Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನ್ಯಾಯವನ್ನು ಬಯಸಿದ್ದೆ,...

ನ್ಯಾಯವನ್ನು ಬಯಸಿದ್ದೆ, ಪ್ರತೀಕಾರವನ್ನಲ್ಲ: ಬಿಲ್ಕೀಸ್ ಬಾನು

ವಾರ್ತಾಭಾರತಿವಾರ್ತಾಭಾರತಿ8 May 2017 11:36 PM IST
share

ಹೊಸದಿಲ್ಲಿ, ಮೇ 8: 2002ರ ಗುಜರಾತ್ ದಂಗೆ ಸಂದರ್ಭದಲ್ಲಿ ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು, ಅವರ ಕುಟುಂಬದ ಹೆಚ್ಚಿನವರು ದುಷ್ಕರ್ಮಿಗಳಿಂದ ಕೊಲೆಯಾಗಿದ್ದರು. ಅದಾಗಿ ಬರೋಬ್ಬರಿ 15 ವರ್ಷಗಳ ಬಳಿಕ ಈಗ ಹೊಸದಾಗಿ ಬದುಕನ್ನು ಆರಂಭಿಸಲು ಸಜ್ಜಾಗುತ್ತಿರುವ ಬಿಲ್ಕೀಸ್ ಬಾನು ತನ್ನ ಹಿರಿಯ ಮಗಳು ನ್ಯಾಯವಾದಿಯಾಗುವ ಕನಸನ್ನು ಕಾಣುತ್ತಿದ್ದಾರೆ.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಲ್ಕೀಸ್, ‘‘ನಾನು ನ್ಯಾಯವನ್ನಷ್ಟೇ ಬಯಸಿದ್ದೆ. ಪ್ರತೀಕಾರವನ್ನಲ್ಲ’’ ಎಂದು ಹೇಳಿದರು. ನಾಲ್ಕು ದಿನಗಳ ಹಿಂದೆ ಐತಿಹಾಸಿಕ ತೀರ್ಪೊಂದನ್ನು ಪ್ರಕಟಿಸಿದ್ದ ಬಾಂಬೆ ಉಚ್ಚ ನ್ಯಾಯಾಲಯವು ಬಿಲ್ಕೆಸ್‌ರ ಸಾಮೂಹಿಕ ಅತ್ಯಾಚಾರದಲ್ಲಿ ಭಾಗಿಯಾಗಿದ್ದ 12 ಜನರ ಜೀವಾವಧಿ ಶಿಕ್ಷೆಯನ್ನು ಎತ್ತಿ ಹಿಡಿದಿತ್ತಲ್ಲದೆ, ಪೊಲೀಸರು ಮತ್ತು ವೈದ್ಯರು ಸೇರಿದಂತೆ ಏಳು ಜನರನ್ನು ಖುಲಾಸೆಗೊಳಿಸಿದ್ದ ಕೆಳ ನ್ಯಾಯಾಲಯದ ತೀರ್ಪನ್ನು ತಳ್ಳಿಹಾಕಿತ್ತು.

ದಂಗೆ ಸಂದರ್ಭದಲ್ಲಿ ಗರ್ಭಿಣಿಯಾಗಿದ್ದು, ತನ್ನ ಮೂರೂವರೆ ವರ್ಷ ಪ್ರಾಯದ ಮಗಳನ್ನು ಕಳೆದುಕೊಂಡಿದ್ದ ಬಿಲ್ಕೆಸ್ ಒಳ್ಳೆಯ ಜೀವನವನ್ನು ನಡೆಸಲು ನ್ಯಾಯಾಲಯದ ತೀರ್ಪು ತನಗೆ ನೆರವಾಗಲಿದೆ ಎಂಬ ಆಶಯ ವ್ಯಕ್ತಪಡಿಸಿದರು. ಘಟನೆಯನ್ನು ಮುಚ್ಚಿ ಹಾಕುವಲ್ಲಿ ಭಾಗಿಯಾಗಿದ್ದ ಪೊಲೀಸರು ಮತ್ತು ವೈದ್ಯರನ್ನೂ ದೋಷಿಗಳೆಂದು ನ್ಯಾಯಾಲಯವು ತೀರ್ಪು ನೀಡಿರುವುದು ಇನ್ನಷ್ಟು ಖುಷಿ ತಂದಿದೆ ಎಂದರು. ತನ್ನ ಹಿರಿಯ ಮಗಳು ನ್ಯಾಯವಾದಿಯಾಗಲು ಬಯಸಿದ್ದಾಳೆ. ತನ್ನೆಲ್ಲ ಮಕ್ಕಳು ಓದಿ ಹೊಸ ಬದುಕನ್ನು ರೂಪಿಸಿಕೊಳ್ಳುವಂತೆ ಮಾಡುತ್ತೇನೆ ಎಂದು ಬಿಲ್ಕೆಸ್ ನುಡಿದರು.
ಹಾಲು ಮಾರಾಟಗಾರರಾಗಿರುವ ಬಿಲ್ಕೆಸ್‌ರ ಪತಿ ಯಾಕೂಬ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಕುಟುಂಬದ ಸಂಕಷ್ಟ ಮತ್ತು ಆಗಾಗ್ಗೆ ಪೆರೋಲ್‌ನಲ್ಲಿ ಹೊರಗೆ ಬರುತ್ತಿದ್ದ ಆರೋಪಿಗಳಿಂದ ಬೆದರಿಕೆಗಳ ಕುರಿತು ಸುದ್ದಿಗಾರರು ಪ್ರಶ್ನಿಸಿದಾಗ ದುಃಖವನ್ನು ತಡೆದುಕೊಳ್ಳಲು ಅವರಿಗೆ ಸಾಧ್ಯವಾಗಲಿಲ್ಲ.
ಎಲ್ಲ ಮಹಿಳೆಯರಿಗೂ ಬಿಲ್ಕೆಸ್‌ರಂತೆ ನ್ಯಾಯ ದೊರೆಯಬೇಕು ಎಂದ ಅವರು, ಗೋ ಸಂರಕ್ಷಣಾ ಕಾಯ್ದೆ ಮತ್ತು ಗೋರಕ್ಷಕ ಗುಂಪುಗಳಿಂದಾಗಿ ತನ್ನ ಕುಟುಂಬದ ಹೈನುಗಾರಿಕೆ ವೃತ್ತಿಗೆ ಬೆದರಿಕೆ ಎದುರಾಗಿದೆ. ತಾನೀಗ ಕುಟುಂಬವನ್ನು ಪೋಷಿಸಲು ಬೇರೆ ಆದಾಯ ಮಾರ್ಗವನ್ನು ಕಂಡುಕೊಳ್ಳಬೇಕಿದೆ ಎಂದರು.
ಜೈಲಿನಿಂದ ಆಗಾಗ್ಗೆ ಪೆರೋಲ್‌ನಲ್ಲಿ ಹೊರಬರುತ್ತಿದ್ದ ಆರೋಪಿಗಳು ಬಿಲ್ಕೆಸ್‌ಗೆ ಬೆದರಿಕೆಗಳನ್ನು ಒಡ್ಡುತ್ತಿದ್ದರಿಂದ ಈ ನತದೃಷ್ಟ ಕುಟುಂಬವು 15 ವರ್ಷಗಳಲ್ಲಿ 25 ಬಾರಿ ಮನೆಯನ್ನು ಬದಲಿಸುವಂತಾಗಿತ್ತು ಎಂದು ಸುದ್ದಿಗೋಷ್ಠಿಯನ್ನು ಏರ್ಪಡಿಸಲು ಬಿಲ್ಕೆಸ್‌ಗೆ ನೆರವಾಗಿದ್ದ ಮಾನವ ಹಕ್ಕು ಕಾರ್ಯಕರ್ತೆ ಫರ್ಹಾ ನಕ್ವಿ ತಿಳಿಸಿದರು.
ಬಿಲ್ಕೆಸ್ ಮತ್ತು ಯಾಕೂಬ್ ದಂಪತಿಗೆ ಐವರು ಮಕ್ಕಳಿದ್ದಾರೆ. ಸಾಮೂಹಿಕ ಅತ್ಯಾಚಾರ ನಡೆದಾಗ ಬಿಲ್ಕೆಸ್ ಐದು ತಿಂಗಳ ಗರ್ಭಿಣಿಯಾಗಿದ್ದು, ಹಿರಿಯ ಮಗಳು ಜೊತೆಯಲ್ಲಿದ್ದಳು.
ಈ ಎಲ್ಲ ವರ್ಷಗಳಲ್ಲಿ ನ್ಯಾಯಕ್ಕಾಗಿ ತನ್ನ ಹೋರಾಟದಲ್ಲಿ ಸರಕಾರದಿಂದ ಯಾವುದೇ ಬೆಂಬಲ ತನಗೆ ದೊರೆಯಲಿಲ್ಲ ಎಂದು ಬಿಲ್ಕೆಸ್ ನಿರಾಶೆಯನ್ನು ವ್ಯಕ್ತಪಡಿಸಿದರು.
ಬಿಲ್ಕೆಸ್ ಹೇಳಿಕೆಯನ್ನು ಮೊದಲ ಬಾರಿಗೆ ಓದಿದಾಗ ತನಗೆ ಐದು ದಿನಗಳ ಕಾಲ ನಿದ್ರಿಸಲು ಸಾಧ್ಯವಾಗಿರಲಿಲ್ಲ ಎಂದು ಉಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ ವಿಚಾರಣೆಯಲ್ಲಿ ಆಕೆಯ ಪರ ವಾದಿಸಿದ್ದ ನ್ಯಾಯವಾದಿ ವಿಜಯ ಹಿರೇಮಠ ಹೇಳಿದರು.
ಲೈಂಗಿಕ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಹುಶಃ ಇದೇ ಮೊದಲ ಬಾರಿಗೆ ಪೊಲೀಸ್ ಅಧಿಕಾರಿಗಳನ್ನೂ ದೋಷಿಗಳೆಂದು ಘೋಷಿಸಲಾಗಿದೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X