Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಬೀದಿಬದಿ ವ್ಯಾಪಾರಸ್ಥರ ಮೇಲಿನ ದಾಳಿ...

​ಬೀದಿಬದಿ ವ್ಯಾಪಾರಸ್ಥರ ಮೇಲಿನ ದಾಳಿ ಖಂಡಿಸಿ ವಾಹನ ಪ್ರಚಾರ ಜಾಥಾ

ವಾರ್ತಾಭಾರತಿವಾರ್ತಾಭಾರತಿ4 May 2017 10:58 PM IST
share
​ಬೀದಿಬದಿ ವ್ಯಾಪಾರಸ್ಥರ ಮೇಲಿನ ದಾಳಿ ಖಂಡಿಸಿ ವಾಹನ ಪ್ರಚಾರ ಜಾಥಾ

ಮಂಗಳೂರು, ಮೇ 4: ಬೀದಿಬದಿ ವ್ಯಾಪಾರಸ್ಥರ ಮೇಲೆ ನಡೆಯುತ್ತಿರುವ ನಿರಂತರ ದಾಳಿಯನ್ನು ಖಂಡಿಸಿ ಹಾಗೂ ಪರ್ಯಾಯ ವ್ಯವಸ್ಥೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಒತ್ತಾಯಿಸಿ ಸಿಐಟಿಯುಗೆ ಸಂಯೋಜಿತಗೊಂಡಿರುವ ದ.ಕ. ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ ನೇತೃತ್ವದಲ್ಲಿ ಮಂಗಳೂರು ನಗರದಾದ್ಯಂತ ಗುರುವಾರ ವಾಹನ ಪ್ರಚಾರ ಜಾಥಾವನ್ನು ನಡೆಯಿತು.

ನಗರದ ಸ್ಟೇಟ್‌ಬ್ಯಾಂಕ್ ಬಳಿಯಲ್ಲಿ ಪ್ರಾರಂಭಗೊಂಡ ಜಾಥಾದ ಉದ್ಘಾಟನೆಯನ್ನು ಸಿಐಟಿಯು ರಾಜ್ಯ ಉಪಾಧ್ಯಕ್ಷ ವಸಂತ ಆಚಾರಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಂಗಳೂರು ನಗರದಲ್ಲಿ ಯಾವುದೇ ಸಮಸ್ಯೆಗಳು ತಲೆದೋರಿದರೂ, ಅದಕ್ಕೆ ಬೀದಿಬದಿ ವ್ಯಾಪಾರಸ್ಥರೇ ನೇರಹೊಣೆ ಎಂಬಂತೆ ಮಂಗಳೂರು ಮಹಾನಗರ ಪಾಲಿಕೆ ವರ್ತಿಸುತ್ತಿದೆ. ಬೀದಿಬದಿ ವ್ಯಾಪಾರಸ್ಥರ ಪ್ರಬಲ ಹೋರಾಟದ ಭಾಗವಾಗಿ ಸಂಸತ್ತಿನಲ್ಲಿ ಮಸೂದೆಯೊಂದು ಜಾರಿಗೊಂಡಿದೆ. ರಾಜ್ಯ ಸರಕಾರವೂ ಕೂಡ ವಿಶೇಷ ನಿಯಮಾವಳಿಯನ್ನು ರೂಪಿಸಿದೆ. ಆದರೆ ಸ್ಥಳೀಯಾಡಳಿತಗಳು ಕಿಂಚಿತ್ತೂ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದರು.

6 ವರ್ಷಗಳ ಹಿಂದೆ ಮಂಗಳೂರಿನಲ್ಲಿ ಬೀದಿಬದಿ ವ್ಯಾಪಾರಸ್ಥರ ವಿರುದ್ಧ ಟೈಗರ್ ಕಾರ್ಯಾಚರಣೆಯನ್ನು ನಡೆಸಿದ ಅಂದಿನ ಬಿಜೆಪಿ ನೇತೃತ್ವದ ಮನಪಾ ಆಡಳಿತದ ವಿರುದ್ಧ ಹೋರಾಟ ನಡೆಸಿದ್ದರ ಫಲವಾಗಿ ಸರ್ವೇ ಕಾರ್ಯ ನಡೆದಿದೆ. ಬಳಿಕ ಸಮೀಕ್ಷೆ ನಡೆಸಿ ನಿಜವಾದ ಬೀದಿಬದಿ ವ್ಯಾಪಾರಸ್ಥರಿಗೆ ಗುರುತು ಚೀಟಿ ನೀಡಬೇಕೆಂದಿದ್ದರೂ ಕೇವಲ 208 ಮಂದಿಗೆ 2 ವರ್ಷಗಳ ಹಿಂದೆ ಗುರುತು ಚೀಟಿ ನೀಡಲಾಗಿದೆ. ಉಳಿದವರಿಗೆ ಕೊಡಬೇಕೆಂದು ಹಲವು ಬಾರಿ ತೀರ್ಮಾನವಾಗಿದ್ದರೂ ಇನ್ನೂ ಕೂಡ ನೀಡಿಲ್ಲ. 208 ಮಂದಿಯ ಗುರುತುಚೀಟಿಯ ಅವಧಿ ಮುಗಿದಿದ್ದರೂ, ಮರು ನೋಂದಣಿಯಾಗಿಲ್ಲ. ಪರ್ಯಾಯ ವ್ಯವಸ್ಥೆಯ ಭಾಗವಾಗಿ ವೆಂಡಿಂಗ್ ಝೋನ್ ರಚನೆಗೊಂಡು ಆತುರಾತುರವಾಗಿ ಉದ್ಘಾಟನೆಗೊಂಡರೂ, ಅದಕ್ಕೆ ಸರಿಯಾದ ರೀತಿಯಲ್ಲಿ ವ್ಯವಸ್ಥೆಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಜಾಥಾವು ಹಂಪನಕಟ್ಟೆ, ಕಂಕನಾಡಿ, ಪಂಪ್‌ವೆಲ್, ಕೆಎಸ್ಸಾರ್ಟಿಸಿ, ಬೊಂದೇಲ್, ಕಾವೂರು, ಸೆಂಟ್ರಲ್ ಮಾರ್ಕೆಟ್ ಸೇರಿದಂತೆ ಸುಮಾರು 15 ಕಡೆಗಳಲ್ಲಿ ಕಾರ್ಯಕ್ರಮಗಳನ್ನು ನೀಡಿ ಲೇಡಿಗೋಷನ್ ಜಂಕ್ಷನ್‌ನಲ್ಲಿ ಸಮಾರೋಪಗೊಂಡಿತು.

ಜಾಥಾದ ಸಮಾರೋಪ ಭಾಷಣ ಮಾಡಿದ ಸಂಘದ ಗೌರವಾಧ್ಯಕ್ಷರಾದ ಸುನಿಲ್ ಕುಮಾರ್ ಬಜಾಲ್ , ಬಡಪಾಯಿ ಬೀದಿಬದಿ ವ್ಯಾಪಾರಸ್ಥರ ಮೇಲೆ ಮನಪಾ ಆಡಳಿತವು ದಾಳಿ ನಡೆಸುತ್ತಿರುವುದು ಖಂಡನೀಯವಾಗಿದೆ. ನಗರದ ಶೇ.5 ರಸ್ತೆಗಳ ಬದಿಯಲ್ಲಿ ಬೀದಿಬದಿ ವ್ಯಾಪಾರಸ್ಥರಿದ್ದು, ಉಳಿದ ಶೇ. 95 ರಸ್ತೆಗಳ ಬದಿಯಲ್ಲಿ ವಾಹನ ಪಾರ್ಕಿಂಗ್ ಇದ್ದು, ಬಹುಮಹಡಿ ಕಟ್ಟಡಗಳ ಮಾಲಕರು ರಸ್ತೆಗಳನ್ನು ಅತಿಕ್ರಮಿಸಿದ್ದರೂ ನಗರದ ಎಲ್ಲಾ ಸಮಸ್ಯೆಗಳಿಗೆ ಬೀದಿಬದಿ ವ್ಯಾಪಾರಸ್ಥರೇ ಕಾರಣ ಎಂದು ಹೇಳುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಜಾಥಾದಲ್ಲಿ ಸಿಐಟಿಯು ಜಿಲ್ಲಾ ಮುಖಂಡರು ಯೋಗೀಶ್ ಜಪ್ಪಿನಮೊಗರು, ಸಂಘದ ಅಧ್ಯಕ್ಷ ಮುಹಮ್ಮದ್ ಮುಸ್ತಫಾ, ಪ್ರಧಾನ ಕಾರ್ಯದರ್ಶಿ ಸಂತೋಷ್ ಆರ್. ಎಸ್, ಜಿಲ್ಲಾ ಮುಖಂಡರಾದ ಮುಹಮ್ಮದ್ ಆಸಿಫ್, ಮುಝಫರ್, ಅಬ್ದುಲ್ ಖಾದರ್, ಹಿತೇಶ್ ಪೂಜಾರಿ, ಆದಂ ಬಜಾಲ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X