Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವೃತ್ತಿಧರ್ಮಕ್ಕೆ ದ್ರೋಹ ಬಗೆದ...

ವೃತ್ತಿಧರ್ಮಕ್ಕೆ ದ್ರೋಹ ಬಗೆದ ಇನ್‌ಸ್ಪೆಕ್ಟರನ್ನು ಕೂಡಲೇ ವಜಾಗೊಳಿಸಿ: ಶಾಫಿ ಬೆಳ್ಳಾರೆ

ಕೊಣಾಜೆ ಇನ್‌ಸ್ಪೆಕ್ಟರ್ ಅಶೋಕ್‌ರನ್ನು ವಜಾಗೊಳಿಸುವಂತೆ ಆಗ್ರಹಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ3 May 2017 7:46 PM IST
share
ವೃತ್ತಿಧರ್ಮಕ್ಕೆ ದ್ರೋಹ ಬಗೆದ ಇನ್‌ಸ್ಪೆಕ್ಟರನ್ನು ಕೂಡಲೇ ವಜಾಗೊಳಿಸಿ: ಶಾಫಿ ಬೆಳ್ಳಾರೆ

ಕೊಣಾಜೆ, ಮೇ 3: ಕಾರ್ತಿಕ್‌ರಾಜ್‌ ಹತ್ಯೆಯಾದ ಬಳಿಕದ ಎಂಟು ತಿಂಗಳಲ್ಲಿ ಪೊಲೀಸರು ರಾತ್ರಿಯ ವೇಳೆ ಮುಸಲ್ಮಾನರ ಮನೆಗಳಿಗೆ ನುಗ್ಗಿ ವೃದ್ಧರು, ಮಹಿಳೆಯರು ಎನ್ನದೆ ದೌರ್ಜನ್ಯ ನಡೆಸಿದ್ದಾರೆ. ಅಲ್ಲದೆ ಬಲವಂತವಾಗಿ ಆಪಾದನೆಯನ್ನು ಒಪ್ಪಿಸುವಂತಹ ಪ್ರಯತ್ನಗಳು ಸತತವಾಗಿ ನಡೆದಿದ್ದವು. ಇನ್‌ಸ್ಪೆಕ್ಟರ್ ಅಶೋಕ್ ಅವರಿಗೆ ಸಾರ್ವಜನಿಕರು ಕುಟುಂಬ ಕಲಹದ ಬಗ್ಗೆ ಮಾಹಿತಿ ನೀಡಿದ್ದರೂ ಅಮಾಯಕರಿಗೆ ಹಿಂಸೆ ನೀಡಿ ಕುಟುಂಬಿಕರಿಗೆ ರಕ್ಷಣೆ ನೀಡಿದ್ದಾರೆ. ತಮ್ಮ ವೃತ್ತಿ ಧರ್ಮಕ್ಕೆ ದ್ರೋಹ ಬಗೆದ ಇಂತಹ ಇನ್‌ಸ್ಪೆಕ್ಟರನ್ನು ಕೂಡಲೇ ಸರಕಾರ ವಜಾಗೊಳಿಸಬೇಕು. ಅವರನ್ನು ವಜಾಗೊಳಿಸದಿದ್ದರೆ ಮುಂದಿನ ದಿನಗಳಲ್ಲಿ ಕಮಿಷನರ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಿದ್ದೇವೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಸಮಿತಿ ಸದಸ್ಯ ಶಾಫಿ ಬೆಳ್ಳಾರೆ ಎಚ್ಚರಿಸಿದರು.

ಕೊಣಾಜೆ ವಲಯ ನಾಗರಿಕ ಸಮಿತಿ ವತಿಯಿಂದ ಸ್ವಜನಪಕ್ಷಪಾತ ತೋರಿದ ಕೊಣಾಜೆ ಇನ್‌ಸ್ಪೆಕ್ಟರ್ ಅಶೋಕ್ ಅವರನ್ನು ಹುದ್ದೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಕೊಣಾಜೆ ಪೊಲೀಸ್ ಠಾಣೆಯೆದುರು ನಡೆದ ಧರಣಿಯನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ತಿಕ್ ರಾಜ್ ಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿ ಇದರಲ್ಲಿ ಇನ್‌ಸ್ಪೆಕ್ಟರ್ ಸ್ವಜನಪಕ್ಷಪಾತ ತೋರಿದ್ದು ರುಜುವಾತಾದಲ್ಲಿ ಅವರ ಮೇಲೂ ಕೊಲೆ ಮೊಕದ್ದಮೆಯನ್ನು ದಾಖಲಿಸಿ ಬಂಧಿಸಬೇಕು. ಪ್ರಕರಣಕ್ಕೆ ಸಂಬಂಧಿಸಿ ಶಿಹಾದ್ ಎಂಬ ಯುವಕನ್ನು ತನಿಖೆಯ ನೆಪದಲ್ಲಿ ವಶಕ್ಕೆ ತೆಗೆದು ಏಳು ದಿನಗಳ ಕಾಲ ಅಕ್ರಮವಾಗಿ ಬಂಧಿಸಿ ದೌರ್ಜನ್ಯ ನೀಡಿ ಬಲವಂತಾಗಿ ಒಪ್ಪಿಸುವ ಕೆಲಸ ನಡೆದಿತ್ತು. ಆದರೂ ಆತ ಒಪ್ಪದೇ ಇದ್ದಾಗ ಬೇರೆ ಕೇಸ್ ಹಾಕಿ ಬಂಧನದಲ್ಲಿಡಲಾಗಿತ್ತು. ಹೀಗೆ ಹಲವರ ಮೇಲೆ ದೌರ್ಜನ್ಯ ಎಸಗಲಾಗಿದ್ದು, ಇಂತಹ ಕೃತ್ಯಗಳಿಂದ ಪೊಲೀಸರ ಮೇಲೆ ಜನರು ನಂಬಿಕೆ ಕಳೆದುಕೊಳ್ಳುವಂತಾಗಿದೆ ಎಂದರು.

ಕಾರ್ತಿಕ್ ಹತ್ಯೆಯನ್ನು ರಾಜಕೀಯಗೊಳಿಸಲು ಯತ್ನಿಸಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಅವರ ನಾಲಗೆ ಆರೋಪಿಗಳು ಪತ್ತೆಯಾದ ಬಳಿಕ ಅಲುಗಾಡುತ್ತಿಲ್ಲ. ಅದಕ್ಕಿಂತ ಮುಂಚೆ ಕೊಣಾಜೆ ಠಾಣೆಯೆದುರು ನಡೆದ ಪ್ರತಿಭಟನೆಯಲ್ಲಿ ಜಿಲ್ಲೆಗೆ ಬೆಂಕಿ ಹಚ್ಚುವ ಹೇಳಿಕೆ ನೀಡಿದ್ದರು. ಇಂತವರನ್ನು ನಾವು ಸಂಸದರಾಗಿ ಆಯ್ಕೆ ಮಾಡಿ ಕಳುಹಿಸಿರುವುದು ದುರದೃಷ್ಟಕರ ಎಂದು ಹೇಳಿದರು.

ಮಾಜಿ ತಾಪಂ ಸದಸ್ಯ ಮುಸ್ತಫಾ ಹರೇಕಳ ಮಾತನಾಡಿ, ತನಿಖೆಯ ದಿಕ್ಕು ತಪ್ಪಿಸಲು ಸಂಘ ಪರಿವಾರದವರು ಘಟನೆಯನ್ನು ರಾಜಕೀಯ ಮಾಡಲು ಹೊರಟಿದ್ದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕೂಡಾ ಇದೊಂದು ಜಿಹಾದಿ ಕೃತ್ಯ ಎಂದು ಬಿಂಬಿಸಿದ್ದರು. ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಹಲವಾರು ಹಿಂದೂ-ಮುಸ್ಲಿಂ ಯುವಕರನ್ನು ತನಿಖೆಯ ನೆಪದಲ್ಲಿ ಹಿಂಸಿಸಿದ್ದಾರೆ. ದಕ್ಷಿಣ ಕನ್ನಡದ ಜನರು ಎಚ್ಚೆತ್ತುಕೊಂಡಿದ್ದು, ಪೊಲೀಸರು ಕೂಡ ಜನರ ನಂಬಿಕೆಯನ್ನು ಉಳಿಸುವಂತಹ ಕೆಲಸವನ್ನು ಮಾಡಬೇಕಿದೆ ಎಂದರು.

ಧರಣಿಯಲ್ಲಿ ಸಲಫಿ ಮೂವ್‌ಮೆಂಟ್‌ನ ಇಸ್ಮಾಯಿಲ್ ಶಾಫಿ, ಕೋಮು ಸೌಹಾರ್ದ ವೇದಿಕೆಯ ಇಸ್ಮತ್ ಪಜೀರ್ ಮಾತನಾಡಿದರು.

ಎಸ್‌ಡಿಪಿಐಯ ಹಾರಿಸ್ ಮಲಾರ್, ಪಿಎಫ್ ಐ ಜಿಲ್ಲಾಧ್ಯಕ್ಷ ನವಾಝ್ ಉಳ್ಳಾಲ್, ಎಸ್‌ಡಿಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಬ್ಬಾಸ್ ಕಿನ್ಯ, ಎಸ್‌ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅತ್ತಾವುಲ್ಲಾ ಜೋಕಟ್ಟೆ, ಪಿಎಫ್ ಐ ಜಿಲ್ಲಾ ಸಮಿತಿಯ ಅಶ್ರಫ್ ಎ.ಕೆ. ಮೊದಲಾದವರು ಉಪಸ್ಥಿತರಿದ್ದರು.

ಬಳಿಕ ನಾಗರಿಕ ಸಮಿತಿ ವತಿಯಿಂದ ಕ್ರೈಂ ಡಿಸಿಪಿ ಸಂಜೀವ್ ಪಾಟೀಲ್ ಅವರಿಗೆ ಇನ್‌ಸ್ಪೆಕ್ಟರ್ ಅಶೋಕ್ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X