Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಡಿಬಿ ಯೋಜನೆ ಹಣ ದುರುಪಯೋಗ :...

ಎಡಿಬಿ ಯೋಜನೆ ಹಣ ದುರುಪಯೋಗ : ಸಾರ್ವಜನಿಕರ ಆತಂಕ

ಎಡಿಬಿ ಯೋಜನೆ ಕುರಿತು ಸಮಾಲೋಚನಾ ಸಭೆ

ವಾರ್ತಾಭಾರತಿವಾರ್ತಾಭಾರತಿ6 May 2017 11:54 PM IST
share

ಮಂಗಳೂರು, ಮೇ 6: ಎಡಿಬಿ (ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್) ಮೂಲಕ ಕೈಗೆತ್ತಿಕೊಳ್ಳಲಾಗುವ ಕಾಮಗಾರಿಗಳಿಂದ ಪ್ರತೀ ಹಂತದಲ್ಲೂ ನಾಗರಿಕರ, ತೆರಿಗೆ ಪಾವತಿದಾರರ ಹಣ ದುರುಪಯೋಗವಾಗುತ್ತಿದೆ ಎಂಬ ಆತಂಕ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದರು.

ಇಂದು ನಗರದ ರೋಶನಿ ನಿಲಯದ ಸಭಾಂಗಣದಲ್ಲಿ ಸಿಟಿಝನ್ ಪೋರಂ ಫೋರ್ ಮಂಗಳೂರು ಡೆವಲಪ್‌ಮೆಂಟ್ ವತಿಯಿಂದ ಎಡಿಬಿ ಯೋಜನೆ ಕುರಿತು ಆಯೋಜಿಸಲಾದ ಸಮಾಲೋಚನಾ ಸಭೆಯಲ್ಲಿ ನಾಗರಿಕರಿಂದ ಈ ಬಗ್ಗೆ ಆತಂಕ ವ್ಯಕ್ತವಾಯಿತು.

ಎಡಿಬಿ ಯೋಜನೆಯಲ್ಲಿ ಕಾರ್ಯ ನಿರ್ವಹಿಸಿದ್ದ ಪದ್ಮನಾಭ ಉಳ್ಳಾಲ ಎಂಬವರು ಮಾತನಾಡಿ, ಎಡಿಬಿ ಯೋಜನೆಯಡಿ 2026ರವರೆಗೆ ಮಂಗಳೂರು, ಉಡುಪಿ ನಗರದ ಜನರಿಗೆ ನಿರಂತರ ನೀರು ಪೂರೈಕೆಯೂ ಸೇರಿದೆ. ಆದರೆ, ಪ್ರಸ್ತುತ ಮಂಗಳೂರು ತುಂಬೆ ಅಣೆಕಟ್ಟಿನಿಂದ 1,600 ಲಕ್ಷ ಲೀ. ನೀರು ಪಂಪ್ ಆಗುತ್ತಿದೆ. ನಗರಕ್ಕೆ ಬೇಕಿರುವ ಬೇಡಿಕೆ 1,300 ಲಕ್ಷ ಲೀ., ಉಳಿದ 300 ಲಕ್ಷ ಲೀ. ನೀರು ಎಲ್ಲಿ ಹೋಗುತ್ತಿದೆ ಎಂಬ ಮಾಹಿತಿಯೇ ಇಲ್ಲ. ಯೋಜನೆಯ ಹಂತದಲ್ಲೇ ಈ ಪರಿಸ್ಥಿತಿಯಾದರೆ, ಮುಂದೇನು ಎಂಬ ಬಗ್ಗೆ ಗಂಭೀರವಾಗಿ ಆಲೋಚನೆ ಮಾಡಬೇಕಿದೆ.

ಘನತ್ಯಾಜ್ಯ ನಿರ್ವಹಣೆ ಕರ ಮೂರು ಪಟ್ಟು ಹೆಚ್ಚಾಗಿ ನಾಗರಿಕರಿಂದ ವಸೂಲು ಮಾಡಲಾಗುತ್ತಿದೆ. ಹಾಗಿದ್ದರೂ ತ್ಯಾಜ್ಯ ನಿರ್ವಹಣೆ ಮಾತ್ರ ಸಮರ್ಪಕವಾಗಿಲ್ಲ ಎಂದವರು ಹೇಳಿದರು. ಯೋಜನೆಯ ನಿಗದಿತ ಅವಧಿಯಲ್ಲಿ ಕಾಮಗಾರಿಗಳು ಪೂರ್ಣಗೊಳ್ಳದಿದ್ದರೂ ತಮ್ಮ ಸಾಲ ಬಡ್ಡಿ ಸಹಿತವಾಗಿ ವಾಪಸ್ ದೊರೆಯುವ ಖಾತರಿ ಎಡಿಬಿಗೆ ಇದೆ. ಆದರೆ ಇದರಿಂದ ನಷ್ಟ ಅನುಭವಿಸಬೇಕಾದವರು ಸ್ಥಳೀಯಾಡಳಿತದ ಜತೆಗೆ ಜನತೆ ಮಾತ್ರ ಎಂದು ಎಡಿಬಿ ಪ್ರಾಯೋಜಿತ ಸಾಲ ಯೋಜನೆಯ ಎನ್‌ಜಿಒ ಟಾಸ್ಕ್‌ಫೋರ್ಸ್‌ನ ರಾಘವನ್ ಅಭಿಪ್ರಾಯ ವ್ಯಕ್ತಪಡಿಸಿದರು.

ಸಭೆಯಲ್ಲಿ ಸಿಟಿಝನ್ ಪೋರಂನ ನಟೇಶ್ ಉಳ್ಳಾಲ್ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಗಳ ಪಾತ್ರದ ಬಗ್ಗೆ ಮಾತನಾಡಿದರು. ‘ನೆರವು’ ಎಂಬ ಹೆಸರಿನಲ್ಲಿ ಎಡಿಬಿಯಡಿ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಆದರೆ, ವಾಸ್ತವದಲ್ಲಿ ಅದು ನೆರವಿನ ಯೋಜನೆಯಲ್ಲ. ಬದಲಾಗಿ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ನಿಂದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಪಡೆಯಲಾಗುವ ಸಾಲವನ್ನು ಬಡ್ಡಿ ಸಹಿತವಾಗಿ ನಾವು ಪಾವತಿಸಬೇಕಾಗುತ್ತದೆ. ಮುಂದೆ ಈ ಸಾಲವನ್ನು ತೀರಿಸಲು ಸಾಧ್ಯವಾಗದಾಗ ನಮ್ಮ ಭೂಮಿ, ನಮ್ಮ ಸಂಪತ್ತನ್ನೇ ಅಡವಿಡಬೇಕಾದ ಪರಿಸ್ಥಿತಿಯೂ ಎದುರಾಗಬಹುದು ಎಂದವರು ಆತಂಕ ವ್ಯಕ್ತಪಡಿಸಿದರು.

ಎಡಿಬಿ ಯೋಜನೆಯಡಿ ಮಾಡಬಹುದಾದ ಕಾಮಗಾರಿಗಳನ್ನು ನಮ್ಮಲ್ಲೇ ಲಭ್ಯವಿರುವ ಬ್ಯಾಂಕ್‌ಗಳಿಂದ ಸಾಲವನ್ನು ಪಡೆದು ನಮ್ಮ ಯುವ ತಂತ್ರಜ್ಞರನ್ನೇ ಬಳಸಿಕೊಂಡು ಮಾಡಲು ಸಾಧ್ಯವಿದೆ ಎಂದು ಉಳ್ಳಾಲ ಸಮ್ಮರ್ ಸ್ಯಾಂಡ್ ರೆಸಾರ್ಟ್‌ನ ಆಡಳಿತ ನಿರ್ದೇಶಕ ಅಲೋಶಿಯಸ್ ಅಲ್ಬುಕರ್ಕ್ ಅಭಿಪ್ರಾಯಿಸಿದರು. ಎಡಿಬಿ ಯೋಜನೆಯಿಂದ ಲಾಭಕ್ಕಿಂತಲೂ ನಾಗರಿಕರ ಮೇಲೆ ಹೊರೆಯೇ ಅಧಿಕ ಎಂದು ಉದ್ಯಮಿ ಸುಮಿತ್ ರಾವ್ ಅಭಿಪ್ರಾಯ ವ್ಯಕ್ತಪಡಿಸಿದರು.

ಮಂಗಳೂರಿನಲ್ಲಿ ಎಡಿಬಿ ಪ್ರಾಯೋಜಿತ ಮೂಲಭೂತ ಸೌಲಭ್ಯ ಯೋಜನೆಗಳ ಕುರಿತಂತೆ ಸಂಶೋಧನಾ ವಿದ್ಯಾರ್ಥಿಗಳಾದ ಜಿಲ್ಲಿಯನ್ ಫ್ಲನಾಂಗನ್, ಅಮನ್ ಅಹ್ಮದ್ ಮತ್ತು ಮ್ಹವಾಶ್ ಸೈಯದ್ ಪರಿಚಯ ನೀಡಿದರು. ಸಿಟಿಝನ್ ಫೋರಂನ ವಿದ್ಯಾ ದಿನಕರ್ ಸ್ವಾಗತಿಸಿದರು. ಪ್ರೊ.ರಾಮಚಂದ್ರ ಭಟ್ ಚರ್ಚಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X