Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪಂಜಾಬ್ ಮೇಲೆ ಸವಾರಿಗೆ ಕೋಲ್ಕತಾ ಸಿದ್ಧತೆ

ಪಂಜಾಬ್ ಮೇಲೆ ಸವಾರಿಗೆ ಕೋಲ್ಕತಾ ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ8 May 2017 11:32 PM IST
share
ಪಂಜಾಬ್ ಮೇಲೆ ಸವಾರಿಗೆ ಕೋಲ್ಕತಾ ಸಿದ್ಧತೆ

ಮೊಹಾಲಿ, ಮೇ 8: ಹತ್ತನೆ ಆವೃತ್ತಿಯ ಐಪಿಎಲ್‌ನಲ್ಲಿ ನಾಕೌಟ್ ಸ್ಥಾನವನ್ನು ಬಹುತೇಕ ಖಚಿತಪಡಿಸಿಕೊಂಡಿರುವ ಕೋಲ್ಕತಾ ನೈಟ್ ರೈಡರ್ಸ್ ತಂಡ ಮಂಗಳವಾರ ಇಲ್ಲಿ ನಡೆಯಲಿರುವ ಪಂದ್ಯದಲ್ಲಿ ಆತಿಥೇಯ ಪಂಜಾಬ್ ತಂಡವನ್ನು ಎದುರಿಸಲಿದೆ.

ರವಿವಾರ ಬೆಂಗಳೂರಿನಲ್ಲಿ ನಡೆದಿದ್ದ ಆರ್‌ಸಿಬಿ ವಿರುದ್ಧದ ಪಂದ್ಯವನ್ನು 6 ವಿಕೆಟ್‌ಗಳ ಅಂತರದಿಂದ ಗೆದ್ದುಕೊಂಡಿದ್ದ ಕೆಕೆಆರ್ ಸತತ ಎರಡು ಸೋಲಿನಿಂದ ಹೊರ ಬಂದಿತ್ತು.

12 ಪಂದ್ಯಗಳಲ್ಲಿ 8ರಲ್ಲಿ ಜಯ ಸಾಧಿಸಿ ಒಟ್ಟು 16 ಅಂಕ ಗಳಿಸಿರುವ ಗೌತಮ್ ಗಂಭೀರ್ ಪಡೆ ಈಗ ಅಂಕಪಟ್ಟಿಯಲ್ಲಿ ಎರಡನೆ ಸ್ಥಾನದಲ್ಲಿದೆ. ಪಂಜಾಬ್ ವಿರುದ್ಧ ಜಯ ಸಾಧಿಸಿ 2ನೆ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ವಿಶ್ವಾಸದಲ್ಲಿದೆ. ಪಂಜಾಬ್ ತಂಡ ರವಿವಾರ ನಡೆದಿದ್ದ ಪಂದ್ಯದಲ್ಲಿ ಗುಜರಾತ್ ವಿರುದ್ಧ 6 ವಿಕೆಟ್‌ಗಳಿಂದ ಸೋತಿದೆ.

ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಗೆಲುವಿಗೆ 159 ರನ್ ಗುರಿ ಪಡೆದಿದ್ದ ಕೆಕೆಆರ್ ತಂಡ ಮೊದಲ ಆರು ಓವರ್‌ನಲ್ಲಿ ವಿಕೆಟ್ ನಷ್ಟವಿಲ್ಲದೆ 105 ರನ್ ಗಳಿಸಿತ್ತು. ಇದು ಐಪಿಎಲ್ ಪವರ್‌ಪ್ಲೇ ವೇಳೆ ದಾಖಲಾದ ಗರಿಷ್ಠ ಸ್ಕೋರಾಗಿದೆ. ಭರ್ಜರಿ ಆರಂಭ ಪಡೆದಿದ್ದ ಕೆಕೆಆರ್ ಇನ್ನೂ 29 ಎಸೆತಗಳು ಬಾಕಿ ಇರುವಾಗಲೇ ಗುರಿ ತಲುಪಿತ್ತು. ಆಲ್‌ರೌಂಡರ್ ಸುನೀಲ್ ನರೇನ್ ಎರಡನೆ ಜಂಟಿ ವೇಗದ ಅರ್ಧಶತಕ(50ರನ್,15 ಎಸೆತ) ಸಿಡಿಸಿದರೆ, ಇನ್ನೋರ್ವ ಆರಂಭಿಕ ಆಟಗಾರ ಕ್ರಿಸ್ ಲಿನ್(50ರನ್, 22 ಎಸೆತ) ನರೇನ್‌ಗೆ ಸಮರ್ಥ ಸಾಥ್ ನೀಡಿದ್ದರು.

ಕೆಕೆಆರ್‌ನ ವಿಕೆಟ್‌ಕೀಪರ್ ರಾಬಿನ್ ಉತ್ತಪ್ಪ ಸ್ನಾಯು ಸೆಳೆತದಿಂದಾಗಿ ಕಳೆದ ಪಂದ್ಯದಲ್ಲಿ ಆಡಿಲ್ಲ. ಮುಂದಿನ ಪಂದ್ಯದಲ್ಲಿ ತಂಡಕ್ಕೆ ವಾಪಸಾಗುವ ನಿರೀಕ್ಷೆಯಿದೆ. ಬೌಲರ್‌ಗಳಾದ ಉಮೇಶ್ ಯಾದವ್, ಕ್ರಿಸ್ ವೋಕ್ಸ್ ಹಾಗೂ ನರೇನ್ ವಿಕೆಟ್ ಕಬಳಿಸುವ ಮೂಲಕ ತಮ್ಮ ಜವಾಬ್ದಾರಿಯನ್ನು ಚೆನ್ನಾಗಿ ನಿಭಾಯಿಸಿದ್ದಾರೆ.

ಮತ್ತೊಂದೆಡೆ, ಪಂಜಾಬ್‌ಗೆ ಪ್ಲೇ-ಆಫ್‌ಗೆ ಅರ್ಹತೆ ಪಡೆಯಲು ಅಲ್ಪ ಅವಕಾಶವಿದೆ. 11 ಪಂದ್ಯಗಳ ಪೈಕಿ ಕೇವಲ 5ರಲ್ಲಿ ಜಯ ಸಾಧಿಸಿರುವ ಪಂಜಾಬ್ ಒಟ್ಟು 10 ಅಂಕಗಳೊಂದಿಗೆ 5ನೆ ಸ್ಥಾನದಲ್ಲಿದೆ. ನಾಕೌಟ್ ಹಂತಕ್ಕೇರುವ ಅವಕಾಶ ಹೆಚ್ಚಾಗಬೇಕಾದರೆ ಉಳಿದ 3 ಪಂದ್ಯಗಳನ್ನೂ ಗೆಲ್ಲಲೇಬೇಕು. ಗುಜರಾತ್ ವಿರುದ್ಧ ರವಿವಾರ ರಾತ್ರಿ 6 ವಿಕೆಟ್‌ಗಳಿಂದ ಸೋತಿದ್ದ ಪಂಜಾಬ್‌ನ ಪ್ಲೇ-ಆಫ್ ಅವಕಾಶಕ್ಕೆ ತೀವ್ರ ಹಿನ್ನಡೆಯಾಗಿದೆ.

 ಆರಂಭಿಕ ಆಟಗಾರ ಹಾಶಿಮ್ ಅಮ್ಲ ಶತಕದ ನೆರವಿನಿಂದ ಪಂಜಾಬ್ 3 ವಿಕೆಟ್‌ನಷ್ಟಕ್ಕೆ 189 ರನ್ ಗಳಿಸಿತ್ತು. ಆದರೆ, ಪಂಜಾಬ್ ಬೌಲರ್‌ಗಳು ಲಯನ್ಸ್ ಆಟಗಾರರನ್ನು ನಿಯಂತ್ರಿಸಲು ವಿಫಲರಾದರು. ಡ್ವೆಯ್ನೆ ಸ್ಮಿತ್(74) ಲಯನ್ಸ್‌ಗೆ ಗೆಲುವು ತಂದರು.

ದಕ್ಷಿಣ ಆಫ್ರಿಕ ಬ್ಯಾಟ್ಸ್‌ಮನ್ ಅಮ್ಲ ಪಂಜಾಬ್‌ನ ಪ್ರಮುಖ ಆಟಗಾರನಾಗಿದ್ದು, ಅವರು ಈ ತನಕ 2 ಶತಕ ಸಹಿತ 400ಕ್ಕೂ ಅಧಿಕ ರನ್ ಗಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X