Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 12ರಂದು "ಸೊಫಿಯಾ" ಕೊಂಕಣಿ ಚಿತ್ರ...

12ರಂದು "ಸೊಫಿಯಾ" ಕೊಂಕಣಿ ಚಿತ್ರ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ9 May 2017 4:17 PM IST
share
12ರಂದು ಸೊಫಿಯಾ ಕೊಂಕಣಿ ಚಿತ್ರ ಬಿಡುಗಡೆ

ಮಂಗಳೂರು, ಮೇ 9: ಬಹುನಿರೀಕ್ಷಿತ ಕೊಂಕಣಿ ಚಲನಚಿತ್ರ ಸೊಫಿಯಾ ಮೇ 12ರಂದು ಕರಾವಳಿಯಲ್ಲಿ ಬಿಡುಗಡೆ ಕಾಣಲಿದೆ. ಮಂಗಳೂರಿನ ಪ್ರಭಾತ್, ಸಿನಿಪೋಲಿಸ್, ಬಿಗ್ ಸಿನಿಮಾದಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕಿ ಜಾನೆಟ್ ನೊರೆನ್ಹಾ ಹೇಳಿದ್ದಾರೆ.

ಮಂಗಳವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರಂಭದಲ್ಲಿ ಮಂಗಳೂರಿನಲ್ಲಿ ಬಿಡುಗಡೆ ಮಾಡಿದ ಬಳಿಕ ನಂತರದ ದಿನಗಳಲ್ಲಿ ಕಾರ್ಕಳ, ಮೂಡುಬಿದಿರೆ, ಉಡುಪಿ, ಮಣಿಪಾಲ, ಬೆಂಗಳೂರು,ಗೋವಾ, ಮುಂಬೈ, ಮಧ್ಯಪ್ರಾಚ್ಯ ದೇಶಗಳ ಜತೆಗೆ ಇಸ್ರೇಲ್, ಯುಕೆಯಲ್ಲಿ ಬಿಡುಗಡೆಯಾಗಲಿದೆ ಎಂದರು.

ಚಿತ್ರದ ತಾರಾಗಣದಲ್ಲಿ ಬಹುಭಾಷಾ ನಟಿ ಎಸ್ತೆರ್ ನೊರೊನ್ಹಾ ಇದ್ದಾರೆ. ಎಸ್ತೆರ್ ಈ ಹಿಂದೆ ಕನ್ನಡ, ತುಳು, ತೆಲುಗು, ಹಿಂದಿ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕರಾಗಿ ಎಲ್ಟನ್ ಮಸ್ಕರೇನಸ್ ಹಾಗೂ ಶೆಲ್ಟನ್ ಕ್ರಾಸ್ತಾ ಕಾಣಿಸಿಕೊಂಡಿದ್ದಾರೆ. ಗೋವಾದ ಖ್ಯಾತ ಹಾಸ್ಯ ಕಲಾವಿದ ಪ್ರಿನ್ಸ್ ಜೇಕಬ್ ಸೇರಿದಂತೆ ರಿಚರ್ಡ್ ಕಾಣಿಸಿಕೊಂಡಿದ್ದಾರೆ. ಚಿತ್ರದ ಚಿತ್ರೀಕರಣ ತಾಂತ್ರಿಕವಾಗಿ ಉನ್ನತ ಮಟ್ಟದಲ್ಲಿರುವುದರಿಂದ ಚಿತ್ರದ ಗುಣಮಟ್ಟದಲ್ಲಿ ಕೊಂಕಣಿ ಚಿತ್ರಗಳಲ್ಲಿಯೇ ಉನ್ನತ ಮಟ್ಟದಲ್ಲಿದೆ ಎಂದರು.

ಉಡುಪಿಯ ಫಲಿಮಾರು, ಬೆಳ್ಮಣ್ಣು, ಕಲ್ಯಾಣಪುರ ಸೇರಿದಂತೆ ಮುಂಬೈ, ಚಿಕ್ಕಮಗಳೂರಿನಲ್ಲಿ ಸರಿಸುಮಾರು 21 ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ. 70 ಲಕ್ಷ ರೂ.ಗಳಲ್ಲಿ ಸಿದ್ಧವಾದ ಸೊಫಿಯಾ ಪಕ್ಕಾ ಕೌಟುಂಬಿಕ ಆಧಾರಿತ ಸಿನಿಮಾ. ಅದರಲ್ಲೂ ಕರಾವಳಿಯ ಜನ ಇಷ್ಟಪಡುವಂತಹ ಕತೆಯನ್ನು ಚಿತ್ರದಲ್ಲಿ ಹೆಣೆಯಲಾಗಿದೆ.

ಚಿತ್ರದ ನಾಯಕ ಎಲ್ಟನ್ ಮಾತನಾಡಿ, ಚಿತ್ರವನ್ನು ಜಾನೆಟ್ ನೊರೊನ್ಹಾ ಪ್ರೊಡಕ್ಷನ್ ಮಂಗಳೂರು ಬ್ಯಾನರ್‌ನಲ್ಲಿ ಜಾನೆಟ್ ನೊರೊನ್ಹಾ ನಿರ್ಮಾಣ ಮಾಡಿದ್ದಾರೆ. ಕೋಸ್ಟಲ್‌ವುಡ್ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮಹಿಳಾ ನಿರ್ಮಾಪಕಿಯೊಬ್ಬರು ಈ ಚಿತ್ರದ ಮೂಲಕ ಹೊರಬಂದಿದ್ದಾರೆ. ‘ನಶಿಬಾಸೋ ಖೆಳ್’ ಖ್ಯಾತಿಯ ಬಾಲಿವುಡ್ ನಿರ್ದೇಶಕ ಹೆರಿ ಫೆರ್ನಾಂಡೀಸ್ ಬಾರ್ಕೂರು ಈ ಚಿತ್ರಕ್ಕೆ ನಿರ್ದೇಶನದ ಜತೆಯಲ್ಲಿ ಕತೆ, ಚಿತ್ರಕತೆ ಹಾಗೂ ಸಂಭಾಷಣೆಯನ್ನು ಕೂಡ ಬರೆದಿದ್ದಾರೆ.

ಚಿತ್ರಕ್ಕೆ ಸಾಹಿತ್ಯವನ್ನು ಆನ್ಸಿ ಡಿಸೋಜ ಪಾಲಡ್ಕಾ, ಹೆರಿ ಫೆರ್ನಾಂಡೀಸ್ ನೀಡಿದ್ದಾರೆ. ಸಂಗೀತವನ್ನು ಖ್ಯಾತ ಸಂಗೀತ ನಿರ್ದೇಶಕ ಗುಣವಂತ್ ಸೇನ್ ನೀಡಿದ್ದಾರೆ. ಚಿತ್ರದಲ್ಲಿ ಆರು ಹಾಡುಗಳಿದ್ದು, ಎಲ್ಲವೂ ಈಗಾಗಲೇ ಜನಪ್ರಿಯವಾಗಿದೆ ಎಂದರು

ಗಣ್ಯರಿಂದ ಚಿತ್ರ ವೀಕ್ಷಣೆ: ಮೇ 12ರಂದು ಮಂಗಳೂರಿನ ಪ್ರಭಾತ್ ಸಿನಿಮಾ ಮಂದಿರದಲ್ಲಿ ಬೆಳಗ್ಗೆ 9 ಗಂಟೆಗೆ ಸೋಫಿಯಾದ ಮೊದಲ ಪ್ರದರ್ಶನದಲ್ಲಿ ಮಂಗಳೂರು ಕ್ರ್ತ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಅಲೋಶಿಯಸ್ ಪಾವ್ಲ್ ಡಿಸೋಜ, ಅನಿವಾಸಿ ಉದ್ಯಮಿ ರೊನಾಲ್ಡ್ ಕುಲಾಸೋ, ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡೀಸ್, ಅವರ ಪತ್ನಿ ಬ್ಲೋಸಂ ಫೆರ್ನಾಂಡೀಸ್ ಸೇರಿದಂತೆ ನಾನಾ ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಚಿತ್ರದ ನಿರ್ದೇಶಕ ಹೆರಿ ಫೆರ್ನಾಂಡೀಸ್, ಚಿತ್ರ ನಟ ಶೆಲ್ಟನ್ ಕ್ರಾಸ್ತಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X