Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘‘ಹೌದು,ಆಧಾರ್ ದತ್ತಾಂಶಗಳ...

‘‘ಹೌದು,ಆಧಾರ್ ದತ್ತಾಂಶಗಳ ಸೋರಿಕೆಯಾಗಿದೆ’’: ಸುಪ್ರೀಂ ಕೋರ್ಟ್‌ನಲ್ಲಿ ಒಪ್ಪಿಕೊಂಡ ಕೇಂದ್ರ

ವಾರ್ತಾಭಾರತಿವಾರ್ತಾಭಾರತಿ3 May 2017 8:28 PM IST
share
‘‘ಹೌದು,ಆಧಾರ್ ದತ್ತಾಂಶಗಳ ಸೋರಿಕೆಯಾಗಿದೆ’’: ಸುಪ್ರೀಂ ಕೋರ್ಟ್‌ನಲ್ಲಿ ಒಪ್ಪಿಕೊಂಡ ಕೇಂದ್ರ

ಹೊಸದಿಲ್ಲಿ,ಮೇ 3: ಆಧಾರ್ ಕಾರ್ಡ್ ಹೊಂದಿರುವವರ ದತ್ತಾಂಶಗಳು ಸೋರಿಕೆ ಯಾಗಿರುವುದು ನಿಜ ಎಂದು ಕೇಂದ್ರ ಸರಕಾರವು ಬುಧವಾರ ಸರ್ವೋಚ್ಚ ನ್ಯಾಯಾಲಯ ದಲ್ಲಿ ಒಪ್ಪಿಕೊಂಡಿತು. ಆದರೆ ಈ ಮಾಹಿತಿಗಳು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)ದಿಂದ ಸೋರಿಕೆಯಾಗಿಲ್ಲ ಎಂದು ಅದು ಪ್ರತಿಪಾದಿಸಿತು.

ವಿವಿಧ ಇತರ ಸರಕಾರಿ ಇಲಾಖೆಗಳು ಮತ್ತು ರಾಜ್ಯ ಏಜೆನ್ಸಿಗಳಿಂದ ದತ್ತಾಂಶಗಳು ಸೋರಿಕೆಯಾಗಿವೆ ಎಂದು ಸರಕಾರದ ಪರ ನ್ಯಾಯವಾದಿ ಅರ್ಘ್ಯ ಸೇನಗುಪ್ತಾ ಅವರು ನ್ಯಾ.ಎ.ಕೆ.ಸಿಕ್ರಿ ನೇತೃತ್ವದ ಪೀಠಕ್ಕೆ ತಿಳಿಸಿದರು.

ಆಧಾರ್ ದತ್ತಾಂಶ ಸೋರಿಕೆ ಬಗ್ಗೆ ಬುಧವಾರದ ವೃತ್ತಪತ್ರಿಕೆಗಳಲ್ಲಿಯೂ ವರದಿಗಳಿವೆ ಎಂದು ನ್ಯಾ.ಸಿಕ್ರಿ ಬೆಟ್ಟು ಮಾಡಿದಾಗ, ಅಲ್ಲಿ ಇಲ್ಲಿ ಕೆಲವು ತಪ್ಪುಗಳಿರಬಹುದು. ಕೆಲವು ಆಧಾರ್ ಕಾರ್ಡ್‌ಗಳನ್ನು ‘ಹನುಮಾನ್’ ಹೆಸರಿನಲ್ಲಿ ನೀಡಿರಬಹುದು. ನಾಯಿಗಳ ಹೆಸರಿನಲ್ಲಿಯೂ ಆಧಾರ ನೀಡಿರಬಹುದು. ಆದರೆ ಆಧಾರ್ ಅತ್ಯಂತ ಪ್ರಗತಿಶೀಲ ಮತ್ತು ವಿಶ್ವಾಸಾರ್ಹ ಬಯೊಮೆಟ್ರಿಕ್ ವ್ಯವಸ್ಥೆಯಾಗಿದೆ ಎಂದು ಸೇನಗುಪ್ತಾ ಪ್ರತಿಕ್ರಿಯಿಸಿದರು.

ಪಾನ್ ಕಾರ್ಡ್ ಮತ್ತು ಆದಾಯ ತೆರಿಗೆ ರಿಟರ್ನ್ ಸಲ್ಲಿಕೆಗೆ ಆಧಾರ್‌ನ್ನು ಕಡ್ಡಾಯಗೊಳಿಸಿರುವ ಸರಕಾರದ ನೂತನ ಕಾನೂನನ್ನು ಸಮರ್ಥಿಸಿಕೊಳ್ಳುತ್ತಿದ್ದ ಸೇನಗುಪ್ತಾ, ಹಣಕಾಸು ಕಾಯ್ದೆ,2017ರಡಿ ಆದಾಯ ತೆರಿಗೆ ಕಾಯ್ದೆಯಲ್ಲಿ ಸೇರಿಸಲಾಗಿರುವ ಕಲಂ 139 ಎಎ ಅನ್ನು ಜಾರಿಗೊಳಿಸಲು ಶಾಸಕಾಂಗವು ಅಧಿಕಾರ ಹೊಂದಿದೆ ಎಂದರು.

ಯಾವುದೇ ಶಾಸನವೂ ಸಮಸ್ಯೆಯನ್ನು ಸಂಪೂರ್ಣವಾಗಿ ಬಗೆಹರಿಸುವುದಿಲ್ಲ ಎಂದು ಹೇಳಿದ ಅವರು, ವ್ಯಕ್ತಿಗಳು ಮೊದಲ ಗುರಿಯಾಗಿರುವುದರಿಂದ ಅವರು ಆಧಾರ್ ಹೊಂದಿರುವುದು ಅಗತ್ಯವಾಗಿದೆಯೇ ಹೊರತು ಕಂಪನಿಗಳಲ್ಲ. ನಾಳೆ ಅಗತ್ಯವಾದರೆ ನಾವು ಪಾನ್ ಕಾರ್ಡ್ ಬದಲಿಗೆ ಆಧಾರ್‌ನ್ನು ತರಬಹುದು ಎಂದರು.

ಸೇನಗುಪ್ತಾರ ವಾದವನ್ನು ತಿರಸ್ಕರಿಸಿದ ಅರ್ಜಿದಾರರ ಪರ ವಕೀಲ ಶ್ಯಾಮ ದಿವಾನ್ ಅವರು, ಕೇಂದ್ರವು ಯುಐಡಿಎಐ ದತ್ತಾಂಶಗಳನ್ನು ಸೋರಿಕೆ ಮಾಡುತ್ತಿಲ್ಲ ಎಂದು ಹೇಳಿದರಷ್ಟೇ ಸಾಲದು. ಪ್ರಜೆಗಳ ದೃಷ್ಟಿಯಲ್ಲಿ ಎಲ್ಲ ಸರಕಾರಿ ಅಧಿಕಾರಿಗಳು ಸರಕಾರವೇ ಆಗಿರುತ್ತಾರೆ ಎಂದು ಹೇಳಿದರು.

ವಿಶಿಷ್ಟ ಗುರುತಿನ ಚೀಟಿಯನ್ನು ಹೊಂದುವುದು ಸಂಪೂರ್ಣವಾಗಿ ಐಚ್ಛಿಕವಾಗಿದೆ ಎಂದು ಆಧಾರ್ ಕಾಯ್ದೆಯೇ ಹೇಳುತ್ತಿರುವಾಗ ಹಣಕಾಸು ಕಾಯ್ದೆಯು ಆಧಾರ್‌ನ್ನು ಹೇಗೆ ಕಡ್ಡಾಯಗೊಳಿಸುತ್ತದೆ ಎಂದು ದಿವಾನ್ ಪ್ರಶ್ನಿಸಿದರು.

 ನಿವೃತ್ತ ಮೇಜಎಸ್.ಜಿ.ವಂಬಟ್‌ಕೆರೆ ಮತ್ತು ಸಾಮಾಜಿಕ ಕಾರ್ಯಕರ್ತ ಬೆಜವಾಡ ವಿಲ್ಸನ್ ಅವರು ಆಧಾರ್‌ನ್ನು ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿ ಸರ್ವೋಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದಾರೆ.

ಪ್ರಕರಣದಲ್ಲಿ ವಾದವಿವಾದಗಳು ಅಪೂರ್ಣವಾಗಿದ್ದು, ಗುರುವಾರ ಮುಂದುವರಿಯಲಿವೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X