Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಒಡೆದು ಆಳುವ ನೀತಿ ವಿರುದ್ಧ ಒಗ್ಗಟ್ಟಿನ...

ಒಡೆದು ಆಳುವ ನೀತಿ ವಿರುದ್ಧ ಒಗ್ಗಟ್ಟಿನ ಹೋರಾಟ ಅಗತ್ಯ: ಡಾ.ಕೆ.ಮರುಳಸಿದ್ದಪ್ಪ

ಕಾರ್ಮಿಕರ ಬೃಹತ್ ರ‍್ಯಾಲಿ, ಬಹಿರಂಗ ಸಭೆ

ವಾರ್ತಾಭಾರತಿವಾರ್ತಾಭಾರತಿ1 May 2017 6:02 PM IST
share
ಒಡೆದು ಆಳುವ ನೀತಿ ವಿರುದ್ಧ ಒಗ್ಗಟ್ಟಿನ ಹೋರಾಟ ಅಗತ್ಯ: ಡಾ.ಕೆ.ಮರುಳಸಿದ್ದಪ್ಪ

ಬೆಂಗಳೂರು, ಮೇ 1: ಕಾರ್ಪೋರೇಟ್ ಉದ್ಯಮಿಗಳು ಮಾಧ್ಯಮ ಮತ್ತು ರಾಜಕೀಯ ಕ್ಷೇತ್ರಗಳನ್ನು ನಿಯಂತ್ರಿಸುತ್ತಿದ್ದು, ದುಡಿಯುವ ವರ್ಗದ ಜನರ ಒಗ್ಗಟ್ಟನ್ನು ಮುರಿದು ಒಡೆದು ಆಳುತ್ತಿದ್ದಾರೆ. ಇದರ ವಿರುದ್ಧ ಕಾರ್ಮಿಕರು ಒಗ್ಗಟ್ಟಿನಿಂದ ಹೋರಾಟ ನಡೆಸಬೇಕು ಎಂದು ಹಿರಿಯ ಚಿಂತಕ ಡಾ.ಮರುಳಸಿದ್ದಪ್ಪ ಕರೆ ನೀಡಿದ್ದಾರೆ.

ಮೇ ದಿನಾಚರಣೆ ಹಿನ್ನೆಲೆಯಲ್ಲಿ ಇಲ್ಲಿನ ಸರಕಾರಿ ಕಾಲೇಜು ಮೈದಾನದಲ್ಲಿ ಏರ್ಪಡಿಸಿದ್ದ ಕಾರ್ಮಿಕರ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆರ್ಥಿಕ ಸಮಾನತೆ ಕಾರ್ಮಿಕರ ಘನತೆಯ ಮೂಲಭೂತ ಅಗತ್ಯ ಎಂದು ಪ್ರತಿಪಾದಿಸಿದರು.

ಕಾರ್ಮಿಕರ ಕೈ ಕೆಸರಾದರೆ ಬಾಯಿ ಮೊಸರಾಗುವ ಪರಿಸ್ಥಿತಿ ಇಂದು ದೂರವಾಗಿದೆ. ಮಾತಿನ ಮೂಲಕ ಕಾರ್ಮಿಕರ ಕುರಿತಂತೆ ಕರುಣೆ ವ್ಯಕ್ತವಾಗುತ್ತಿದೆಯೇ ವಿನಃ ಕಾರ್ಮಿಕರ ಹಕ್ಕುಗಳ ಸಂರಕ್ಷಣೆಗೆ ಸರಕಾರಗಳು ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ಕಾರ್ಮಿಕರ ಹಕ್ಕುಗಳನ್ನು ಸಂರಕ್ಷಿಸಿಕೊಳ್ಳಲು ಸಂಘಟಿತ ಹೋರಾಟದ ಅಗತ್ಯ ಎಂದರು.

ಅನ್ಯಾಯದ ವಿರುದ್ಧ ಹೋರಾಟವೇ ಕಡಿಮೆ ಆಗುತ್ತಿರುವ ಈ ದಿನಗಳಲ್ಲಿ ಕಾರ್ಮಿಕರ ವೇತನ ಹೆಚ್ಚಳ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಆಸಕ್ತಿಯನ್ನು ಸರಕಾರಗಳು ಕಳೆದುಕೊಂಡಿವೆ ಎಂದ ಅವರು, ಕಾರ್ಮಿಕರಿಗೆ ಆರೋಗ್ಯ, ಶಿಕ್ಷಣ, ಆಹಾರ ಭದ್ರತೆ ಕಲ್ಪಿಸಬೇಕು ಎಂದರು.
ದೇಶದಲ್ಲಿಂದು ಬಂಡವಾಳಶಾಹಿಗಳಿಗೆ ಅನುಕೂಲ ಆಗುವ ರೀತಿಯಲ್ಲಿ ಕಾನೂನುಗಳು, ಕಾರ್ಪೊರೇಟ್ ವಲಯಕ್ಕೆ ಅನುಕೂಲ ಆಗುವಂತಹ ನೀತಿಗಳು ದೇಶದಲ್ಲಿ ರೂಪಿತಗೊಳ್ಳುತ್ತಿವೆ. ಇಂತಹ ಸ್ಥಿತಿಗೆ ಸಮಾಜವಾದದ ಶಕ್ತಿಗಳ ನಿಯಂತ್ರಣ ವಿಫಲತೆಯೆ ಪ್ರಮುಖ ಕಾರಣ ಎಂದು ಅವರು ವಿಶ್ಲೇಷಿಸಿದರು.

ಕಾರ್ಮಿಕರ ಸಂಘಟನೆಗಳಿಗೆ ಕಡ್ಡಾಯ ಮಾನ್ಯತೆ ನೀಡಬೇಕು. ಸ್ಥಳೀಯ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ಡಾ.ಸರೋಜಿನಿ ಮಹಿಷಿ ವರದಿ ಜಾರಿ ಮಾಡಬೇಕು. ಅಸಂಘಟಿತ ಕಾರ್ಮಿಕರ ಬೇಡಿಕೆಗಳ ಈಡೇರಿಸಬೇಕು ಎಂದು ಸಭೆಯಲ್ಲಿ ನಿರ್ಣಯ ಮಂಡಿಸಲಾಯಿತು.

ಇಲ್ಲಿನ ಬನ್ನಪ್ಪ ಪಾರ್ಕಿನಿಂದ ಮೈಸೂರು ಬ್ಯಾಂಕ್ ವೃತ್ತದ ಮೂಲಕ ಸರಕಾರಿ ಕಾಲೇಜು ಮೈದಾನದ ವರೆಗೆ ಕಾರ್ಮಿಕರ ಬೃಹತ್ ರ್ಯಾಲಿ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಎಐಟಿಯುಸಿ ಅಧ್ಯಕ್ಷ ಅನಂತಸುಬ್ಬರಾವ್, ಮುಖಂಡರಾದ ರಾಮಚಂದ್ರಪ್ಪ, ಜ್ಯೋತಿ, ಮುರಳೀಧರ್, ಹರಿಗೋವಿಂದ್ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X