Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವೈವಿಧ್ಯ
  3. ಯುವ ಸ್ಪಂದನ ಯುವ ಜನರಿಂದ.. ಯುವ...

ಯುವ ಸ್ಪಂದನ ಯುವ ಜನರಿಂದ.. ಯುವ ಜನರಿಗಾಗಿ...

ಬಿ.ಶಿವಕುಮಾರ್, ಉಡುಪಿ.ಬಿ.ಶಿವಕುಮಾರ್, ಉಡುಪಿ.5 May 2017 12:08 AM IST
share
ಯುವ ಸ್ಪಂದನ ಯುವ ಜನರಿಂದ.. ಯುವ ಜನರಿಗಾಗಿ...

ಯಾವುದೇ ದೇಶ ಅಭಿವೃದ್ಧಿ ಹೊಂದಲು ಮತ್ತು ಬಲಿಷ್ಠಗೊಳ್ಳಲು ಅಲ್ಲಿನ ಯುವಜನ ಸಂಪತ್ತು ಅತ್ಯಂತ ಪ್ರಮುಖವಾದ ಶಕ್ತಿ. ಇಡೀ ವಿಶ್ವದಲ್ಲಿ ಭಾರತದಲ್ಲಿ ಅತ್ಯಕ ಸಂಖ್ಯೆಯಲ್ಲಿ 15 ರಿಂದ 30 ವರ್ಷದೊಳಗಿನ ಯುವಜನರಿದ್ದಾರೆ, ಯುವ ಜನರಿಗೆ ಒಂದು ಸಮಗ್ರ ಭಾವನಾತ್ಮಕ ಮಾನಸಿಕ ಮತ್ತು ಮನೋ ಸಾಮಾಜಿಕ ಬೆಂಬಲ ಸೇವೆಗಳನ್ನು ನೀಡುವ ಗುರಿಯೊಂದಿಗೆ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕ ಸರಕಾರ ಯುವ ಜನರಿಗಾಗಿ ‘ಯುವ ಸ್ಪಂದನ’ ಎಂಬ ಕಾರ್ಯಕ್ರಮ ಅನುಷ್ಠಾನ ಮಾಡಿದೆ.

ಯುವ ಜನರಿಗಾಗಿ ಸುರಕ್ಷಿತ ಕುಟುಂಬ ಮತ್ತು ಸಮಾಜ ನಿರ್ಮಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.

 ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನ ಆರೋಗ್ಯ ಕೇಂದ್ರ, ಎಪಿಡೀಮಿಯಾಲಜಿ ವಿಭಾಗ ನಿಮ್ಹಾನ್ಸ್ ಅವರ ಸಹಯೋಗದಲ್ಲಿ ಅನುಷ್ಠಾನಗೊಂಡಿರುವ ಈ ಯೋಜನೆಯಲ್ಲಿ 15 ರಿಂದ 30 ವರ್ಷದೊಳಗಿನ ವಯೋಮಾನದ ಯುವ ಜನರ ಯಾವುದೇ ಸಮಸ್ಯೆಗಳಿಗೆ ಮಾರ್ಗದರ್ಶನ ಮತ್ತು ಆಪ್ತ ಸಮಾಲೋಚನೆಯನ್ನು ಒದಗಿಸುತ್ತದೆ.

ರಾಜ್ಯದ ಪ್ರತೀ ಜಿಲ್ಲೆಯಲ್ಲಿ ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗಿದ್ದು, ಇದಕ್ಕಾಗಿ ರಾಜ್ಯದ ಪ್ರತೀ ಜಿಲ್ಲೆಯಲ್ಲಿ 30 ಮಂದಿ ಸಮಾಲೋಚಕರನ್ನು ನೇಮಿಸಲಾಗಿದೆ. ಅಲ್ಲದೆ ಸ್ಥಳೀಯ ಯುವ ಜನತೆಯನ್ನೇ, ಯುವ ಪರಿವರ್ತಕರು ಮತ್ತು ಯುವ ಮಿತ್ರರನ್ನಾಗಿ ನೇಮಿಸಲಾಗಿದ್ದು, ಅವರಿಗೆ ಪ್ರತೀ ತಿಂಗಳು ಗೌರವಧನ ಪಾವತಿಸಲಾಗುತ್ತಿದೆ. ಪ್ರತೀ ಜಿಲ್ಲೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಯುವ ಸ್ಪಂದನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

 ಈ ಕೇಂದ್ರಗಳಲ್ಲಿ, ದೈಹಿಕ, ಮಾನಸಿಕ, ಆಧ್ಯಾತ್ಮಿಕ ಆರೋಗ್ಯ, ಸಕಾರಾತ್ಮಕ ಚಿಂತನೆ ಹಾಗೂ ವ್ಯಸನಗಳಿಂದ ಮುಕ್ತರಾಗಿ ಆರೋಗ್ಯಕರ ಜೀವನ ಶೈಲಿ ಅಳವಡಿಸಿಕೊಳ್ಳಲು ಯುವಕರಿಗೆ ನೆರವು ನೀಡಲಾಗುತ್ತದೆ.

ಯುವ ಜನತೆ, ತಮ್ಮ ತಂದೆ ತಾಯಿಯರ ಜೊತೆಗಿನ ಸಂಬಂಧ, ಅಂತರಪೀಳಿಗೆಯ ಸಂಬಂಧಗಳು, ವೈವಾಹಿಕ ಸಂಬಂಧ, ಪ್ರೇಮ ಸಂಬಂಧ, ಸಹೋದ್ಯೋಗಿಗಳ ಸಂಬಂಧ ಮತ್ತು ಆರೋಗ್ಯಯುತ ಸಂವಹನ ನಡೆಸುವ ಕುರಿತು ಮಾಹಿತಿ ನೀಡಲಾಗುವುದು.

ಯುವಕರು, ಜೀವನದಲ್ಲಿ ನಿರ್ದಿಷ್ಟ ಗುರಿ ನಿರ್ಧರಿಸುವ ಬಗ್ಗೆ, ಏಕಾಗ್ರತೆ, ನೆನಪಿನ ಶಕ್ತಿ, ಸಮಯ ನಿರ್ವಹಣೆ, ಪರೀಕ್ಷೆ ನಿರ್ವಹಣೆ, ಶಿಕ್ಷಣದ ಒತ್ತಡಗಳನ್ನು, ವೈಲ್ಯಗಳನ್ನು ನಿಭಾಯಿಸುವ ಕುರಿತು ತರಬೇತಿ ನೀಡಲಾಗುವುದು.

ಮೇಲಿನ ಯಾವುದೇ ಸಮಸ್ಯೆಗಳಿದ್ದಲ್ಲಿ, ಸಂಬಂಸಿದ ಯುವ ಜನರಿಗೆ ದೂರವಾಣಿ ಮುಖಾಂತರ, ವೈಯಕ್ತಿಕವಾಗಿ ಮತ್ತು ಆಪ್ತ ಸಮಾಲೋಚನೆ ಮೂಲಕ, ಕಾರ್ಯಾಗಾರಗಳು ಮತ್ತು ತರಬೇತಿ ಮೂಲಕ ಮತ್ತು ತಜ್ಞರೊಂದಿಗೆ ಸಲಹಾ ಶಿಬಿರಗಳ ಮೂಲಕ ನೆರವು ನೀಡಲಾಗುವುದು.

ಈ ಎಲ್ಲಾ ಸೇವೆಗಳನ್ನು ಸಂಪೂರ್ಣ ಉಚಿತವಾಗಿ ಯುವಜನರಿಗೆ ನೀಡಲಾಗುತ್ತಿದ್ದು, ತಮ್ಮ ಜಿಲ್ಲೆಯ ಯುವ ಸ್ಪಂದನ ಕೇಂದ್ರಕ್ಕೆ ತೆರಳಿ ಪ್ರಯೋಜನ ಪಡೆಯಬಹುದು.

ಆಗಸ್ಟ್ 16 ರಲ್ಲಿ ಜಾರಿಗೆ ಬಂದ ಈ ಕಾರ್ಯಕ್ರಮದಲ್ಲಿ ಇದುವರೆಗೆ ರಾಜ್ಯಾದ್ಯಾಂತ ಒಟ್ಟು 4,329 ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದ್ದು, 7,73,288 ಯುವ ಜನರು ಪ್ರಯೋಜನ ಪಡೆದಿದ್ದಾರೆ, ಉಡುಪಿ ಜಿಲ್ಲೆಯಲ್ಲಿ 54 ಅರಿವು ಕಾರ್ಯಕ್ರಮಗಳ ಮೂಲಕ 14,587 ಯುವ ಜನರಿಗೆ ಈ ಯೋಜನೆಯ ಪ್ರಯೋಜನ ತಲುಪಿಸಲಾಗಿದೆ.

ಯುವ ಜನ ಸ್ನೇಹಿ, ಯುವ ಜನ ಉದ್ದೇಶಿತ ಮತ್ತು ಯುವ ಸಬಲೀಕರಣಗೊಳಿಸುವ ಈ ಕೇಂದ್ರದ ಪ್ರಯೋಜನವನ್ನು ಪ್ರತಿಯೊಬ್ಬ ಯುವ ಜನರು ಪಡೆಯಬೇಕಿದೆ. ಹೆಚ್ಚಿನ ಮಾಹಿತಿಗಾಗಿ ತಮ್ಮ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ.

share
ಬಿ.ಶಿವಕುಮಾರ್, ಉಡುಪಿ.
ಬಿ.ಶಿವಕುಮಾರ್, ಉಡುಪಿ.
Next Story
X