Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಚ್‌ಐವಿ ಪೀಡಿತೆಗೆ 3 ಲಕ್ಷ ಪರಿಹಾರಕ್ಕೆ...

ಎಚ್‌ಐವಿ ಪೀಡಿತೆಗೆ 3 ಲಕ್ಷ ಪರಿಹಾರಕ್ಕೆ ಬಿಹಾರ ಸರಕಾರಕ್ಕೆ ಸುಪ್ರೀಂ ಆದೇಶ

ಗರ್ಭಪಾತಕ್ಕೆ ಅನುಮತಿ ನಿರಾಕರಣೆ

ವಾರ್ತಾಭಾರತಿವಾರ್ತಾಭಾರತಿ9 May 2017 7:29 PM IST
share
ಎಚ್‌ಐವಿ ಪೀಡಿತೆಗೆ 3 ಲಕ್ಷ ಪರಿಹಾರಕ್ಕೆ ಬಿಹಾರ ಸರಕಾರಕ್ಕೆ ಸುಪ್ರೀಂ ಆದೇಶ

ಹೊಸದಿಲ್ಲಿ,ಮೇ 9: ಗರ್ಭಪಾತಕ್ಕೆ ತನಗೆ ಅನುಮತಿ ನೀಡಬೇಕೆಂಬ ಎಚ್‌ಐವಿ ಪೀಡಿತ ಅತ್ಯಾಚಾರ ಸಂತ್ರಸ್ತೆಯ ಮನವಿಯನ್ನು ತಿರಸ್ಕರಿಸಿದ್ದಕ್ಕಾಗಿ 3 ಲಕ್ಷ ರೂ. ಪರಿಹಾರ ನೀಡುವಂತೆ ಸುಪ್ರೀಂಕೋರ್ಟ್ ಮಂಗಳವಾರ ಬಿಹಾರ ಸರಕಾರಕ್ಕೆ ಆದೇಶಿಸಿದೆ.

ಭಾರತದಲ್ಲಿ ತಾಯಿಯ ಜೀವಕ್ಕೆ ಅಪಾಯವಿರುವ ಸಂದರ್ಭಗಳನ್ನು ಹೊರತುಪಡಿಸಿ, ಗರ್ಭಿಣಿಗೆ 20 ವಾರಗಳೊಳಗೆ ಗರ್ಭಪಾತ ಮಾಡಿಕೊಳ್ಳುವುದಕ್ಕೆ ಕಾನೂನು ಮಿತಿ ವಿಧಿಸಿದೆ. ಗರ್ಭಪಾತಕ್ಕೆ ಅವಕಾಶ ನೀಡುವ ಅವಧಿಯನ್ನು 24 ವಾರಗಳವರೆಗೆ ವಿಸ್ತರಿಸುವುದಕ್ಕೆ ಅನುಮತಿ ನೀಡುವ ನೂತನ ಕರಡು ವಿಧೇಯಕವೊಂದು ಸಿದ್ಧಗೊಂಡಿದ್ದು ಅದು ಇನ್ನಷ್ಟೇ ಸಂಸತ್‌ನಲ್ಲಿ ಮಂಡನೆಯಾಗಬೇಕಿದೆ.

 ತಾನು ಎಚ್‌ಐವಿ ಪೀಡಿತೆಯಾಗಿರುವುದರಿಂದ ಗರ್ಭದಲ್ಲಿರುವ ತನ್ನ ಮಗುವಿಗೂ ಆ ಮಾರಣಾಂತಿಕ ಕಾಯಿಲೆಯ ಸೋಂಕು ತಗಲುವ ಅಪಾಯವಿದ್ದು, ಅದಕ್ಕಾಗಿ ತನಗೆ ಗರ್ಭಪಾತ ಮಾಡಿಸಿಕೊಳ್ಳಲು ಅನುಮತಿ ನೀಡಬೇಕೆಂದು 35 ವರ್ಷದ ಅನಾಥ ಮಹಿಳೆಯೊಬ್ಬರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈಗ 26 ತಿಂಗಳ ಗರ್ಭಿಣಿಯಾದ ಯುವತಿಯು ಗರ್ಭಪಾತ ಮಾಡಿಸಿಕೊಂಡಲ್ಲಿ ಆಕೆಗೆ ಜೀವಕ್ಕೆ ಅಪಾಯವಿದೆಯೆಂದು ನ್ಯಾಯಾಲಯ ನೇಮಿತಿ ಏಮ್ಸ್ ಆಸ್ಪತ್ರೆಯ ಸಮಿತಿಯೊಂದು ಸಲಹೆ ನೀಡಿದೆ.

  ಆದರೆ ಗರ್ಭದಲ್ಲಿರುವ ಭ್ರೂಣಕ್ಕೆ ಈ ಎಚ್‌ಐವಿ ಸೋಂಕು ತಗಲುವುದನ್ನು ತಡೆಯುವಂತಹ ಚಿಕಿತ್ಸಾ ಕ್ರಮವೊಂದನ್ನು ರೂಪಿಸುವಂತೆ ನ್ಯಾಯಮೂರ್ತಿ ದೀಪಕ್‌ಮಿಶ್ರಾ ನೇತೃತ್ವದ ನ್ಯಾಯಪೀಠವು ತಿಳಿಸಿದೆ. ಮಹಿಳೆಯು ನೆಲೆಸಿರುವ ಬಿಹಾರದ ಪಾಟ್ನಾದಲಿರುವ ಇಂದಿರಾಗಾಂಧಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯರಿಂದ ಆಕೆಗೆ ಚಿಕಿತ್ಸೆ ನೀಡುವಂತೆಯೂ ಅದು ಸೂಚನೆ ನೀಡಿದೆ.

ನ್ಯಾಯಾಲವು ಆಗಸ್ಟ್ 9ರಂದು ಪ್ರಕರಣದ ಮುಂದಿನ ಆಲಿಕೆಯನ್ನು ನಡೆಸಲಿದ್ದು, ನಿರ್ಲಕ್ಷದ ಕಾರಣಕ್ಕಾಗಿ ಬಿಹಾರ ಸರಕಾರವು ಮಹಿಳೆಗೆ ನೀಡಬೇಕಾದ ಒಟ್ಟು ಪರಿಹಾರದ ಮೊತ್ತವನ್ನು ನಿರ್ಧರಿಸಲಿದೆ.

 ಯುವತಿಯು 17 ವಾರಗಳ ಗರ್ಭಿಣಿಯಾಗಿದ್ದಾಗಲೇ ಗರ್ಭಪಾತ ಮಾಡುವಂತೆ ಸರಕಾರಿ ಆಸ್ಪತ್ರೆಯ ವೈದ್ಯರಿಗೆ ವಿನಂತಿಸಿದ್ದ್ಲಳು. ಆದಾಗ್ಯೂ ಆಸ್ಪತ್ರೆಯು ಆಕೆಯ ತಂದೆ ಈ ಬಗ್ಗೆ ಅನುಮತಿ ನೀಡುವಂತೆ ಸೂಚಿಸಿತ್ತು. ತಂದೆಯ ಸಮ್ಮತಿಯ ಬಳಿಕವೂ ಆಸ್ಪತ್ರೆಯಿಂದ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ ಮಹಿಳೆ ಪಾಟ್ನಾ ಹೈಕೋರ್ಟ್‌ನ ಮೆಟ್ಟಲೇರಿದ್ದಳು. ಆಗ ಆಕೆ 21 ವಾರಗಳ ಗರ್ಭಿಣಿಯಾಗಿದ್ದಳು.ಯುವತಿಯ ಗರ್ಭಪಾತಕ್ಕೆ ಅನುಮತಿ ನೀಡುವ ಬಗ್ಗೆ ಸಲಹೆ ಕೋರಿ ಪಾಟ್ನಾ ಹೈಕೋರ್ಟ್ ನೇಮಿಸಿದ ಸಮಿತಿಯು,ಆಕೆ ಸ್ವಲ್ಪ ಮಟ್ಟಿಗೆ ಮಾನಸಿಕ ಅಸ್ವಸ್ಥಳಾಗಿರುವುದಾಗಿ ತಿಳಿಸಿತ್ತು. ಆದರೆ ಸಮಿತಿಯು ಗರ್ಭಪಾತಕ್ಕೆ ಅನುಮತಿ ನೀಡಬೇಕೇ ಎಂಬ ಬಗ್ಗೆ ಸ್ಪಷ್ಟವಾದ ಅಭಿಪ್ರಾಯವನ್ನು ತಿಳಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಗರ್ಭಪಾತದಿಂದ ಅರ್ಜಿದಾರಳ ಜೀವಕ್ಕೆ ಅಪಾಯವಿದೆಯೆಂದು ಭಾವಿಸಿ ಪಾಟ್ನಾ ಹೈಕೋರ್ಟ್ ಗರ್ಭಪಾತಕ್ಕೆ ಅನುಮತಿ ನೀಡಿರಲಿಲ್ಲ ಎಂದು ಆಕೆಯ ವಕೀಲೆ ವೃಂದಾ ಗ್ರೋವರ್ ತಿಳಿಸಿದ್ದಾರೆ.

   ಮಹಿಳೆಯು 17 ವಾರಗಳ ಗರ್ಭಿಣಿಯಾಗಿದ್ದಾಗಲೇ ಗರ್ಭಪಾತಕ್ಕೆ ಅನುಮತಿ ಕೋರಿದ್ದಳು. ಆದರೆ ಬಿಹಾರ ಸರಕಾರದ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಅದಕ್ಕೆ ಉತ್ತರಿಸುವಲ್ಲಿ ವಿಳಂಬಿಸಿದ್ದರೆಂದು ನ್ಯಾಯಾಲಯ ಆಕ್ಷೇಪ ವ್ಯಕ್ತಪಡಿಸಿದೆ. ವಿವಾಹ ವಿಚ್ಛೇದಿತಳಾದ ಈ ಯುವತಿಯು ತನಗೆ ಗರ್ಭಪಾತಕ್ಕೆ ಅವಕಾಶ ನೀಡದ ಪಾಟ್ನಾ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದಳು. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಮೇ 3ರಂದು ಮಹಿಳೆಯನ್ನು ವೈದ್ಯಕೀಯ ತಪಾಸಣೆಗೊಳಪಡಿಸಲು ಸಮಿತಿಯೊಂದನ್ನು ರಚಿಸುವಂತೆ ಏಮ್ಸ್‌ಗೆ ಸೂಚಿಸಿತ್ತು. ಪಾಟ್ನಾದ ಅನಾಥಾಶ್ರಮವೊಂದರಲ್ಲಿ ವಾಸವಾಗಿದ್ದ ಆ ಮಹಿಳೆಯನ್ನು ಆನಂತರ ಹೊಸದಿಲ್ಲಿಗೆ ಕರೆತರಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X