Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಪ್ರದೇಶದಲ್ಲೀಗ ‘ಯೋಗಿ’...

ಉತ್ತರ ಪ್ರದೇಶದಲ್ಲೀಗ ‘ಯೋಗಿ’ ಮಾವಿನಹಣ್ಣು

ವಾರ್ತಾಭಾರತಿವಾರ್ತಾಭಾರತಿ7 May 2017 5:38 PM IST
share
ಉತ್ತರ ಪ್ರದೇಶದಲ್ಲೀಗ ‘ಯೋಗಿ’ ಮಾವಿನಹಣ್ಣು

 ಲಕ್ನೋ,ಮೇ 7: ನಗರದ ಪ್ರಸಿದ್ಧ ಮಾವು ಬೆಳೆಗಾರ ಪದ್ಮಶ್ರೀ ಹಾಜಿ ಕಲೀಮುಲ್ಲಾ ಅವರು ಬೆಳೆಸಿರುವ ಹೊಸ ತಳಿಯ ಮಾವಿನಹಣ್ಣು ಈ ಬೇಸಿಗೆಯಲ್ಲಿ ಮಾವು ಪ್ರಿಯರ ಮನಸ್ಸನ್ನು ತಣಿಸಲಿದೆ. ಈ ನೂತನ ತಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ ಅವರ ’ಯೋಗಿ’ ಹೆಸರನ್ನು ಇಡಲಾಗಿದೆ.

ಈ ಹಿಂದೆ ತಾನು ಬೆಳೆದಿದ್ದ ಮಾವಿನ ಹಣ್ಣುಗಳಿಗೆ ಪ್ರಧಾನಿ ನರೇಂದ್ರ ಮೋದಿ, ಬಾಲಿವುಡ್ ನಟಿ ಐಶ್ವರ್ಯಾ ರೈ ಮತ್ತು ಕ್ರಿಕೆಟ್ ದಂತಕಥೆ ಸಚಿನ್ ತೆಂಡುಲ್ಕರ್ ಅವರ ಹೆಸರುಗಳನ್ನಿರಿಸಿದ್ದ ಕಲೀಮುಲ್ಲಾ (74) ಈ ‘ಯೋಗಿ ’ಮಾವಿನಹಣ್ಣನ್ನು ಇಲ್ಲಿಯ ಮಲಿಹಾಬಾದ್ ಪ್ರದೇಶದಲ್ಲಿರುವ ತನ್ನ ಮಾವಿನ ತೋಟದಲ್ಲಿ ಬೆಳೆಸಿದ್ದಾರೆ.

ಯೋಗಿ ಮಾವಿನಹಣ್ಣನ್ನು ನೈಸರ್ಗಿಕವಾಗಿ ಬೆಳೆಸಲಾಗಿದೆ. ತುಂಬ ಮೃದುವಾಗಿದ್ದು ಸುಂದರ ರೂಪವನ್ನೂ ಹೊಂದಿದೆ. ಇದು ಪ್ರಸಿದ್ಧ ದಶೇರಿ ಮಾವಿನಹಣ್ಣಿನ ಹೈಬ್ರಿಡ್ ತಳಿಯಾಗಿದೆ ಎಂದು ಹೇಳಿದ ಕಲೀಮುಲ್ಲಾ, ಆದರೆ ಅದಿನ್ನೂ ಹಣ್ಣಾಗಿಲ್ಲ, ಹೀಗಾಗಿ ಅದರ ರುಚಿಯ ಬಗ್ಗೆ ಈಗಲೇ ಏನೂ ಹೇಳಲಿಕ್ಕಾಗುವುದಿಲ್ಲ. ಅದು ಒಳ್ಳೆಯದೇ ಇರುತ್ತದೆ ಎಂದು ಆಶಿಸಿದ್ದೇನೆ ಎಂದರು.

 ಪ್ರಸಿದ್ಧ ವ್ಯಕ್ತಿಗಳ ಹೆಸರುಗಳನ್ನು ಚಿರಸ್ಥಾಯಿಯಾಗಿಸಲು ತಾನು ಮಾವಿನ ತಳಿಗಳಿಗೆ ಅವರ ಹೆಸರುಗಳನ್ನಿಡುತ್ತಿರುವುದಾಗಿ ಅವರು ತಿಳಿಸಿದರು.

1957ರಿಂದಲೂ ಮಾವು ಬೆಳೆಯುತ್ತಿರುವ ಕಲೀಮುಲ್ಲಾ ಐದು ಎಕರೆ ವಿಸ್ತೀರ್ಣದ ಮಾವಿನ ತೋಪು ಹೊಂದಿದ್ದಾರೆ. ಈ ತೋಟದಲ್ಲಿ ಶತಮಾನದಷ್ಟು ಪುರಾತನ ಮರವೊಂದಿದ್ದು, 1987ರಿಂದಲೂ ಅದರಲ್ಲಿ ವಿವಿಧ ಜಾತಿಗಳ ಕಸಿ ಮಾವಿನಹಣ್ಣುಗಳನ್ನು ಅವರು ಅಭಿವೃದ್ಧಿಗೊಳಿಸುತ್ತಿದ್ದಾರೆ.ಈ ಮರದಲ್ಲಿ ಬೆಳೆಯಲಾದ ಹಣ್ಣುಗಳಿಗೆ ತಮ್ಮ ಕುಟುಂಬ ಸದಸ್ಯರ ಹೆಸರುಗಳನ್ನೂ ಅವರು ಇಟ್ಟಿದ್ದಾರೆ.

ಕಸಿ ಮಾಡುವಿಕೆ ಮತ್ತು ವಿವಿಧ ತಳಿಗಳ ಮಾವುಗಳನ್ನು ಬೆಳೆಸುವ ಅವರ ಕೌಶಲ ಅವರಿಗೆ ಪದ್ಮಶ್ರೀ ಪ್ರಶಸ್ತಿಯ ಜೊತೆಗೆ ಉ.ಪ್ರ.ಸರಕಾರದ ‘ಉದ್ಯಾನ ಪಂಡಿತ’ ಪ್ರಶಸ್ತಿಗೂ ಭಾಜನರನ್ನಾಗಿಸಿದೆ.

ಒಂದೇ ಮರದಲ್ಲಿ 300 ವಿವಿಧ ಜಾತಿಗಳ ಮಾವನ್ನು ಬೆಳೆಸುವ ಮೂಲಕ ಅವರು ಪ್ರಸಿದ್ಧರಾಗಿದ್ದಾರೆ. ಅವರನ್ನು ಜನರು ಪ್ರೀತಿಯಿಂದ ‘ಮಾವಿನ ಮನುಷ್ಯ’ಎಂದೇ ಕರೆಯುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X