Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫತ್ವಾಗಳನ್ನು ಹೊರಡಿಸುವವರ ವಿರುದ್ಧ ಕ್ರಮ...

ಫತ್ವಾಗಳನ್ನು ಹೊರಡಿಸುವವರ ವಿರುದ್ಧ ಕ್ರಮ : ಸರಕಾರಕ್ಕೆ ಸೋನು ನಿಗಮ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ7 May 2017 2:54 PM IST
share
ಫತ್ವಾಗಳನ್ನು ಹೊರಡಿಸುವವರ ವಿರುದ್ಧ ಕ್ರಮ : ಸರಕಾರಕ್ಕೆ ಸೋನು ನಿಗಮ್ ಆಗ್ರಹ

ಹೊಸದಿಲ್ಲಿ,ಮೇ 7: ಕಳೆದ ತಿಂಗಳು ಮಸೀದಿಗಳಲ್ಲಿ ಅಝಾನ್‌ಗೆ ಧ್ವನಿವರ್ಧಕಗಳ ಬಳಕೆಯ ವಿರುದ್ಧ ಟ್ವೀಟಿಸುವ ಮೂಲಕ ರಾಷ್ಟ್ರಾದ್ಯಂತ ವಿವಾದವನ್ನು ಸೃಷ್ಟಿಸಿದ್ದ ಗಾಯಕ ಸೋನು ನಿಗಮ್ ಅವರು ಈಗ ‘ಫತ್ವಾ’ದ ರೂಪದಲ್ಲಿ ಜೀವ ಬೆದರಿಕೆಗಳನ್ನು ಒಡ್ಡಿದ್ದವರ ವಿರುದ್ಧ ಕ್ರಮವನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ.

ರಜತ್ ಶರ್ಮಾ ಅವರ ಟಿವಿ ಕಾರ್ಯಕ್ರಮ ‘ಆಪ್ ಕಿ ಅದಾಲತ್ ’ನಲ್ಲಿ ಅವರೊಂದಿಗೆ ಮಾತನಾಡುತ್ತಿದ್ದ ನಿಗಮ್, ‘‘ಸರ್ವವ್ಯಾಪಿಯಾಗಿರುವ ದೇವರನ್ನು ನಾನು ನಂಬುತ್ತೇನೆ. ಆದರೆ ಇನ್ನೋರ್ವ ವ್ಯಕ್ತಿಯ ತಲೆ ಬೋಳಿಸು, ಅವನನ್ನು ಕೊಲ್ಲು ಎಂದೆಲ್ಲ ಯಾರಾದರೂ ಫತ್ವಾ ಹೊರಡಿಸುವ ಈ ಮನೋಸ್ಥಿತಿಯು ನನಗೆ ಇಷ್ಟವಿಲ್ಲ. ನನ್ನ ತಲೆ ತೆಗೆಯಲೂ ಫತ್ವಾ ಹೊರಬಿದ್ದಿತ್ತು. ನನ್ನ ಅಭಿಪ್ರಾಯದಲ್ಲಿ ಇಂತಹ ಫತ್ವಾಗಳ ವಿರುದ್ಧ ಸರಕಾರವೇನಾದರೂ ಮಾಡಬೇಕು ’’ಎಂದು ಹೇಳಿದರು.

 ‘‘ನಾವು ನಾಗರಿಕ ಮತ್ತು ಪ್ರಜಾಸತ್ತಾತ್ಮಕ ದೇಶದಲ್ಲಿ ಬದುಕುತ್ತಿದ್ದೇವೆ. ನಮ್ಮದು ಪ್ರಜಾಪ್ರಭುತ್ವ. ಫತ್ವಾದಂತಹ ವಿಷಯಗಳಿಗೆ ನಾವು ಹೇಗೆ ಅವಕಾಶ ಕೊಡಬಲ್ಲೆವು? ಗೋರಕ್ಷಕರಿಂದ ಜನರ ಹತ್ಯೆಗಳನ್ನೂ ನಾನು ವಿರೋಧಿಸುತ್ತೇನೆ. ನಾವು ಸಂಪೂರ್ಣವಾಗಿ ಅವರಿಗೆ ವಿರುದ್ಧವಾಗಿದ್ದೇನೆ’’ಎಂದರು.

 ‘‘ಯಾವುದೇ ರೀತಿಯಲ್ಲಿಯೂ ಗೂಂಡಾಗಿರಿಯನ್ನು ನಾನು ವಿರೋಧಿಸುತ್ತೇನೆ. ನೀವು ಗುಂಪೊಂದನ್ನು ಜೊತೆಗೊಯ್ದು ಧರ್ಮದ ಹೆಸರಿನಲ್ಲಿ ಕುಟುಂಬಗಳಿಗೆ ಬೆದರಿಕೆ ಯೊಡ್ಡುವಂತಿಲ್ಲ. ನಮ್ಮ ದೇಶದಲ್ಲಿ ಇಂತಹ ಘಟನೆಗಳು ನಡೆಯಬಾರದು. ವಾಸ್ತವದಲ್ಲಿ ನಾವೆಲ್ಲ ಈ ದೇಶದಲ್ಲಿ ಚೆನ್ನಾಗಿಯೇ ಇದ್ದೇವೆ. ಈ ದಿನಗಳಲ್ಲಿ ಇದು ಇನ್ನೂ ಉತ್ತಮವಾಗಿದೆ. ಇದು ರಾಜಕೀಯ ಹೇಳಿಕೆಯಲ್ಲ, ಆದರೆ ‘ಅಚ್ಛೇ ದಿನ್ ’ಗಳು ಬರುತ್ತಿವೆಯೆಂದು ನಾನು ಭಾವಿಸಿದ್ದೇನೆ ’’ಎಂದೂ ನಿಗಮ್ ಹೇಳಿದರು.

ನೀವು ವಿದೇಶದಲ್ಲಿ ನೆಲೆಸಲು ಬಯಸಿದ್ದೀರಾ ಎಂಬ ಪ್ರಶ್ನೆಗೆ, ಭಾರತ ತನ್ನ ಮನೆ ಎಂದು ಉತ್ತರಿಸಿದ ನಿಗಮ್,ಎಲ್ಲಾದರೂ ದೂರ ಹೋಗಬೇಕೆಂದು ತನಗೆ ಕೆಲವು ಬಾರಿ ಅನ್ನಿಸಿದೆ. ಆದರೆ ಎಲ್ಲವೂ ಸರಿಯಾಗಿರುವ ಯಾವುದೇ ದೇಶ ಈ ಭೂಮಿಯಲ್ಲಿಲ್ಲ. ಎಲ್ಲ ಕಡೆಯೂ ಏನಾದರೂ ಕೊರತೆಗಳು ಇದ್ದೇ ಇರುತ್ತವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X