Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2002ರ ಬಿಲ್ಕಿಸ್ ಬಾನೊ ಸಾಮೂಹಿಕ...

2002ರ ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗಳಿಗೆ ಮರಣದಂಡನೆ ವಿಧಿಸಲು ಬಾಂಬೆ ಹೈಕೋರ್ಟ್ ನಕಾರ

ವಾರ್ತಾಭಾರತಿವಾರ್ತಾಭಾರತಿ4 May 2017 6:30 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
2002ರ ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗಳಿಗೆ ಮರಣದಂಡನೆ ವಿಧಿಸಲು ಬಾಂಬೆ ಹೈಕೋರ್ಟ್ ನಕಾರ

ಮುಂಬೈ, ಮೇ 4: ಅಹ್ಮದಾಬಾದ್ ನಗರದ ಸಮೀಪದ ರಂಧಿಕ್ಪುರ್ ಎಂಬ ಗ್ರಾಮದಲ್ಲಿ 2002ರ ಗುಜರಾತ್ ಗಲಭೆಗಳ ಸಂದರ್ಭ ಆಗ 19 ವರ್ಷದವಳಾಗಿದ್ದ ಬಿಲ್ಕಿಸ್ ಬಾನೋ ಎಂಬ ಗರ್ಭಿಣಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರಗೈದ ಪ್ರಕರಣದ ಹನ್ನೊಂದು ಮಂದಿ ಅಪರಾಧಿಗಳ ಪೈಕಿ ಮೂವರಿಗೆ ಮರಣದಂಡನೆ ವಿಧಿಸಲಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

ಬಿಲ್ಕಿಸ್ ಬಾನೋಳ ಮೂರು ವರ್ಷದ ಪುತ್ರಿ ಸಹಿತ ಆಕೆಯ ಕುಟುಂಬದ 14 ಸದಸ್ಯರನ್ನು ಕೊಲೆಗೈದ ಆರೋಪವನ್ನೂ ಈ ಆರೋಪಿಗಳು ಎದುರಿಸುತ್ತಿದ್ದಾರೆ.

ಇದು ಅಪರೂಪದ ಪ್ರಕರಣಗಳಲ್ಲಿಯೇ ಅಪರೂಪವಾದದ್ದು ಎಂದು ಕಳೆದ ವರ್ಷ ನ್ಯಾಯಾಲಯಕ್ಕೆ ಹೇಳಿದ್ದ ಸಿಬಿಐ ಈ ಪ್ರಕರಣದಲ್ಲಿ ದೋಷಿಗಳೆಂದು ಘೋಷಿಸಲ್ಪಟ್ಟ ಮೂವರಿಗೆ ಗಲ್ಲು ಶಿಕೆ ವಿಧಿಸಿ ಕಠಿಣ ಸಂದೇಶ ಸಾರಬೇಕೆಂದು ಕೋರಿತ್ತು. ಆ ಮೂವರಾದ ಜಸ್ವಂತ್ ನಾಯ್, ಗೋವಿಂದ್ ನಾಯ್ ಹಾಗೂ ಸೈಲೇಶ್ ಭಟ್ಟ್ ಗರ್ಭಿಣಿಯಾಗಿದ್ದ ಬಿಲ್ಕಿಸ್, ಆಕೆಯ ಸಹೋದರಿ ಹಾಗೂ ತಾಯಿಯನ್ನು ಅತ್ಯಾಚಾರಗೈದ ಬಗ್ಗೆ ಸ್ಪಷ್ಟ ಪುರಾವೆಗಳಿವೆ ಎಂದು ಸಿಬಿಐ ಹೇಳಿಕೊಂಡಿತ್ತು.

ಆರೋಪಿಗಳಲ್ಲಿ ಸೈಲೇಶ್ ಎಂಬಾತ ಬಿಲ್ಕಿಸ್ ಕೈಯಲ್ಲಿದ್ದ ಆಕೆಯ ಮೂರು ವರ್ಷದ ಪುತ್ರಿಯನ್ನು ಬಲವಂತವಾಗಿ ಸೆಳೆದು ಆಕೆಯ ತಲೆಯನ್ನು ಕಲ್ಲಿನಿಂದ ಜಜ್ಜಿದ ಪರಿಣಾಮ ಮಗು ಸ್ಥಳದಲ್ಲಿಯೇ ಸಾವನ್ನಪ್ಪಿತ್ತು ಎಂದು ಆರೋಪಿಸಲಾಗಿತ್ತು. ಮಾರ್ಚ್ 3, 2002ರಂದು ನಡೆದ ಈ ಘಟನೆಯಲ್ಲಿ ಬಿಲ್ಕಿಸ್ ತಾಯಿ, ಸಹೋದರಿ ಸೇರಿದಂತೆ ಅವರ ಕುಟುಂಬದ 14 ಮಂದಿ ಹಾಗೂ ಅವರ ಗ್ರಾಮದ 17 ಮಂದಿಯನ್ನು ಹತ್ಯೆಗೈಯಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿ ಗುಜರಾತ್ ರಾಜ್ಯದ ಐವರು ಪೊಲೀಸ್ ಅಧಿಕಾರಿಗಳನ್ನು ದೋಷಮುಕ್ತಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನೂ ಸಿಬಿಐ ಪ್ರಶ್ನಿಸಿತ್ತು. ಪೊಲೀಸರು ಇದೀಗ ಅಪರಾಧಿಗಳೆಂದು ಘೋಷಿಸಲ್ಪಟ್ಟವರ ಜತೆ ಸೇರಿ ದಾಖಲೆಗಳನ್ನು ತಿದ್ದಿದ್ದರು ಎಂಬ ಆರೋಪವನ್ನು ಈ ಐವರು ಪೊಲೀಸರು ಹೊತ್ತಿದ್ದರು.

ಸಾಕ್ಷಿಗಳನ್ನು ಬೆದರಿಸಬಹುದೆಂಬ ಭಯದಿಂದ ಪ್ರಕರಣದ ವಿಚಾರಣೆಯನ್ನು ಗುಜರಾತ್ ಹೊರಗಿನ ನ್ಯಾಯಾಲಯದಲ್ಲಿ ನಡೆಸಲು ತೀರ್ಮಾನಿಸಲಾಗಿತ್ತು. ಜನವರಿ 2008ರ ತನ್ನ ತೀರ್ಪಿನಲ್ಲಿ ಮುಂಬೈಯ ವಿಚಾರಣಾ ನ್ಯಾಯಾಲಯವು 11 ಮಂದಿಯನ್ನು ದೋಷಿಗಳೆಂದು ಹೆಸರಿಸಿ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದರೂ ಅವರೆಲ್ಲರೂ ಅದರ ವಿರುದ್ಧ ಹೈಕೋರ್ಟಿನ ಮೊರೆ ಹೋಗಿದ್ದರು.

ಆದರೆ ಪ್ರಕರಣದ ತೀರ್ಪನ್ನು ಕಾದಿರಿಸಿದ್ದ ಹೈಕೋರ್ಟ್ ಅಪರಾಧಿಗಳ ಹೆಸರು ಹಾಗೂ ಅವರು ವಿಚಾರಣೆ ಸಂದರ್ಭ ಎಷ್ಟು ಸಮಯ ಜೈಲಿನಲ್ಲಿದ್ದರು ಎಂಬ ಬಗ್ಗೆ ಮಾಹಿತಿಯನ್ನು ಕೇಳಿತ್ತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X