Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ​ಯುವ ಸಮೂಹಕ್ಕೆ ಉದ್ಯೋಗ ಮೇಳ ಸಹಕಾರಿ:...

​ಯುವ ಸಮೂಹಕ್ಕೆ ಉದ್ಯೋಗ ಮೇಳ ಸಹಕಾರಿ: ಪ್ರಕಾಶ್ ರೈ

ವಾರ್ತಾಭಾರತಿವಾರ್ತಾಭಾರತಿ7 May 2017 5:48 PM IST
share
​ಯುವ ಸಮೂಹಕ್ಕೆ ಉದ್ಯೋಗ ಮೇಳ ಸಹಕಾರಿ: ಪ್ರಕಾಶ್ ರೈ

ಬೆಂಗಳೂರು, ಮೇ 6: ದೇಶದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಅದರಲ್ಲೂ ಪ್ರಮುಖವಾಗಿ ಯುವಕರಿಗೆ ಉದ್ಯೋಗ ಅವಕಾಶಗಳು ಕಡಿಮೆಯಾಗುತ್ತಿರುವ ಈ ಸಂದರ್ಭದಲ್ಲಿ ಉದ್ಯೋಗ ಮೇಳಗಳ ಆಯೋಜನೆಯು ಆರೋಗ್ಯಕರವಾದದ್ದು ಎಂದು ರಾಷ್ಟ್ರಪ್ರಶಸ್ತಿ ಪುರಸ್ಕೃತ ಹಿರಿಯ ನಟ ಪ್ರಕಾಶ್ ರೈ ಅಭಿಪ್ರಾಯಪಟ್ಟಿದ್ದಾರೆ.

ನಗರದ ಚಾಮರಾಜಪೇಟೆಯಲ್ಲಿರುವ ಟಿಪ್ಪುಸುಲ್ತಾನ್ ಬೇಸಿಗೆ ಅರಮನೆ ಹಿಂಭಾಗದ ಹಳೆ ಕೋಟೆ ಪ್ರೌಢಶಾಲೆ ಆವರಣದಲ್ಲಿ ಶಾಸಕ ಝಮೀರ್‌ ಅಹ್ಮದ್‌ ಖಾನ್ ಆಯೋಜಿಸಿದ್ದ ‘ಬೃಹತ್ ಉಚಿತ ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ ಮೇಳ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶದಲ್ಲಿ ಸಾಕಷ್ಟು ಪ್ರತಿಭೆಗಳಿವೆ, ಕೌಶಲ್ಯಭರಿತವಾಗಿರುವ ದೊಡ್ಡ ಯುವ ಸಮೂಹವೇ ಇದೆ. ಅಂತಹವರಿಗೆ ಏನಾದರೂ ನೆರವು ನೀಡಬೇಕಾದ್ದು ನಮ್ಮ ಕರ್ತವ್ಯ. ಈ ನಿಟ್ಟಿನಲ್ಲಿ ಝಮೀರ್‌ ಅಹ್ಮದ್‌ಖಾನ್ ಆಯೋಜನೆ ಮಾಡಿರುವ ಈ ಉದ್ಯೋಗ ಮೇಳವು ವಾಸ್ತವಿಕ ಹಾಗೂ ಆರೋಗ್ಯಕರವಾದದ್ದು ಎಂದು ಅವರು ಹೇಳಿದರು.

ಪ್ರತಿಯೊಂದು ವಿದೇಶಿ ಕಂಪೆನಿಯೂ ತಲಾ 300-400 ಉದ್ಯೋಗಗಳನ್ನು ಕಲ್ಪಿಸಿಕೊಡಲು ಮುಂದೆ ಬಂದಿದೆ. ಯುವಕರಿಗೆ ಇದೊಂದು ಸುವರ್ಣ ಅವಕಾಶ. ಯುವಕರ ಸಬಲೀಕರಣದ ಬಗ್ಗೆ ಕೇವಲ ಮಾತುಗಳನ್ನಾಡುವುದಷ್ಟೇ ಅಲ್ಲ, ಈ ರೀತಿಯ ಕೆಲಸಗಳಿಂದ ಅದನ್ನು ಕಾರ್ಯಗತಗೊಳಿಸುತ್ತಿರುವುದಕ್ಕೆ ರಾಜ್ಯದ ಯುವಕರ ಪರವಾಗಿ ಝಮೀರ್‌ ಅಹ್ಮದ್‌ ರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅವರು ಹೇಳಿದರು.

ಶಾಸಕ ಝಮೀರ್‌ ಅಹ್ಮದ್‌ ಖಾನ್ ಮಾತನಾಡಿ, ಇಂದು ಕೇವಲ ಉದ್ಯೋಗ ಮೇಳವನ್ನಷ್ಟೇ ಆಯೋಜನೆ ಮಾಡಿಲ್ಲ. ಕೌಶಲ್ಯ ತರಬೇತಿಗೂ ಯುವಕರನ್ನು ಆಯ್ಕೆ ಮಾಡಲಾಗುವುದು. ಉದ್ಯೋಗ ಸಿಗದೆ ಇರುವಂತಹ ಯುವಕರಿಗೆ ಪ್ರತಿಷ್ಠಿತ ಕಂಪೆನಿಗಳು ಕನಿಷ್ಠ 3 ರಿಂದ 6 ತಿಂಗಳುಗಳ ಕಾಲ ವೇತನ ಸಹಿತವಾಗಿ ಕೌಶಲ್ಯ ತರಬೇತಿಯನ್ನು ನೀಡಲಿವೆ ಎಂದರು.

ಆನ್‌ಲೈನ್ ಮೂಲಕ ಸಮಾರು 7,500 ಮಂದಿ ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ನೋಂದಣಿ ಮಾಡಿಸಿಕೊಂಡಿದ್ದಾರೆ. ಇನ್ನು ಹೆಚ್ಚಿನ ಮಂದಿ ನೇರವಾಗಿ ನೋಂದಣಿ ಮಾಡಿಸಿಕೊಳ್ಳಲು ಆಗಮಿಸಿದ್ದಾರೆ. ಇಂದಿನ ಉದ್ಯೋಗ ಮೇಳದಲ್ಲಿ ಕನಿಷ್ಠ 7 ಸಾವಿರ ಮಂದಿಗೆ ಉದ್ಯೋಗ ಸಿಗುವ ಸಾಧ್ಯತೆಗಳಿವೆ ಎಂದು ಅವರು ಹೇಳಿದರು.

ಸೌದಿ ಅರೇಬಿಯಾದಲ್ಲಿ ಕೆಲಸ ಬೇಕಾದರೆ ಏಜೆಂಟ್‌ಗಳಿಗೆ 50 ಸಾವಿರ ರೂ.ಗಳಿಂದ 1 ಲಕ್ಷ ರೂ.ವರೆಗೆ ಕಮಿಷನ್ ನೀಡಬೇಕಿತ್ತು. ಆದರೆ, ಇದೇ ಮೊದಲ ಬಾರಿಗೆ ಸೌದಿ ಅರೇಬಿಯಾದ ಕಂಪೆನಿಯೂ ಸ್ವಯಂಪ್ರೇರಿತವಾಗಿ 400 ಮಂದಿ ಉದ್ಯೋಗ ಕಲ್ಪಿಸಲು ಮುಂದೆ ಬಂದಿದೆ ಎಂದು ಝಮೀರ್‌ಅಹ್ಮದ್ ತಿಳಿಸಿದರು.

ಜೊತೆಗೆ, ವಿಪ್ರೋ, ಇನ್‌ಫೋಸಿಸ್, ಟೊಯೋಟಾ, ವೊಡಾಪೋನ್, ಡಾಮಿನೋಸ್, ಅಶೋಕ್ ಲೈಲಾಂಡ್ ಸೇರಿದಂತೆ ದೇಶ ವಿದೇಶಗಳ ಸುಮಾರು 150 ಕಂಪೆನಿಗಳು ಇಂದಿನ ಮೇಳದಲ್ಲಿ ಯುವಕರಿಗೆ ಉದ್ಯೋಗ ಕಲ್ಪಿಸಲು ಮುಂದೆ ಬಂದಿವೆ. ಹಿರಿಯ ನಟ ಪ್ರಕಾಶ್ ರೈ ಸ್ವಯಂಪ್ರೇರಿತರಾಗಿ ಈ ಉದ್ಯೋಗ ಮೇಳ ಉದ್ಘಾಟನೆಗೆ ಬಂದಿದಕ್ಕೆ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಅವರು ಹೇಳಿದರು.

"ಈ ಉದ್ಯೋಗ ಮೇಳದ ಆಯೋಜನೆಯಲ್ಲಿ ಕೇವಲ ನಾನೊಬ್ಬನೆ ಶ್ರಮಿಸಿಲ್ಲ. ನನ್ನ ಜೊತೆ ಮುಖಂಡರಾದ ಶಕೀಲ್ ನವಾಝ್, ಆರೀಫ್‌ಪಾಷ, ಇಮ್ರಾನ್‌ಪಾಷ, ಅಯ್ಯೂಬ್‌ಖಾನ್, ಅಮೀರ್, ಗೋವಿಂದ ಸೇರಿದಂತೆ ಇನ್ನಿತರ ಎಲ್ಲ ಮುಖಂಡರು ಶ್ರಮಿಸಿದ್ದಾರೆ. ಈ ಮೇಳದ ಶ್ರೇಯ ಅವರೆಲ್ಲರಿಗೂ ಸಲ್ಲಿಸಬೇಕು" ಎಂದು ಝಮೀರ್ ಅಹ್ಮದ್‌ಖಾನ್ ತಿಳಿಸಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X