Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ​ಟಿಪ್ಪುಸುಲ್ತಾನ್ ಬಗ್ಗೆ ಅಪಪ್ರಚಾರ...

​ಟಿಪ್ಪುಸುಲ್ತಾನ್ ಬಗ್ಗೆ ಅಪಪ್ರಚಾರ ಅಕ್ಷಮ್ಯ: ಡಾ.ಶಾಯರುಲ್ಲಾಖಾನ್

ವಾರ್ತಾಭಾರತಿವಾರ್ತಾಭಾರತಿ3 May 2017 11:22 PM IST
share

ಬೆಂಗಳೂರು, ಮೇ 3: ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ, ‘ಮೈಸೂರು ಹುಲಿ’ ಟಿಪ್ಪುಸುಲ್ತಾನ್ ಬಗ್ಗೆ ಅಪಪ್ರಚಾರ ನಡೆಸುತ್ತಿರುವುದು ಅಕ್ಷಮ್ಯವಾದದ್ದು ಎಂದು ಉತ್ತರಪ್ರದೇಶದ ರಾಂಪುರದ ‘ಝಿಯಾ ವಾಜೀಹ್’ ಮಾಸ ಪತ್ರಿಕೆಯ ಸಂಪಾದಕ ಡಾ.ಶಾಯರುಲ್ಲಾಖಾನ್ ವಾಜೀಹ್ ಅಭಿಪ್ರಾಯಪಟ್ಟಿದ್ದಾರೆ.

ನಗರದ ಕಬ್ಬನ್‌ಪೇಟೆ ಮುಖ್ಯರಸ್ತೆಯಲ್ಲಿರುವ ಹಝ್ರತ್ ಹಮೀದ್ ಷಾ ಕಾಂಪ್ಲೆಕ್ಸ್‌ನಲ್ಲಿರುವ ಹಝ್ರತ್ ಮಾಣಿಕ್ ಷಾ ದರ್ಗಾ ಸಮಿತಿಯ ಕಚೇರಿಯಲ್ಲಿ ತಮ್ಮ ‘ಟಿಪ್ಪು ಸುಲ್ತಾನ್ ಶಹೀದ್’ ವಿಶೇಷ ಸಂಚಿಕೆ ಕುರಿತು ಅವರು ಮಾತನಾಡಿದರು.

ಭಾರತವನ್ನು ಆಳಿದಂತಹ ಮುಸ್ಲಿಮ್ ಆಡಳಿತಗಾರರು, 1857ರ ಸ್ವಾತಂತ್ರ ಸಂಗ್ರಾಮ, ಮೊಗಲ್ ದೊರೆ ಬಹದ್ದೂರ್‌ಶಾ ಝಫರ್, ಬೇಗಮ್ ಹಝ್ರತ್ ಮಹಲ್, ಲಿಯಾಖತ್ ಅಲಿಖಾನ್ ಸೇರಿದಂತೆ ಅನೇಕರ ಬಗ್ಗೆ ವಿಶೇಷ ಸಂಚಿಕೆಗಳನ್ನು ಹೊರ ತಂದಿದ್ದೇವೆ. ದಕ್ಷಿಣ ಭಾರತದಲ್ಲಿ ಬ್ರಿಟೀಷರ ವಿರುದ್ಧದ ಸ್ವಾತಂತ್ರ್ಯ ಹೋರಾಟಕ್ಕೆ ಅಂಕಿತ ಹಾಕಿದ ಮೈಸೂರು ಹುಲಿ ಟಿಪ್ಪುಸುಲ್ತಾನ್ ಅವರ ಜೀವನ, ಆಡಳಿತ ನಿರ್ವಹಣೆ, ಹೋರಾಟ, ಸಂಘರ್ಷದ ಕುರಿತು ಕಳೆದ ಎರಡು ವರ್ಷಗಳಿಂದ ಸಂಶೋಧನೆ ನಡೆಸಿ ಈ ಸಂಚಿಕೆಯನ್ನು ಹೊರತರಲಾಗಿದೆ ಎಂದು ಶಾಯರುಲ್ಲಾಖಾನ್ ಹೇಳಿದರು.

ಟಿಪ್ಪುಸುಲ್ತಾನ್ ಅವರ ಹುತಾತ್ಮ ದಿನಾಚರಣೆ ಅಂಗವಾಗಿ ಮೇ 4ರಂದು ಶ್ರೀರಂಗಪಟ್ಟಣದಲ್ಲಿ 200 ಪುಟುಗಳನ್ನು ಒಳಗೊಂಡ ಈ ವಿಶೇಷ ಸಂಚಿಕೆ ಬಿಡುಗಡೆಯಾಗಲಿದೆ. ಟಿಪ್ಪುಸುಲ್ತಾನ್ ಬಗ್ಗೆ ಹೊಸ ಕಲ್ಪನೆಯನ್ನು ಓದುಗರಿಗೆ ಈ ಸಂಚಿಕೆ ಕಟ್ಟಿಕೊಡಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಧಾರ್ಮಿಕ ಸಾಮರಸ್ಯ, ಜನಸಾಮಾನ್ಯರೊಂದಿಗೆ ಅವರಿಗಿದ್ದ ಒಡನಾಟ ಸೇರಿದಂತೆ ಅನೇಕ ಪ್ರಮುಖ ವಿಚಾರಗಳ ಬಗ್ಗೆ ಈ ಸಂಚಿಕೆ ಬೆಳಕು ಚೆಲ್ಲಲಿದೆ. ಈ ಸಂಚಿಕೆಯನ್ನು ಆಧರಿಸಿ ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಶೋಧನೆಗಳು ನಡೆಯಲಿವೆ. ಆಡಳಿತಗಾರನಾದವನಿಗೆ ಎಲ್ಲ ಜಾತಿ, ಧರ್ಮದ ಅನುಯಾಯಿಗಳು ಒಂದೇ ಸಮಾನ. ಆದರೂ, ಟಿಪ್ಪಸುಲ್ತಾನ್‌ರನ್ನು ಒಂದು ನಿರ್ದಿಷ್ಟ ಸಮುದಾಯದ ವಿರೋಧಿ ಎಂದು ಬಿಂಬಿಸುತ್ತಿರುವುದು ಸರಿಯಲ್ಲ ಎಂದು ಶಾಯರುಲ್ಲಾಖಾನ್ ತಿಳಿಸಿದರು.

ಹಿಂದೂ ಹಾಗೂ ಮುಸ್ಲಿಮರ ನಡುವೆ ಐಕ್ಯತೆ, ಸೌಹಾರ್ದತೆಗಾಗಿ ಟಿಪ್ಪಸುಲ್ತಾನ್ ಶ್ರಮಿಸಿದ್ದರು. ಆದರೆ, ಇತಿಹಾಸದ ನೈಜ್ಯ ಸತ್ಯವನ್ನು ಮರೆಮಾಚಿ, ಅವರ ವಿರುದ್ಧ ಅಪಪ್ರಚಾರ ಮಾಡುವ ಒಂದು ಸಮೂಹ ಸಕ್ರಿಯವಾಗಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಹಝ್ರತ್ ಹಮೀದ್ ಷಾ ದರ್ಗಾ ಆಡಳಿತ ಸಮಿತಿಯ ಸದಸ್ಯ ಮುಬೀನ್‌ ಮುನವ್ವರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X