Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕರ್ನಾಟಕ ರೆಸ್ಟೋರೆಂಟ್ ಮಾಲಕರ ಸಂಘದಿಂದ...

ಕರ್ನಾಟಕ ರೆಸ್ಟೋರೆಂಟ್ ಮಾಲಕರ ಸಂಘದಿಂದ ಶ್ಲಾಘನೀಯ ನಿರ್ಧಾರ ಯಾವುದೇ ಹೋಟೆಲ್‌ನಲ್ಲಿ ಉಚಿತವಾಗಿ ಶೌಚಾಲಯ ಬಳಸಿ...!

ವಾರ್ತಾಭಾರತಿವಾರ್ತಾಭಾರತಿ3 May 2017 10:36 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕರ್ನಾಟಕ ರೆಸ್ಟೋರೆಂಟ್ ಮಾಲಕರ ಸಂಘದಿಂದ ಶ್ಲಾಘನೀಯ ನಿರ್ಧಾರ ಯಾವುದೇ ಹೋಟೆಲ್‌ನಲ್ಲಿ ಉಚಿತವಾಗಿ ಶೌಚಾಲಯ ಬಳಸಿ...!

ಬೆಂಗಳೂರು,ಮೇ 3: ಎಲ್ಲಿಗೋ ಹೋಗುತ್ತಿದ್ದೀರಿ....ತುರ್ತಾಗಿ ಮೂತ್ರ ವಿಸರ್ಜನೆ ಮಾಡಲೇಬೇಕಾದ ಒತ್ತಡಕ್ಕೆ ಸಿಲುಕಿದ್ದರೆ ಅದಕ್ಕಾಗಿ ಸಮೀಪದ ಹೋಟೆಲ್‌ಗೆ ಹೋಗಿ ಅಲ್ಲಿಯ ಶೌಚಾಲಯವನ್ನು ಬಳಸಿ ಒತ್ತಡದಿಂದ ಪಾರಾಗಬಹುದು. ಆದರೆ ಇದಕ್ಕಾಗಿ ಹೋಟೆಲ್‌ನಲ್ಲಿ ತಂಪು ಪಾನೀಯವೋ ಅಥವಾ ಚಹಾವನ್ನೋ ಕುಡಿಯುವುದು ಅನಿವಾರ್ಯವಾಗಿರುತ್ತದೆ. ಆದರೆ ಇನ್ನು ಮುಂದೆ ಮೂತ್ರ ವಿಸರ್ಜನೆ ಮಾಡಲೆಂದೇ ಹೋಟೆಲ್‌ನಲ್ಲಿ ಏನನ್ನಾದರೂ ಖರೀದಿಸುವ ಅನಿವಾರ್ಯತೆಯಿಲ್ಲ.

ರಾಜ್ಯದಲ್ಲಿಯ ರೆಸ್ಟೋರೆಂಟ್‌ಗಳ ಶೌಚಾಲಯಗಳನ್ನು ಉಚಿತವಾಗಿ ಬಳಸಲು ಸಾರ್ವಜನಿಕರಿಗೆ ಅವಕಾಶ ನೀಡಲು ಕರ್ನಾಟಕ ರೆಸ್ಟೋರೆಂಟ್ ಮಾಲಕರ ಸಂಘವು ಸ್ವಯಂಪ್ರೇರಣೆಯಿಂದ ನಿರ್ಧರಿಸಿದೆ.

ಹೆಚ್ಚಿನ ಸಂದರ್ಭಗಳಲ್ಲಿ ಸಾರ್ವಜನಿಕ ಶೌಚಾಲಯಗಳಿರುವುದಿಲ್ಲ ಮತ್ತು ಹತ್ತಿರದ ಹೋಟೆಲ್‌ಗಳಲ್ಲಿರುವ ಶೌಚಾಲಯಗಳೇ ಜನರಿಗೆ ಏಕೈಕ ಆಸರೆಯಾಗಿರುತ್ತವೆ. ಕೇವಲ ಹೋಟೆಲ್‌ಗಳು ಮಾತ್ರವಲ್ಲ, ಬಾರ್‌ಗಳು ಮತ್ತು ಪಬ್‌ಗಳಲ್ಲಿಯೂ ಈ ಉಚಿತ ಸೌಲಭ್ಯ ಜನರಿಗೆ ಬುಧವಾರದಿಂದಲೇ ಲಭ್ಯವಿದೆ ಎಂದು ಸಂಘದ ಅಧ್ಯಕ್ಷ ಪಿ.ಸಿ.ರಾವ್ ತಿಳಿಸಿದ್ದಾರೆ.

ತಮ್ಮಲ್ಲಿಯ ಶೌಚಾಲಯಗಳನ್ನು ಉಪಯೋಗಿಸಲು ಮಹಿಳೆಯರು ಮತ್ತು ಮಕ್ಕಳಿಗೆ ಅವಕಾಶ ನೀಡಲು ದಕ್ಷಿಣ ದಿಲ್ಲಿಯ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಎರಡು ದಿನಗಳ ಹಿಂದೆ ನಿರ್ಧರಿಸಿದ್ದನ್ನು ಇಲ್ಲಿ ಉಲ್ಲೇಖಿಸಬಹುದಾಗಿದೆ.

ಸಂಘವು ಈ ನಿರ್ಧಾರವನ್ನು ಸುಮಾರು ಹತ್ತು ವರ್ಷಗಳ ಹಿಂದೆಯೇ ತೆಗೆದುಕೊಂಡಿತ್ತು. ಆದರೆ ಹೆಚ್ಚಿನ ರೆಸ್ಟೋರೆಂಟ್‌ಗಳು ಅದನ್ನು ಪಾಲಿಸಿರಲಿಲ್ಲ ಎಂದು ರಾವ್ ತಿಳಿಸಿದರು.

ಈ ನಿಯಮವನ್ನು ನಗರದಲ್ಲಿ ಜಾರಿಗೊಳಿಸುವ ಬಗ್ಗೆ ತಾನು ಬೆಂಗಳೂರು ರೆಸ್ಟೋರೆಂಟ್ ಮಾಲಕರ ಸಂಘದೊಂದಿಗೆ ಮಾತುಕತೆ ನಡೆಸಿದ್ದೆ ಎಂದು ತಿಳಿಸಿದ ಬೆಂಗಳೂರಿನ ಮೇಯರ್ ಜಿ.ಪದ್ಮಾವತಿ ಅವರು, ಈ ವಿಷಯದಲ್ಲಿ ಮಹಿಳೆಯರು ಹೆಚ್ಚಿನ ತೊಂದರೆ ಅನುಭವಿಸುತ್ತಾರೆ. ರೆಸ್ಟೋರೆಂಟ್‌ಗಳು ತಮ್ಮಲ್ಲಿಯ ವಾಷ್‌ರೂಮ್‌ನ ಉಚಿತ ಬಳಕೆಗೆ ಜನರಿಗೆ ಅವಕಾಶ ನೀಡಬೇಕು ಎಂದು ಕೇಂದ್ರವು ಆದೇಶ ಹೊರಡಿಸಿದ ಬಳಿಕ ಅದನ್ನು ಇಲ್ಲಿ ಜಾರಿಗೊಳಿಸಲು ನಾವು ನಿರ್ಧರಿಸಿದೆವು ಎಂದರು.

ಬುಧವಾರ ನಡೆದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಂಡಳಿ ಸಭೆಯಲ್ಲಿ ಈ ಬಗ್ಗೆ ಆದೇಶ ಹೊರಡಿಸಲಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X