ್ ಧರಿಸಿ ಬಾವಿ ತೋಡುವ ಕಾರ್ಯದಲ್ಲಿ ನಿರತರಾಗುತ್ತಾರೆ. ಈ ಗ್ರಾಮದ ಕನಿಷ್ಠ 300 ಮಹಿಳೆಯರು ಈ ಕಾಯಕದಲ್ಲಿ ತೊಡಗಿದ್ದು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ವಯ ವೇತನ ಗಳಿಸುತ್ತಾರೆ.

‘‘ಕಳೆದ ವರ್ಷ ನಾವು ನಮ್ಮ ಬಾವಿ ತೋಡುವ ಕೆಲಸ ಆರಂಭಿಸಿದಾಗ ಹಲವರಿಗೆ ಈ ಬಗ್ಗೆ ಯಾವುದೇ ಜ್ಞಾನವಿರಲಿಲ್ಲ. ಆದರೆ ಸ್ವಲ್ಪವೇ ಸಮಯದಲ್ಲಿ ಅವರು ಪರಿಣತರಾಗಿ ಬಿಟ್ಟಿದ್ದಾರೆ,’’ ಎನ್ನುತ್ತಾರೆ ಸ್ಥಳೀಯ ಪಂಚಾಯತ್ ಅಧ್ಯಕ್ಷ ಕೆ ಜಯದೇವನ್.

ಈ ಮಹಿಳೆಯರೇನು ಉಚಿತವಾಗಿ ಕೆಲಸ ಮಾಡುತ್ತಿಲ್ಲವಾದರೂ ಸಾಮಾನ್ಯವಾಗಿ ಒಂದು ಬಾವಿ ತೋಡಲು ರೂ 60,000 ವೆಚ್ಚ ತಗಲುವುದಾದರೆ ಇವರ ಬಾವಿಯ ವೆಚ್ಚ ಅದರ ಅರ್ಧದಷ್ಟಾಗುವುದು. ‘‘ಸರಕಾರಿ ಹಣವನ್ನು ಅತ್ಯುತ್ತಮವಾಗಿ ಹೇಗೆ ಉಪಯೋಗಿಸಬಹುದೆಂದು ಈ ಮಹಿಳೆಯರು ತಮ್ಮ ಕಾರ್ಯದ ಮೂಲಕ ಸಾಧಿಸಿ ತೋರಿಸಿದ್ದಾರೆ. ಮಳೆ ಕೈಕೊಟ್ಟಾಗ ಈ ಮಹಿಳೆಯರು ಸಮಯಕ್ಕೆ ಸರಿಯಾಗಿ ಸ್ಪಂದಿಸಿ ಆಪತ್ಬಾಂಧವರಾದರು,’’ ಎನ್ನುತ್ತಾರೆ ಪಾಲಕ್ಕಾಡ್ ಸಂಸದ ಎಂ ಬಿ ರಾಜೇಶ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X