Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿಯಲ್ಲಿ ಶೀಘ್ರ ಭಾರೀ ಬದಲಾವಣೆ

ಬಿಜೆಪಿಯಲ್ಲಿ ಶೀಘ್ರ ಭಾರೀ ಬದಲಾವಣೆ

ರಾಜೇ, ಚೌಹಾಣ್ ಕೇಂದ್ರಕ್ಕೆ ಬರಲಿದ್ದಾರೆಯೇ ?

ವಾರ್ತಾಭಾರತಿವಾರ್ತಾಭಾರತಿ2 May 2017 2:38 PM IST
share
ಬಿಜೆಪಿಯಲ್ಲಿ ಶೀಘ್ರ ಭಾರೀ ಬದಲಾವಣೆ

ಹೊಸದಿಲ್ಲಿ,ಮೇ2: ಪಕ್ಷದಲ್ಲಿ ಕೇಂದ್ರ ಮಟ್ಟದಲ್ಲಿ ಭಾರೀ ಬದಲಾವಣೆಗಳಿಗೆ ಬಿಜೆಪಿ ಸಜ್ಜಾಗುತ್ತಿದ್ದು, ಪಕ್ಷಾಧ್ಯಕ್ಷ ಅಮಿತ್ ಶಾ ಅವರು ಶೀಘ್ರವೇ ಈ ಪ್ರಕ್ರಿಯೆಯನ್ನು ಆರಂಭಿ ಸುವ ನಿರೀಕ್ಷೆಯಿದೆ ಎಂದು ಮೂಲಗಳು ಬಹಿರಂಗಗೊಳಿಸಿವೆ. ರಾಜ್ಯ ಘಟಕಗಳಲ್ಲಿನ ಬಣಗಳಿಂದ ನಾಯಕತ್ವ ಬದಲಾವಣೆಗಳಿಗೆ ಆಗ್ರಹವಿದೆಯಾದರೂ,ಪಕ್ಷದ ಕೇಂದ್ರ ನಾಯಕತ್ವವು ಸದ್ಯಕ್ಕೆ ಯಾವುದೇ ಮುಖ್ಯಮಂತ್ರಿಯನ್ನು ಬದಲಾಯಿಸುವ ಸಾಧ್ಯತೆಗಳು ಕಡಿಮೆ ಎಂದೂ ಅವು ತಿಳಿಸಿದವು.

ಕೇಂದ್ರ ಸಂಪುಟದ ಪುನರ್‌ರಚನೆಯ ಮಾತುಗಳು ಕೇಳಿಬರುತ್ತಿದ್ದು, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಡ ರಾಜ್ಯಗಳ ಮುಖ್ಯಮಂತ್ರಿಗಳು ಕೇಂದ್ರಕ್ಕೆ ವರ್ಗಾವಣೆ ಗೊಳ್ಳಬಹುದು ಎಎಂಬ ವದಂತಿ ದಟ್ಟವಾಗಿದೆ. ಆದರೆ ಇಂತಹ ಬದಲಾವಣೆಯನ್ನು ಸದ್ಯಕ್ಕಂತೂ ನಿರೀಕ್ಷಿಸಲಾಗಿಲ್ಲ ಎಂದು ಬಿಜೆಪಿ ಮೂಲಗಳು ತಿಳಿಸಿದವು.

 ಹರ್ಯಾಣ ಮತ್ತು ಗುಜರಾತ್‌ಗಳಲ್ಲಿಯೂ ಭಿನ್ನಮತೀಯ ಗುಂಪುಗಳು ತಮ್ಮ ರಾಜ್ಯ ನಾಯಕತ್ವಗಳಲ್ಲಿ ಬದಲಾವಣೆಯನ್ನು ನಿರೀಕ್ಷಿಸುತ್ತಿವೆ. ಆದರೆ ಮೂಲಗಳು ಹೇಳಿರುವಂತೆ ಈ ರಾಜ್ಯಗಳಲ್ಲಿಯೂ ನಾಯಕತ್ವ ಬದಲಾವಣೆಯ ಯಾವುದೇ ಯೋಜನೆಯನ್ನು ಕೇಂದ್ರ ನಾಯಕತ್ವವು ಹೊಂದಿಲ್ಲ. ‘‘ಚುನಾವಣೆಗಳು ಸನ್ನಿಹಿತವಾಗಿರುವ ರಾಜ್ಯಗಳ ಮುಖ್ಯಮಂತ್ರಿಗಳನ್ನು ಬಿಜೆಪಿಯು ಸಾಮಾನ್ಯವಾಗಿ ಬದಲಾವಣೆ ಮಾಡುವುದಿಲ್ಲ. 2019ರ ಚುನಾವಣೆಗಳಿಗಾಗಿ ನಾವು ಸಿದ್ಧತೆಗಳನ್ನು ನಡೆಸುತ್ತಿದ್ದೇವೆ, ಹೀಗಾಗಿ ಗುಜರಾತ್, ಮಧ್ಯಪ್ರದೇಶ, ರಾಜಸ್ಥಾನ ಅಥವಾ ಹರ್ಯಾಣಗಳ ಮುಖ್ಯಮಂತ್ರಿಗಳನ್ನು ಪಕ್ಷವು ಬದಲಾಯಿಸುವ ಸಾಧ್ಯತೆಗಳು ಕಂಡುಬರುತ್ತಿಲ್ಲ. ಇಂತಹ ಬದಲಾವಣೆಗಳು ಪಕ್ಷ ಮತ್ತು ಅದರ ಸರಕಾರಗಳ ಮೇಲೆ ಪರಿಣಾಮಗಳನ್ನು ಬೀರುತ್ತವೆ ಎಂದು ಬಿಜೆಪಿ ನಾಯಕರೋರ್ವರು ಹೇಳಿದರು.

ಆದರೆ ಪಕ್ಷದ ಸಂಘಟನೆಯಲ್ಲಿ ಭಾರೀ ಬದಲಾವಣೆಗಳಾಗಲಿವೆ ಎಂದು ಉನ್ನತ ಮೂಲಗಳು ತಿಳಿಸಿವೆ. ರಾಷ್ಟ್ರೀಯ ಪದಾಧಿಕಾರಿಗಳು ಮತ್ತು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯ ಜೊತೆಗೆ ಸಂಸದೀಯ ಮಂಡಳಿ ಮತ್ತು ಕೇಂದ್ರ ಚುನಾವಣಾ ಸಮಿತಿಯಲ್ಲಿಯೂ ಬದಲಾವಣೆಗಳಾಗಬಹುದು. ಉತ್ತರ ಪ್ರದೇಶ ಮತ್ತು ಉತ್ತರಾಖಂಡ್‌ಗಳಲ್ಲಿ ಪಕ್ಷವು ಸರಕಾರಗಳನ್ನು ರಚಿಸಿದ ಬಳಿಕ ಸಂಘಟನೆಯಲ್ಲಿ ಹುದ್ದೆಗಳು ತೆರವಾಗಿವೆ.

ಉತ್ತರ ಪ್ರದೇಶ ಸರಕಾರದಲ್ಲಿ ಸಚಿವರಾಗಿರುವ ಮಹೇಂದ್ರ ಸಿಂಗ್, ಶ್ರೀಕಾಂತ್ ಶರ್ಮಾ ಮತ್ತು ಸಿದ್ಧಾರ್ಥನಾಥ್ ಸಿಂಗ್ ಅವರು ಪಕ್ಷದ ಕಾರ್ಯದರ್ಶಿ ಹುದ್ದೆಗಳನ್ನು ತೆರವುಗೊಳಿಸಿದ್ದಾರೆ. ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಮತ್ತು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ದಿನೇಶ ಶರ್ಮಾ ಅವರು ಉಪಾಧ್ಯಕ್ಷ ಸ್ಥಾನಗಳನ್ನು ತೊರೆದಿದ್ದಾರೆ ಎಂದು ಅವು ಹೇಳಿದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X