Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮನುಷ್ಯ ಸಂಬಂಧಗಳು ಸಾಮರಸ್ಯದಿಂದಿರಲು...

ಮನುಷ್ಯ ಸಂಬಂಧಗಳು ಸಾಮರಸ್ಯದಿಂದಿರಲು ಕ್ಷಮಾಗುಣ ಅತಿಮುಖ್ಯ: ಯೋಗೇಶ್ ಮಾಸ್ಟರ್

ವಾರ್ತಾಭಾರತಿವಾರ್ತಾಭಾರತಿ3 May 2017 10:43 PM IST
share
ಮನುಷ್ಯ ಸಂಬಂಧಗಳು ಸಾಮರಸ್ಯದಿಂದಿರಲು ಕ್ಷಮಾಗುಣ ಅತಿಮುಖ್ಯ: ಯೋಗೇಶ್ ಮಾಸ್ಟರ್

ಬೆಂಗಳೂರು, ಮೇ 3: ಮನುಷ್ಯ ಸಂಬಂಧಗಳು ಸಾಮರಸ್ಯದಿಂದ ಕೂಡಿರಲು ಪ್ರತಿಯೊಬ್ಬರೂ ಕ್ಷಮಾಗುಣವನ್ನು ಅಳವಡಿಸಿಕೊಳ್ಳಬೇಕು ಎಂದು ಚಿತ್ರ ನಿರ್ದೇಶಕ, ಲೇಖಕ ಯೋಗೇಶ್ ಮಾಸ್ಟರ್ ತಿಳಿಸಿದ್ದಾರೆ.

ಕ್ಷಮಾದಿನ ಅಥವಾ "ಸಾರಿ ಡೇ"ಯ ಅಂಗವಾಗಿ ನಗರದ ಪ್ರೆಸ್‌ಕ್ಲಬ್‌ನಲ್ಲಿ ಕ್ರಿಸ್ಪ್ ಸಂಸ್ಥೆ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರಿ ಅಥವಾ ಕ್ಷಮಿಸು ಎಂದಾಕ್ಷಣ ಸರಿ ಹೋಗುವಂತಹ ಅನೇಕ ಸಂಗತಿಗಳಿವೆ. ಆದರೆ, ನಾವು ಕೆಲವೊಮ್ಮೆ ಅಹಂಕಾರದಿಂದ, ಮತ್ತೊಮ್ಮೆ ಸಂಕೋಚದಿಂದ, ಅಪಮಾನಕ್ಕೊಳಗಾಗುವ ಭೀತಿಯಿಂದ, ಮಾನ್ಯತೆ ಕಳೆದುಕೊಳ್ಳುವ ಹಿಂಜರಿಯಿಕೆಯಿಂದ ಕ್ಷಮೆ ಕೇಳದೇ ಹೋಗಿ ಬಿಡುತ್ತೇವೆ. ಇದರಿಂದಾಗಿ ಸಂಬಂಧಗಳು ಮುರಿದು ಬೀಳುವ ಸಂಭವ ಜಾಸ್ತಿ ಎಂದು ಹೇಳಿದರು.

ಮಕ್ಕಳ ಹಕ್ಕುಗಳ ರಕ್ಷಣೆಯ ಸಂದರ್ಭದಲ್ಲಿ ಅತ್ಯಂತ ಹೆಚ್ಚಿನ ಪಾತ್ರ ವಹಿಸುವ ಗುಣವೆಂದರೆ ಕ್ಷಮಾಗುಣ. ಮನೆ ಬಿಟ್ಟು ಹೋಗುವ ಮಕ್ಕಳು ಮತ್ತು ಪೋಷಕರ ಪರಸ್ಪರ ಕ್ಷಮೆ ಕೋರದೆ ಮತ್ತು ಕ್ಷಮಿಸದೆ ಅವರದೇ ಆದಂತಹ ಅಹಂಕಾರ ಅಥವಾ ಹಟದಿಂದ ಸಹಜವಾಗಿ ಸಂಬಂಧಗಳು ಶಿಥಿಲಗೊಳ್ಳುತ್ತವೆ ಅಥವಾ ಮುರಿದುಬೀಳುತ್ತವೆ. ಇದರಿಂದ ಮಕ್ಕಳಿಗೆ ಕೌಟುಂಬಿಕ ಭದ್ರತೆಯೂ ಸಿಗದೆ ಮಾನಸಿಕವಾಗಿ ಮತ್ತು ಭಾವನಾತ್ಮಕವಾಗಿ ಕುಗ್ಗಿ ಹೋಗುತ್ತಾರೆ. ಅಲ್ಲದೆ, ಅವರು ಮುಂದಕ್ಕೆ ನಕಾರಾತ್ಮಕವಾದ ಧೋರಣೆಗಳನ್ನು ಬೆಳೆಸಿಕೊಳ್ಳುತ್ತಾರೆ ಎಂದರು.

ಇದೇ ವೇಳೆಯಲ್ಲಿ ಕ್ಷಮಾದಿನದಂದು ತಮ್ಮ ಆತ್ಮಾವಲೋಕನಕ್ಕೆ ಪ್ರತಿಯೊಬ್ಬರಿಗೂ ದಾರಿ ಮಾಡಿಕೊಡುವಂತಹ ಅವಕಾಶವನ್ನು ಕಲ್ಪಿಸುವ ದಿನವಾಗಬೇಕು ಎಂಬ ಆಶಯದೊಂದಿಗೆ ‘ಮರಳಿ ಮನೆಗೆ’ ಚಿತ್ರವನ್ನು ಮೇ 5 ರಂದು ಬಿಡುಗಡೆ ಮಾಡಲಾಗುತ್ತಿದೆ. ಇದರಲ್ಲಿ ತಪ್ಪು ಮಾಡಿದ ಮಕ್ಕಳದೊಂದಿಗೆ ಕಠೋರವಾಗಿ ವರ್ತಿಸುವ ಪೋಷಕರ ಧೋರಣೆಯಿಂದಾಗಿ ಕುಟುಂಬದಿಂದ ಹೊರ ಹೋಗುವ ಮಕ್ಕಳು ತಮ್ಮ ಕ್ಷಮೆ ಮತ್ತು ಸಂಬಂಧವನ್ನು ಅದೇ ಕುಟುಂಬದಲ್ಲಿ ಹುಡುಕಿಕೊಳ್ಳುವಂತಹ ಚಿತ್ರಣವಿದೆ ಎಂದು ಯೋಗೇಶ್ ಮಾಸ್ಟರ್ ವಿವರಿಸಿದರು.

ನಿಖಿಲ್‌ಹೋಂ ಸ್ಕ್ರೀನ್ ಪ್ರಸ್ತುತ ಪಡಿಸುತ್ತಿರುವ ಮರಳಿ ಮನೆಗೆ ಯೋಗೇಶ್ ಮಾಸ್ಟರ್‌ರ ಕಾದಂಬರಿ ಆಧಾರಿತ ಚಿತ್ರವಾಗಿದೆ. ನಿರ್ದೇಶನ ಹಾಗೂ ಸಾಹಿತ್ಯ ಯೋಗೇಶ್ ಮಾಸ್ಟರ್ ನಿರ್ವಹಿಸಿದ್ದು, ಶೃತಿ, ಶಂಕರ್ ಆರ್ಯನ್, ಸುಚೇಂದ್ರ ಪ್ರಸಾದ್, ಅರುಂಧತಿ ಜಟ್ಕರ್, ಸಹನಾ, ರೋಹಿಣಿ ನಾಗೇಶ್ ಹಾಗೂ ಗೌರಿ ಲಂಕೇಶ್ ಸೇರಿದಂತೆ ಹಲವರು ಚಿತ್ರದಲ್ಲಿ ನಟಿಸಿದ್ದಾರೆ ಎಂದು ನಿರ್ಮಾಪಕ ಸುಭಾಷ್ ಎಲ್ ಗೌಡ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ನಟಿ ಶೃತಿ, ಕ್ರಿಸ್ಪ್ ಸಂಸ್ಥೆಯ ಅಧ್ಯಕ್ಷ ಕುಮಾರ ಜಾಗೀರದಾರ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X