Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭ್ರಷ್ಟಾಚಾರದ ಸ್ಪೋಟಕ ಆರೋಪಕ್ಕೆ ಕೊನೆಗೂ...

ಭ್ರಷ್ಟಾಚಾರದ ಸ್ಪೋಟಕ ಆರೋಪಕ್ಕೆ ಕೊನೆಗೂ ಮೌನ ಮುರಿದ ಕೇಜ್ರಿವಾಲ್ ಹೇಳಿದ್ದೇನು ?

ಏನಾಗಲಿದೆ ನಾಳೆ ದಿಲ್ಲಿ ಅಸೆಂಬ್ಲಿಯಲ್ಲಿ ?

ವಾರ್ತಾಭಾರತಿವಾರ್ತಾಭಾರತಿ8 May 2017 9:36 PM IST
share
ಭ್ರಷ್ಟಾಚಾರದ ಸ್ಪೋಟಕ ಆರೋಪಕ್ಕೆ ಕೊನೆಗೂ ಮೌನ ಮುರಿದ ಕೇಜ್ರಿವಾಲ್ ಹೇಳಿದ್ದೇನು ?

 ಹೊಸದಿಲ್ಲಿ, ಮೇ 8: ಸತ್ಯ ಗೆಲ್ಲಲಿದೆ.. ನಾಳೆ ನಡೆಯಲಿರುವ ದಿಲ್ಲಿ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಆರಂಭಗೊಳ್ಳುತ್ತದೆ - ಎಂಬ ಗೂಢಾರ್ಥದ ಹೇಳಿಕೆಯನ್ನು ಟ್ವೀಟ್ ಮಾಡುವ ಮೂಲಕ ತನ್ನ ವಿರುದ್ಧ ಕೇಳಿ ಬಂದಿರುವ ಲಂಚದ ಆರೋಪಕ್ಕೆ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ತಣ್ಣಗಿನ ಪ್ರತಿಕ್ರಿಯೆ ನೀಡಿದ್ದಾರೆ.
  ಇದಕ್ಕೂ ಮುನ್ನ ಲಂಚದ ಆರೋಪ ಮಾಡಿರುವ ಕಪಿಲ್ ಮಿಶ್ರಾಗೆ ಮಾತಿನ ಇದಿರೇಟು ನೀಡಿರುವ ‘ಆಪ್’ನ ಹಿರಿಯ ಮುಖಂಡ ಸತ್ಯೇಂದ್ರ ಜೈನ್, ಉಚ್ಛಾಟಿಸಲ್ಪಟ್ಟಿರುವ ಕಪಿಲ್ ಮಿಶ್ರ ಮಾನಸಿಕ ಸ್ಥಿಮಿತ ಕಳಕೊಂಡಿದ್ದಾರೆ. ನನ್ನ ಮತ್ತು ಕೇಜ್ರೀವಾಲ್ ಮಧ್ಯೆ ಯಾವುದೇ ಒಪ್ಪಂದ ನಡೆದಿಲ್ಲ. ನಿನ್ನೆಯಿಂದ ಗಮನಿಸುತ್ತಿದ್ದೇನೆ- ಕಪಿಲ್ ಎಷ್ಟು ಸುಳ್ಳು ಹೇಳುತ್ತಿದ್ದಾರೆ ಎಂದು. ನಾನು ಮುಖ್ಯಮಂತ್ರಿ ಜೊತೆ ಇರಲೇ ಇಲ್ಲ. ಮೂರ್ಖತನಕ್ಕೆ ಮತ್ತು ಸುಳ್ಳು ಹೇಳುವುದಕ್ಕೂ ಒಂದು ಮಿತಿಯಿದೆ. ಆದರೆ ಕಪಿಲ್ ಎಲ್ಲಾ ಮಿತಿಗಳನ್ನೂ ಮೀರಿದ್ದಾರೆ ಎಂದಿದ್ದಾರೆ.
ಕಪಿಲ್ ವಿರುದ್ದ ಜೈನ್ ಮಾನನಷ್ಟ ಮೊಕದ್ದಮೆ ಹೂಡುವ ಸಾಧ್ಯತೆಗಳಿವೆ ಎಂದು ಜೈನ್ ನಿಕಟವರ್ತಿಯೋರ್ವರು ತಿಳಿಸಿದ್ದಾರೆ.
 ಕೇಜ್ರೀವಾಲ್ ವಿರುದ್ಧ ಕೇಳಿ ಬಂದಿರುವ ಆರೋಪದಿಂದ ತನಗೆ ತುಂಬಾ ನೋವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಝಾರೆ ತಿಳಿಸಿದ್ದಾರೆ. ಲಂಚ ಪಡೆದವರನ್ನು ನೇಣಿಗೇರಿಸಬೇಕು ಎಂದು ಈ ಹಿಂದಿನಿಂದಲೂ ಹೇಳುತ್ತಾ ಬಂದಿದ್ದೇನೆ. ಈ ಪ್ರಕರಣದ ಬಗ್ಗೆ ಸೂಕ್ತ ತನಿಖೆಯಾಗಬೇಕು. ಆಗ ಸತ್ಯ ಹೊರಬೀಳಲಿದೆ ಎಂದು ಅವರು ಆಗ್ರಹಿಸಿದ್ದಾರೆ.
       ಈ ಮಧ್ಯೆ , ಕಪಿಲ್ ಮಿಶ್ರಾರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಿರುವುದಾಗಿ ಆಪ್ ಪಕ್ಷದ ರಾಜಕೀಯ ವ್ಯವಹಾರ ಸಮಿತಿ ತಿಳಿಸಿದೆ. ಕೇಜ್ರೀವಾಲ್ ವಿರುದ್ಧ ಲಂಚದ ಆರೋಪ ಮಾಡಿದ್ದ ಕಪಿಲ್ ಮಿಶ್ರ, ಮಂಗಳವಾರ ಸಿಬಿಐಯನ್ನು ಸಂಪರ್ಕಿಸಿ ಪ್ರಕರಣದ ಬಗ್ಗೆ ಎಫ್‌ಐಆರ್ ದಾಖಲಿಸುವುದಾಗಿ ತಿಳಿಸಿದ್ದಾರೆ. ಪಕ್ಷದ ಮುಖಂಡರ ವಿರುದ್ಧದ ಟೀಕೆ ಮುಂದುವರಿಸಿದ ಮಿಶ್ರ, ಕೇಜ್ರೀವಾಲ್ ಅವರ ಸಂಬಂಧಿಯೋರ್ವರ 50 ಕೋಟಿ ವೌಲ್ಯದ ಭೂಮಿಯ ಬಗೆಗಿದ್ದ ವಿವಾದವನ್ನು ಬಗೆಹರಿಸಲು ದಿಲ್ಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ನೆರವಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ ಲೋಕೋಪಯೋಗಿ ಸಚಿವರೂ ಆಗಿರುವ ಅವರು ತಮ್ಮ ಇಲಾಖೆಯಿಂದ 10 ಕೋಟಿ ರೂ.ಯಷ್ಟು ಮೊತ್ತದ ನಕಲಿ ಬಿಲ್‌ಗಳ ಮೊತ್ತವನ್ನು ಕೇಜ್ರೀವಾಲ್ ಸಂಬಂಧಿಕರಿಗೆ ಪಾಸ್ ಮಾಡಿಸಿಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.
ತಾನೋರ್ವ ಬಿಜೆಪಿ ಏಜೆಂಟ್ ಎಂಬ ಟೀಕೆಯನ್ನು ತಳ್ಳಿಹಾಕಿರುವ ಕಪಿಲ್ ಮಿಶ್ರ, ಪಕ್ಷವನ್ನು ತೊರೆಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಈ ಪ್ರಕರಣದಲ್ಲಿ ಸುಳ್ಳು ಪತ್ತೆಹಚ್ಚುವ ಪರೀಕ್ಷೆ ನಡೆಯಲಿ ಎಂದು ಆಗ್ರಹಿಸಿದ್ದಾರೆ.
    ಕೇಜ್ರೀವಾಲ್ 400 ಕೋಟಿ ರೂ. ಮೊತ್ತದ ಟ್ಯಾಂಕರ್ ಹಗರಣದ ತನಿಖೆಯನ್ನು ವಿಳಂಬಗೊಳಿಸಿದ್ದರು ಎಂದು ತಾನು ಮಾಡಿರುವ ಆರೋಪಕ್ಕೆ ಪೂರಕವಾಗಿ ಕೆಲವು ದಾಖಲೆಗಳನ್ನು ಸೋಮವಾರ ಕಪಿಲ್ ಮಿಶ್ರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಗೆ ಒಪ್ಪಿಸಿದ್ದಾರೆ. ಮಿಶ್ರಾ ಅವರ ಹೇಳಿಕೆ ದಾಖಲಿಸಿಕೊಂಡ ಬಳಿಕ ಕಾನೂನು ತನ್ನದೇ ದಾರಿಯಲ್ಲಿ ಸಾಗಲಿದೆ  ಎಂದು ದಿಲ್ಲಿ ಎಸಿಬಿ ಮುಖ್ಯಸ್ಥ ಎಂ.ಕೆ.ಮೀನ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X