Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ''ನಿಮ್ಮ ಮಿತಿಯನ್ನು...

''ನಿಮ್ಮ ಮಿತಿಯನ್ನು ದಾಟಬೇಡಿ''-ಗೋರಖ್‌ಪುರದಲ್ಲಿ ಮಹಿಳಾ ಐಪಿಎಸ್ ಅಧಿಕಾರಿಗೆ ಬಿಜೆಪಿ ಶಾಸಕನ ಧಮ್ಕಿ

ವಾರ್ತಾಭಾರತಿವಾರ್ತಾಭಾರತಿ8 May 2017 5:42 PM IST
share
ನಿಮ್ಮ ಮಿತಿಯನ್ನು ದಾಟಬೇಡಿ-ಗೋರಖ್‌ಪುರದಲ್ಲಿ ಮಹಿಳಾ ಐಪಿಎಸ್ ಅಧಿಕಾರಿಗೆ ಬಿಜೆಪಿ ಶಾಸಕನ ಧಮ್ಕಿ

 ಗೋರಖ್‌ಪುರ,ಮೇ 8: ''ನಿಮ್ಮ ಮಿತಿಯನ್ನು ದಾಟಬೇಡಿ'' ಇದು ಮದ್ಯವಿರೋಧಿ ಪ್ರತಿಭಟನಾಕಾರರನ್ನು ತೆರವುಗೊಳಿಸಲು ಪೊಲೀಸರು ಪ್ರಯತ್ನಿಸಿದಾಗ ಸಿಟ್ಟಿನಿಂದ ಕುದಿಯುತ್ತಿದ್ದ ಸ್ಥಳೀಯ ಬಿಜೆಪಿ ಶಾಸಕ ರಾಧಾಮೋಹನ ದಾಸ್ ಅಗರವಾಲ್ ಅವರು ಮಹಿಳಾ ಐಪಿಎಸ್ ಅಧಿಕಾರಿ ಚಾರು ನಿಗಮ್ ಅವರನ್ನು ತರಾಟೆಗೆತ್ತಿಕೊಂಡ ರೀತಿ. ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರ ತವರೂರು ಗೋರಖ್‌ಪುರದಲ್ಲಿ ಈ ಘಟನೆ ನಡೆದಿದೆ. ಶಾಸಕರು ಅಧಿಕಾರಿಯನ್ನು ಗದರುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ನಿಗಮ್ ಬಳಿಕ ಕಣ್ಣೀರು ಒರೆಸಿಕೊಳ್ಳುತ್ತಿರುವ ದೃಶ್ಯವೂ ವೀಡಿಯೊದಲ್ಲಿ ದಾಖಲಾಗಿದೆ. ''ನಾನು ಅತ್ತಿರಲಿಲ್ಲ, ಅದು ನನ್ನ ಜಾಯಮಾನವೂ ಅಲ್ಲ. ಆದರೆ ನನ್ನ ಹಿರಿಯ ಅಧಿಕಾರಿಗಳು ನನ್ನನ್ನು ಬೆಂಬಲಿಸಿದಾಗ ಭಾವೋದ್ವೇಗಗೊಂಡಿದ್ದೆ ''ಎಂದು ಶಾಸಕರ ಗದರಿಕೆಯಿಂದಾಗಿ ತಾನು ಅಳತೊಡಗಿದ್ದೆ ಎಂಬ ವರದಿಗಳಿಗೆ ಪ್ರತಿಕ್ರಿಯಿಸುತ್ತ ಅವರು ಹೇಳಿದರು.

15 ದಿನಗಳ ಹಿಂದೆ ಅಗರವಾಲ್ ಅವರ ನೇತೃತ್ವದಲ್ಲಿ ಪ್ರತಿಭಟನೆಯ ಫಲವಾಗಿ ಬಂದ್ ಆಗಿದ್ದ ಮದ್ಯದಂಗಡಿಗಳ ಪುನರಾರಂಭವನ್ನು ವಿರೋಧಿಸಿ ಮಹಿಳೆಯರ ಗುಂಪೊಂದು ರವಿವಾರ ಬೆಳಿಗ್ಗೆ ರಸ್ತೆತಡೆಯನ್ನು ನಡೆಸಿತ್ತು. ಅವರನ್ನು ಚದುರಿಸಲು ಲಘು ಲಾಠಿಪ್ರಹಾರ ನಡೆಸಿದ್ದ ಪೊಲೀಸರು ಕೆಲವು ಮಹಿಳೆಯರನ್ನು ತಮ್ಮ ವಶಕ್ಕೆ ತೆಗೆದುಕೊಂಡು ಠಾಣೆಗೆ ಕರೆದೊಯ್ದಿದ್ದರು. ಪೊಲೀಸ್ ಕಾರ್ಯಾಚರಣೆಯ ವೇಳೆ ನಿಗಮ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು.

ಸ್ಥಳಕ್ಕೆ ತಲುಪಿದ ಅಗರವಾಲ್ ಪ್ರತಿಭಟನಾಕಾರರನ್ನು ಬಿಡುಗಡೆಗೊಳಿಸುವಂತೆ ಪೊಲೀಸರನ್ನು ಆಗ್ರಹಿಸಿದ ಸಂದರ್ಭ ಅವರೊಂದಿಗೆ ಏರಿದ ಧ್ವನಿಯಲ್ಲಿ ಮಾತನಾಡಿದ್ದರು.

 ಜನಪ್ರತಿನಿಧಿಯಾಗಿ ಮಹಿಳೆಯರ ಮೇಲೆ ಪೊಲೀಸ್ ದೌರ್ಜನ್ಯದ ವಿರುದ್ಧ ಮಾತನಾಡುವುದು ನನ್ನ ಜವಾಬ್ದಾರಿಯಾಗಿದೆ. ಅವರು ಗರ್ಭಿಣಿ ಮಹಿಳೆಯನ್ನು ಥಳಿಸಿದ್ದರು. ವಯಸ್ಸಾದವರು ಮತ್ತು ಮಕ್ಕಳನ್ನೂ ಅವರು ಬಿಡಲಿಲ್ಲ ಎಂದ ಅಗರವಾಲ್, ನಾನು ಉಪ ವಿಭಾಗಾಧಿಕಾರಿಯೊಂದಿಗೆ ಮಾತನಾಡುತ್ತಿದ್ದಾಗ ನಿಗಮ್ ಅನಗತ್ಯವಾಗಿ ಮಧ್ಯೆ ಪ್ರವೇಶಿಸಿದ್ದರು ಎಂದು ಸಮರ್ಥಿಸಿಕೊಂಡರು.

ಆದರೆ ತಾವು ಪ್ರತಿಭಟನಾಕಾರರ ಮೇಲೆ ದೌರ್ಜನ್ಯವೆಸಗಿದ್ದನ್ನು ನಿರಾಕರಿಸಿರುವ ಪೊಲೀಸರು, ಶಾಸಕರು ನಿಗಮ್ ಜೊತೆ ಅನುಚಿತವಾಗಿ ನಡೆದುಕೊಂಡಿದ್ದರು ಎಂದು ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X