Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಯಾಸಿರ್ ಶಾಗೆ ಏಳು ವಿಕೆಟ್: ಪಾಕ್...

ಯಾಸಿರ್ ಶಾಗೆ ಏಳು ವಿಕೆಟ್: ಪಾಕ್ ಗೆಲುವಿಗೆ 188 ರನ್‌ ಗುರಿ

ವಾರ್ತಾಭಾರತಿವಾರ್ತಾಭಾರತಿ4 May 2017 11:04 PM IST
share
ಯಾಸಿರ್ ಶಾಗೆ ಏಳು ವಿಕೆಟ್: ಪಾಕ್ ಗೆಲುವಿಗೆ 188 ರನ್‌ ಗುರಿ

 ಬಾರ್ಬಡೊಸ್, ಮೇ 4: ಲೆಗ್ ಸ್ಪಿನ್ನರ್ ಯಾಸಿರ್ ಶಾ(7-94) ಅವರ ಅಮೋಘ ಬೌಲಿಂಗ್ ನೆರವಿನಿಂದ ಪಾಕಿಸ್ತಾನ ತಂಡ ಇಲ್ಲಿ ನಡೆಯುತ್ತಿರುವ ವೆಸ್ಟ್‌ಇಂಡೀಸ್ ವಿರುದ್ಧದ ಎರಡನೆ ಟೆಸ್ಟ್ ಪಂದ್ಯದ ಗೆಲುವಿಗೆ 188 ರನ್ ಗುರಿ ಪಡೆದಿದೆ.

ಒಂದು ವಿಕೆಟ್ ನಷ್ಟಕ್ಕೆ 41 ರನ್‌ನಿಂದ 2ನೆ ಇನಿಂಗ್ಸ್ ಆರಂಭಿಸಿದ ವಿಂಡೀಸ್ ತಂಡ ಶೈ ಹೋಪ್ ಅವರ ಜೀವನಶ್ರೇಷ್ಠ ಇನಿಂಗ್ಸ್(90 ರನ್) ಹೊರತಾಗಿಯೂ 268 ರನ್‌ಗೆ ಆಲೌಟಾಯಿತು. ಪಾಕ್ ಗೆಲುವಿಗೆ 188 ರನ್ ಗುರಿ ನೀಡಿತು.

5ನೆ ದಿನವಾದ ಗುರುವಾರ ಪಾಕಿಸ್ತಾನ ತಂಡ ವಿಂಡೀಸ್‌ನ ಕೊನೆಯ ವಿಕೆಟ್ ಕಬಳಿಸಿತು. ಅಜೇಯ 16 ರನ್ ಗಳಿಸಿದ್ದ ಬಿಶೂ ನಿನ್ನೆಯ ಮೊತ್ತಕ್ಕೆ 4 ರನ್ ಸೇರಿಸಿ ಯಾಸಿರ್ ಶಾಗೆ ವಿಕೆಟ್ ಒಪ್ಪಿಸಿದರು. ಮೊದಲ ಟೆಸ್ಟ ಪಂದ್ಯವನ್ನು ಜಯಿಸಿ 1-0 ಮುನ್ನಡೆಯಲ್ಲಿರುವ ಪಾಕ್ ತಂಡ ಕೆರಿಬಿಯನ್ ನಾಡಿನಲ್ಲಿ ಮೊತ್ತ ಮೊದಲ ಬಾರಿ ಟೆಸ್ಟ್ ಸರಣಿಯನ್ನು ಜಯಿಸುವ ಯೋಜನೆ ಹಾಕಿಕೊಂಡಿದೆ.

ಜಮೈಕಾದಲ್ಲಿ ನಡೆದಿದ್ದ ಮೊದಲ ಟೆಸ್ಟ್ ಪಂದ್ಯದಲ್ಲಿ ಏಳು ವಿಕೆಟ್ ಗಳನ್ನು ಕಬಳಿಸಿ ಪಾಕ್ ತಂಡಕ್ಕೆ 7 ವಿಕೆಟ್‌ಗಳ ಗೆಲುವು ತಂದುಕೊಟ್ಟು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದ ಶಾ 2ನೆ ಟೆಸ್ಟ್‌ನಲ್ಲೂ ಉತ್ತಮ ಪ್ರದರ್ಶನ ನೀಡಿದ್ದಾರೆ.

ಚೊಚ್ಚಲ ಶತಕ ವಂಚಿತರಾದ ಹೋಪ್ 3 ಬಾರಿ ಅರ್ಧಶತಕ ಜೊತೆಯಾಟ ನಡೆಸಿ ತಂಡಕ್ಕೆ ಆಸರೆಯಾದರು. ಕ್ರೆಗ್ ಬ್ರಾತ್‌ವೇಟ್‌ರೊಂದಿಗೆ 3ನೆ ವಿಕೆಟ್‌ಗೆ 56 ರನ್, ಚೇಸ್‌ರೊಂದಿಗೆ 4ನೆ ವಿಕೆಟ್‌ಗೆ 58 ರನ್ ಹಾಗೂ ವಿಶಾಲ್ ಸಿಂಗ್ ಅವರೊಂದಿಗೆ 5ನೆ ವಿಕೆಟ್‌ಗೆ 80 ರನ್ ಜೊತೆಯಾಟ ನಡೆಸಿ ತಂಡವನ್ನು ಆಧರಿಸಿದರು. ಸಿಂಗ್(32) ವಿಕೆಟ್ ಕಬಳಿಸಿದ ವೇಗದ ಬೌಲರ್ ಮುಹಮ್ಮದ್ ಅಬ್ಬಾಸ್ ಈ ಜೋಡಿಯನ್ನು ಬೇರ್ಪಡಿಸಿದರು.

ಒಂದು ಹಂತದಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 235 ರನ್ ಗಳಿಸಿದ್ದ ವಿಂಡೀಸ್ ಕೇವಲ ಒಂದು ರನ್ ಗಳಿಸುವಷ್ಟರಲ್ಲಿ 3 ವಿಕೆಟ್‌ಗಳನ್ನು ಕಳೆದುಕೊಂಡು ದಿಢೀರ್ ಕುಸಿತ ಕಂಡಿತು. ಹೋಪ್, ಸಿಂಗ್ ಹಾಗೂ ಹೋಲ್ಡರ್ ಬೆನ್ನುಬೆನ್ನಿಗೆ ಔಟಾದರು.

ವಿದಾಯದ ಟೆಸ್ಟ್ ಸರಣಿ ಆಡುತ್ತಿರುವ ನಾಯಕ ಮಿಸ್ಬಾವುಲ್ ಹಕ್ ಹಾಗೂ ಯೂನಿಸ್ ಖಾನ್ 50ಕ್ಕೂ ಅಧಿಕ ಕ್ಯಾಚ್ ಪಡೆದ ಅತ್ಯಂತ ಹಿರಿಯ ಕ್ರಿಕೆಟಿಗರೆಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಪಾಕ್ ಪರ ಸ್ಪಿನ್ನರ್ ಯಾಸಿರ್ ಶಾ ಯಶಸ್ವಿ ಬೌಲರ್ ಎನಿಸಿಕೊಂಡರೆ, ಮುಹಮ್ಮದ್ ಅಬ್ಬಾಸ್ 57 ರನ್‌ಗೆ 2 ವಿಕೆಟ್ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X