ಸ್ವಉದ್ಯೋಗಕ್ಕೆ ಅವಕಾಶ; ಆನ್ಲೈನ್ ಅರ್ಜಿ
ಉಡುಪಿ, ಮೇ 9: ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಸಿಎಂಇಜಿಪಿ)ಯಡಿ 2017-18ನೇ ಸಾಲಿನಲ್ಲಿ ಸ್ವಉದ್ಯೋಗ ಕೈಗೊಳ್ಳಲು ಆಸಕ್ತಿ ಇರುವ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ/ಯುವತಿ ಯರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಯೋಜನೆಯನ್ನು ಕರ್ನಾಟಕ ಸರಕಾರ, ಗ್ರಾಮೀಣ ಪ್ರದೇಶದಲ್ಲಿ ಸ್ವಂತ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗು ಕರ್ನಾಟಕ ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿ (ಕೆವಿಐಬಿ) ಗಳ ಮೂಲಕ ಜಾರಿಗೊಳಿಸುತ್ತಿದೆ.
ಈ ಯೋಜನೆಯಲ್ಲಿ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ ಯುವತಿಯರಿಗೆ ಗರಿಷ್ಠ ಯೋಜನಾ ವೆಚ್ಚ 10 ಲಕ್ಷ ರೂ. ಬ್ಯಾಂಕ್ ಸಾಲ ದೊಂದಿಗೆ ಹೊಸ ಕೈಗಾರಿಕಾ ಉತ್ಪಾದನೆ ಚಟುವಟಿಕೆ ಹಾಗೂ ಆಯ್ದ ಕೆಲವು ಸೇವಾ ಘಟಕ ಸ್ಥಾಪಿಸುವವರಿಗೆ ಅವಕಾಶವಿದ್ದು, ಯೋಜನಾ ವೆಚ್ಚದ ಶೇ. 25ರಿಂದ 35ರವರೆಗೆ ಸಹಾಯಧನ ನೀಡಲಾಗುವುದು.
ಇದಕ್ಕಾಗಿ ಅರ್ಜಿದಾರ ಅ್ಯರ್ಥಿ 8ನೇ ತರಗತಿ ಉತ್ತೀರ್ಣರಾಗಿರಬೇಕು. ಕನಿಷ್ಠ 21 ವರ್ಷ ತುಂಬಿರಬೇಕು, ಗರಿಷ್ಠ 35ವರ್ಷ (ಸಾಮಾನ್ಯ ವರ್ಗ) ಹಾಗೂ ಗರಿಷ್ಠ 45 ವರ್ಷ ವಿಶೇಷ ವರ್ಗದ ಉದ್ದಿಮೆದಾರರಿಗೆ (ವಿಶೇಷ ವರ್ಗ/ ಮಹಿಳೆ/ಪರಿಶಿಷ್ಠ ಜಾತಿ/ ಪರಿಶಿಷ್ಠ ಪಂಗಡ/ ಹಿಂದುಳಿದ ವರ್ಗ/ ಅಲ್ಪಸಂಖ್ಯಾತರು/ಮಾಜಿ ಯೋಧರು/ಅಂಗವಿಕಲರು).
ನಿರುದ್ಯೋಗಿ ಯುವಕ/ಯುವತಿಯರು ವೆಬ್ಸೈಟ್ -http://cmegp.kar.nic.in - ಮೂಲಕ ಆನ್ಲೈನ್ನಲ್ಲಿ ಅರ್ಜಿಯನ್ನು ನೊಂದಾಯಿಸಿ, ಇಂಟರ್ನೆಟ್ನಲ್ಲಿ ತೆಗೆದ ಅರ್ಜಿಯನ್ನು ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, 36-ಸಿ, ಶಿವಳ್ಳಿ, ಕೈಗಾರಿಕಾ ಪ್ರದೇಶ, ಮಣಿಪಾಲ ಉಡುಪಿ- 576104 (ದೂರವಾಣಿ:0820-2575650) ಅಥವಾ ಜಿಲ್ಲಾ ಅಧಿಕಾರಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ರಜತ್ರಾದಿ, ಬಿ ಬ್ಲಾಕ್, 2ನೇ ಮಹಡಿ, ಮಣಿಪಾಲ, ಉಡುಪಿ (ದೂರವಾಣಿ: 0820-2574855) ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ವಿವರಗಳನ್ನು ಜಿಲ್ಲಾ ಕೈಗಾರಿಕಾ ಕೇಂದ್ರ, 36-ಸಿ, ಶಿವಳ್ಳಿ, ಕೈಗಾರಿಕಾ ಪ್ರದೇಶ, ಮಣಿಪಾಲ ಹಾಗೂ ತಾಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿ ಕಚೇರಿ ಯಲ್ಲಿ ಪಡೆಯಬಹುದು. ಅ್ಯರ್ಥಿಗೆ ಒಂದು ವಾರದ ಉದ್ಯಮಶೀಲತಾ ತರಬೇತಿ ಪಡೆಯುವುದು ಕಡ್ಡಾಯವಾಗಿದೆ. ಮೇ 10ರಿಂದ ಜೂ.12ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಇಂಟರ್ನೆಟ್ನಲ್ಲಿ ತೆಗೆದ ಅರ್ಜಿಯ ಪ್ರಿಂಟ್ ಪ್ರತಿ ಹಾಗೂ ಇತರ ದಾಖಲೆಗಳನ್ನು ಈ ಕಛೇರಿಗೆ ಅಥವಾ ಕೆವಿಐಬಿಗೆ ಸಲ್ಲಿಸಲು ಜೂನ್ 30ರವರೆಗೆ ಮಾತ್ರ ಅವಕಾಶವಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಪ್ರಕಟಣೆ ತಿಳಿಸಿದೆ.







