Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕಾನೂನು ಪ್ರಕ್ರಿಯೆ ಪೂರ್ಣಗೊಂಡ ಬಳಿಕವೇ...

ಕಾನೂನು ಪ್ರಕ್ರಿಯೆ ಪೂರ್ಣಗೊಂಡ ಬಳಿಕವೇ ಉಝ್ಮ ವಾಪಸ್ : ಪಾಕ್ ವಿದೇಶ ಕಚೇರಿ

ವಾರ್ತಾಭಾರತಿವಾರ್ತಾಭಾರತಿ9 May 2017 8:12 PM IST
share
ಕಾನೂನು ಪ್ರಕ್ರಿಯೆ ಪೂರ್ಣಗೊಂಡ ಬಳಿಕವೇ ಉಝ್ಮ ವಾಪಸ್ : ಪಾಕ್ ವಿದೇಶ ಕಚೇರಿ

ಇಸ್ಲಾಮಾಬಾದ್, ಮೇ 9: ತನ್ನನ್ನು ಬಂದೂಕು ತೋರಿಸಿ ಪಾಕಿಸ್ತಾನಿ ವ್ಯಕ್ತಿಯ ಜೊತೆ ಮದುವೆ ಮಾಡಲಾಗಿದೆ ಎಂದು ಹೇಳುತ್ತಿರುವ ಭಾರತೀಯ ಮಹಿಳೆಯನ್ನು ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕವಷ್ಟೇ ಭಾರತಕ್ಕೆ ಕಳುಹಿಸಲಾಗುವುದು ಎಂದು ಪಾಕಿಸ್ತಾನದ ವಿದೇಶ ಕಚೇರಿ ಮಂಗಳವಾರ ಹೇಳಿದೆ.

ತನ್ನನ್ನು ಉಝ್ಮ ಎಂದಷ್ಟೆ ಗುರುತಿಸಿಕೊಂಡಿರುವ ಭಾರತೀಯ ಮಹಿಳೆ ಪ್ರಸಕ್ತ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿದ್ದಾರೆ.
ಉಝ್ಮರ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ ಹಾಗೂ ಕಾನೂನು ಅವಶ್ಯಕತೆಗಳು ಪೂರ್ಣಗೊಂಡ ಬಳಿಕವಷ್ಟೆ ಅವರಿಗೆ ಭಾರತಕ್ಕೆ ಮರಳಲು ಸಾಧ್ಯವಾಗುತ್ತದೆ ಎಂದು ವಿದೇಶ ಕಚೇರಿಯ ವಕ್ತಾರ ನಫೀಸ್ ಝಕಾರಿಯ ‘ಡಾನ್ ನ್ಯೂಸ್’ ಚಾನೆಲ್‌ಗೆ ಹೇಳಿದರು.

ಖೈಬರ್-ಪಖ್ತೂಂಖ್ವ ಪ್ರಾಂತದ ನಿವಾಸಿ ತಾಹಿರ್ ಖಾನ್ ಜೊತೆಗೆ ನಡೆದ ಉಝ್ಮಾರ ಮದುವೆಗೆ ಸಂಬಂಧಿಸಿದ ವಿವರಗಳನ್ನು ನೀಡುವಂತೆ ಭಾರತೀಯ ವಿದೇಶ ವ್ಯವಹಾರಗಳ ಸಚಿವಾಲಯ ಪಾಕಿಸ್ತಾನಿ ವಿದೇಶ ಕಚೇರಿಯನ್ನು ಕೋರಿದೆ ಎಂದು ಝಕಾರಿಯ ತಿಳಿಸಿದರು.

ಇಪ್ಪತ್ತು ವರ್ಷದ ಉಝ್ಮ ಸೋಮವಾರ ಇಸ್ಲಾಮಾಬಾದ್‌ನಲ್ಲಿರುವ ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, ‘‘ನಾನು ನನ್ನ ಇಚ್ಛೆಯ ಮೇರೆಗೆ ತಾಯ್ನೆಲಕ್ಕೆ ಮರಳಲು ಬಯಸುತ್ತೇನೆ’’ ಎಂದು ಹೇಳಿದ್ದರು.

‘‘ನಾನು ಸಂಪೂರ್ಣ ಭದ್ರತೆಯೊಂದಿಗೆ ನನ್ನ ಮನೆಗೆ ಮರಳಲು ಇಚ್ಛಿಸುತ್ತೇನೆ’’ ಎಂದು ಅವರು ಅರ್ಜಿಯಲ್ಲಿ ಹೇಳಿದ್ದರು.

‘‘ದಿಲ್ಲಿಯಲ್ಲಿರುವ ನನ್ನ ಮನೆಗೆ ಮರಳುವ ಮುನ್ನ ಭಾರತೀಯ ರಾಯಭಾರ ಕಚೇರಿಯಿಂದ ಹೊರಗೆ ಹೋಗಲು ನಾನು ಬಯಸುವುದಿಲ್ಲ’’ ಎಂದಿದ್ದರು.
ಅವರ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಜುಲೈ 11ಕ್ಕೆ ನಿಗದಿಪಡಿಸಿದೆ.

ತಾಹಿರ್ ಖಾನ್‌ಗೆ ಈಗಾಗಲೇ ಮದುವೆಯಾಗಿದ್ದು ನಾಲ್ಕು ಮಕ್ಕಳಿದ್ದಾರೆ ಎನ್ನುವ ವಿಷಯ ಗೊತ್ತಾದ ಬಳಿಕ ಉಝ್ಮಾ ಕಳೆದ ವಾರ ಭಾರತೀಯ ರಾಯಭಾರ ಕಚೇರಿಯಲ್ಲಿ ಆಶ್ರಯ ಕೋರಿದ್ದರು.

ತಾಹಿರ್ ಬಂದೂಕು ತೋರಿಸಿ ನಿಖಾ ನಾಮಕ್ಕೆ ಸಹಿ ಹಾಕಲು ಬಲವಂತಪಡಿಸಿದ್ದನು ಎಂದು ಸೋಮವಾರ ನಡೆದ ವಿಚಾರಣೆಯ ವೇಳೆ ಉಝ್ಮೆ ನ್ಯಾಯಾಲಯದಲ್ಲಿ ಹೇಳಿದರು. ತಾಹಿರ್ ತನ್ನ ಮೇಲೆ ಲೈಂಗಿಕ ಹಲ್ಲೆ ನಡೆಸಿದ್ದಾನೆ ಹಾಗೂ ಹಿಂಸೆ ನೀಡಿದ್ದಾನೆ ಎಂಬುದಾಗಿಯೂ ಆರೋಪಿಸಿದ ಅವರು, ಕೊಲ್ಲುವ ಬೆದರಿಕೆಯನ್ನೂ ಹಾಕಿದ್ದಾನೆ ಎಂದು ಆರೋಪಿಸಿದರು.

ಕಳೆದ ವರ್ಷ ಮಲೇಶ್ಯದಲ್ಲಿ ಉಝ್ಮಗೆ ಖಾನ್ ಪರಿಚಯವಾಗಿತ್ತು.

ಪಾಕಿಸ್ತಾನಿ ವೀಸಾ ಪಡೆದು ವಾಘಾ ಗಡಿ ದಾಟಿದ ತನಗೆ ತಾಹಿರ್ ನಿದ್ದೆ ಗುಳಿಗೆ ತಿನ್ನಿಸಿ ಅಪಹರಿಸಿ ತನ್ನನ್ನು ಬಲವಂತವಾಗಿ ಮದುವೆಯಾಗಿದ್ದಾನೆ ಎಂದು ಉಝ್ಮಾ ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X