Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಇ-ಪುಸ್ತಕೋದ್ಯಮ ಬೆಳೆಸುವ ಕೆಲಸಕ್ಕೆ...

ಇ-ಪುಸ್ತಕೋದ್ಯಮ ಬೆಳೆಸುವ ಕೆಲಸಕ್ಕೆ ಸಿದ್ಧ: ಚಂದ್ರಶೇಖರ ಕಂಬಾರ

ವಾರ್ತಾಭಾರತಿವಾರ್ತಾಭಾರತಿ4 May 2017 11:47 PM IST
share
ಇ-ಪುಸ್ತಕೋದ್ಯಮ ಬೆಳೆಸುವ ಕೆಲಸಕ್ಕೆ ಸಿದ್ಧ: ಚಂದ್ರಶೇಖರ ಕಂಬಾರ

ಬೆಂಗಳೂರು, ಮೇ 4: ಇ-ಪುಸ್ತಕಗಳನ್ನು ಸಾರ್ವಜನಿಕವಾಗಿ ಬೆಳೆಸುವ ಉದ್ದೇಶದಿಂದ ಸರಕಾರದಿಂದ ಕೈಗೊಳ್ಳಬೇಕಾದ ಕೆಲಸಗಳಿಗೆ ತಾನು ನೇತೃತ್ವ ವಹಿಸಿಕೊಳ್ಳುತ್ತೇನೆ ಎಂದು ಜ್ಞಾನಪೀಠ ಪುರಸ್ಕೃತ ಹಾಗೂ ಹಿರಿಯ ಸಾಹಿತಿ ಚಂದ್ರಶೇಖರ ಕಂಬಾರ ತಿಳಿಸಿದ್ದಾರೆ.

ನಗರದ ಸೆಂಟ್ರಲ್ ಕಾಲೇಜಿನ ಕರ್ನಾಟಕ ಸಾಹಿತ್ಯ ಅಕಾಡಮಿ ಸಭಾಂಗಣದಲ್ಲಿ ಸಾಹಿತ್ಯ ಅಕಾಡಮಿ ಮತ್ತು ಕರ್ನಾಟಕ ಪ್ರಕಾಶಕರ ಸಂಘದಿಂದ ಆಯೋಜಿಸಿದ್ದ ಇ-ಪ್ರಕಾಶನ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮಲ್ಲಿ ಬಹುತೇಕ ಜನರಿಗೆ ಇ-ಪುಸ್ತಕದ ಕುರಿತು ಅರಿವೇ ಇಲ್ಲ. ಹೀಗಾಗಿ ಜನರಿಗೆ ಇ-ಪುಸ್ತಕ ಮಾರಾಟದ ಜೊತೆಗೆ ಲೇಖಕರ ಹಾಗೂ ಪ್ರಕಾಶಕರ ಜವಾಬ್ದಾರಿಯ ಕುರಿತು ಕಾನೂನು ಏನು ಹೇಳುತ್ತದೆ ಎಂಬ ಅಂಶವನ್ನು ತಿಳಿಸಬೇಕಾದ ಅಗತ್ಯವಿದೆ ಎಂದ ಅವರು, ತನಗೆ ನಾಡಿನ ಖ್ಯಾತ ಸಾಹಿತಿ ಪೂರ್ಣಚಂದ್ರತೇಜಸ್ವಿ ಇ-ಪುಸ್ತಕದ ಹುಚ್ಚನ್ನು ಹಿಡಿಸಿದ್ದರು ಎಂದು ನೆನಪಿಸಿಕೊಂಡರು.

ರಾಜ್ಯದ 1,018 ಗ್ರಾಪಂಗಳಲ್ಲಿನ ಗ್ರಂಥಾಲಯಗಳಲ್ಲಿ ಈಗಾಗಲೇ ಇ-ಪುಸ್ತಕಗಳಿದ್ದು, 1,600 ಕನ್ನಡ ಪುಸ್ತಕಗಳು ಲಭ್ಯವಿದೆ. ಯುವಜನರು ಈ ಪುಸ್ತಕಗಳ ಬಗ್ಗೆ ಬಹಳಷ್ಟು ಉತ್ಸಾಹ ತೋರಿಸುತ್ತಿದ್ದಾರೆ ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ.ಸತೀಶ್ ಕುಮಾರ್ ಹೊಸಮನಿ ತಿಳಿಸಿದರು.

ಕನ್ನಡ ಸಲಹಾ ಮಂಡಳಿ ಸಂಚಾಲಕ ಡಾ.ನರಹಳ್ಳಿ ಬಾಲಸುಬ್ರಮಣ್ಯಂ ಮಾತನಾಡಿ, ರಾಜ್ಯ ಸರಕಾರ ಇ-ಪುಸ್ತಕವನ್ನು ಬೆಳೆಸುವ ಉದ್ದೇಶದಿಂದ ಸಮಿತಿ ರಚಿಸಿ 2 ಕೋಟಿ ರೂ. ಖರ್ಚು ಮಾಡಿದ್ದರೂ ಏನೂ ಪ್ರಯೋಜನವಾಗಿಲ್ಲ. ಹೀಗಾಗಿ ನಾವೇ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಇ-ಪುಸ್ತಕಕ್ಕೆ ಸಂಬಂಧಿಸಿದಂತೆ ಆಗಬೇಕಾದ ಕೆಲಸಗಳಿಗೆ ಕ್ರಿಯಾ ಯೋಜನೆ ರೂಪಿಸಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಕರ್ನಾಟಕ ಪ್ರಕಾಶಕರ ಸಂಘದ ಅಧ್ಯಕ್ಷರಾದ ಪ್ರಕಾಶ್ ಕಂಬತ್ತಹಳ್ಳಿ ಮಾತನಾಡಿ, ಇ-ಪುಸ್ತಕಕ್ಕೆ ಸಂಬಂಧಿಸಿದಂತೆ ಲೇಖಕರು ಮತ್ತು ಪ್ರಕಾಶಕರಿಗೆ ತಮ್ಮ ಹೊಣೆ ಏನು ಎನ್ನುವುದು ಗೊತ್ತಿಲ್ಲ. ಇದಕ್ಕೆ ಇರುವ ಕಾನೂನು ಚೌಕಟ್ಟುಗಳ ಕುರಿತಂತೆ ಮಾಹಿತಿಯು ಇಲ್ಲ. ಈ ಎಲ್ಲಾ ವಿಚಾರಗಳ ಬಗ್ಗೆ ಅರಿವು ಮೂಡಿಸಬೇಕಾಗಿದೆ ಎಂದು ಅಭಿಪ್ರಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X