Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿರ್ಭಯಾ ಪ್ರಕರಣದ ‘ಅಪ್ರಾಪ್ತ’ ಅಪರಾಧಿ...

ನಿರ್ಭಯಾ ಪ್ರಕರಣದ ‘ಅಪ್ರಾಪ್ತ’ ಅಪರಾಧಿ ಈಗೇನು ಮಾಡುತ್ತಿದ್ದಾನೆ ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ6 May 2017 3:57 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ನಿರ್ಭಯಾ ಪ್ರಕರಣದ ‘ಅಪ್ರಾಪ್ತ’ ಅಪರಾಧಿ ಈಗೇನು ಮಾಡುತ್ತಿದ್ದಾನೆ ಗೊತ್ತೇ?

ಹೊಸದಿಲ್ಲಿ, ಮೇ 6: ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದಲ್ಲಿ ದೋಷಿಯೆಂದು ಘೋಷಿಸಲ್ಪಟ್ಟಿದ್ದ ಹಾಗೂ ಘಟನೆ ನಡೆದಾಗ ಅಪ್ರಾಪ್ತ ವಯಸ್ಕನಾಗಿದ್ದ ಯುವಕ ಬಾಲ ನ್ಯಾಯ ಮಂಡಳಿಯ ಆದೇಶದಂತೆ ಮೂರು ವರ್ಷಗಳ ಕಾಲ ಪುರ್ನವಸತಿ ಕೇಂದ್ರವೊಂದರಲ್ಲಿದ್ದು ಬಿಡುಗಡೆಗೊಂಡು ಈಗ ಆ ಘಟನೆಯ ನಂತರದ ಬೆಳವಣಿಗೆಗಳ ಬಗ್ಗೆ ಪರಿವೆಯೇ ಇಲ್ಲದೆ ದಕ್ಷಿಣದ ರೆಸ್ಟೋರೆಂಟ್ ಒಂದರಲ್ಲಿ ಅಡುಗೆಯಾಳಾಗಿ ಕೆಲಸ ಮಾಡುತ್ತಿದ್ದಾನೆ. ಆತನಿಗೀಗ 23 ವರ್ಷ ವಯಸ್ಸು.

‘‘ತನ್ನನ್ನು ಹೊಡೆದು ಸಾಯಿಸಬಹುದೆನ್ನುವ ಭಯ ಆತನನ್ನು ಯಾವತ್ತೂ ಕಾಡುತ್ತಿತ್ತು. ಇದೀಗ ಘಟನೆಯ ಅಪರಾಧಿಗಳಿಗೆ ಗಲ್ಲು ಶಿಕ್ಷೆಯಾಗಿರುವುದರಿಂದ ಎಲ್ಲರ ಗಮನ ಆತನ ಕಡಗೆ ಮತ್ತೆ ಹರಿಯಬಹುದೆನ್ನುವ ಭಯದಿಂದ ಆತನನ್ನು ಬಹಳ ದೂರು ಕರೆದುಕೊಂಡು ಹೋಗಿದ್ದೇವೆ. ಆತ ಕೆಲಸ ಮಾಡುವಲ್ಲಿನ ಮಾಲಕನಿಗೂ ಆತನ ಹಿನ್ನೆಲೆಯ ಬಗ್ಗೆ ತಿಳಿದಿಲ್ಲ’’ ಎಂದು ಆತನ ಪುರ್ನವಸತಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎನ್‌ಜಿಒ ಒಂದರ ಅಧಿಕಾರಿ ಮಾಹಿತಿ ನೀಡಿದ್ದಾರೆ. ಇದಕ್ಕಿಂತ ಹೆಚ್ಚಿನ ಮಾಹಿತಿಯನ್ನು ಅವರು ಬಹಿರಂಗಗೊಳಿಸಿಲ್ಲ ಎಂದು ಹಿಂದುಸ್ತಾನ್ ಟೈಮ್ಸ್ ವರದಿಯೊಂದು ಹೇಳಿದೆ.

ಡಿಸೆಂಬರ್ 20, 2015ರಂದು ಆತನ ಬಿಡುಗಡೆಯಾದ ನಂತರ ಸ್ವಲ್ಪ ದಿನ ಆತ ಎನ್‌ಜಿಒ ಒಂದರ ರಕ್ಷಣೆಯಲ್ಲಿದ್ದ ಎಂದೂ ಅವರು ತಿಳಿಸಿದ್ದಾರೆ.

ಈ ಯುವಕನ ಹಿನ್ನೆಲೆ ಹೆಚ್ಚಿನವರಿಗೆ ತಿಳಿದಿಲ್ಲ ಎನ್ನುವ ಅವರು, ಆತ ದಿಲ್ಲಿಯಿಂದ 240 ಕಿ.ಮೀ. ದೂರದಲ್ಲಿರುವ ತನ್ನ ಮನೆಯಿಂದ 11 ವರ್ಷದವನಿದ್ದಾಗ ಓಡಿ ಬಂದಿದ್ದ ಹಾಗೂ ಅಲ್ಲಿ ರಾಮ್ ಸಿಂಗ್ ಮತ್ತಿತರರ ಪರಿಚಯ ಆತನಿಗಾಗಿತ್ತು. ನಿರ್ಭಯಾಳ ಮೇಲೆ ಅತ್ಯಾಚಾರ ನಡೆದ ಬಸ್ಸನ್ನು ಆತ ಸ್ವಚ್ಛಗೊಳಿಸುವ ಕೆಲಸ ಮಾಡುತ್ತಿದ್ದ ಹಾಗೂ ಅದರ ಬದಲಾಗಿ ಅವರು ಆತನಿಗೆ ಆಹಾರ ನೀಡುತ್ತಿದ್ದರು. ಘಟನೆ ನಡೆದ ರಾತ್ರಿ ಕೂಡ ರಾಮ್ ಸಿಂಗ್ ಮತ್ತಿತರರು ಆತನನ್ನು ತಮ್ಮೊಂದಿಗೆ ಬರುವಂತೆ ಹೇಳಿದ್ದರು. ಆತನ ಕುಟುಂಬ ಈಗಲೂ ಅದೇ ಗ್ರಾಮದಲ್ಲಿದ್ದು ಆತನ ಹಿರಿಯ ಸಹೋದರಿ ತನ್ನ ಅನಾರೋಗ್ಯಪೀಡಿತ ತಾಯಿ, ಹಾಸಿಗೆ ಹಿಡಿದಿರುವ ತಂದೆ ಹಾಗೂ ಸಹೋದರಿಯರನ್ನು ಸಲಹುತ್ತಿದ್ದಾಳೆ.

ಆತನನ್ನು ಪುನರ್ವಸತಿ ಕೇಂದ್ರಕ್ಕೆ ಸೇರಿಸಿದ ಮೇಲೆ ಧಾರ್ಮಿಕತೆ ಮೈಗೂಡಿಸಿಕೊಂಡಿದ್ದನೆಂದು ಆ ಅಧಿಕಾರಿ ಹೇಳಿದ್ದಾರೆ. ಮೊದಮೊದಲು ಯಾರೊಂದಿಗೂ ಬೆರೆಯದೇ ಇದ್ದ ಆತ ಕ್ರಮೇಣ ಇತರರೊಂದಿಗೆ ಮಾತನಾಡಲಾರಂಭಿಸಿದ ಹಾಗೂ ಆಹಾರ ತಯಾರಿಸಿದಾಗಲೆಲ್ಲಾ ಅದನ್ನು ಸ್ವಾದಿಷ್ಟಭರಿತವಾಗಿಸಲು ಕೊನೆ ಕ್ಷಣದ ಕೆಲವೊಂದು ಮಾರ್ಪಾಟುಗಳನ್ನು ಮಾಡುತ್ತಿದ್ದನೆಂದು ಆ ಅಧಿಕಾರಿ ನೆನಪಿಸಿಕೊಂಡಿದ್ದಾರೆ. ಅನಕ್ಷರಸ್ಥನಾಗಿದ್ದ ಆತ ಪುರ್ನವಸತಿ ಕೇಂದ್ರದಲ್ಲಿ ತನ್ನ ಹೆಸರು ಬರೆಯುವುದನ್ನು ಕಲಿತಿದ್ದ ಎಂದೂ ಅವರು ಹೇಳಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X