Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಶೂಟರ್‌ಗಳನ್ನು ವಿಮಾನ ನಿಲ್ದಾಣದಲ್ಲಿ...

ಶೂಟರ್‌ಗಳನ್ನು ವಿಮಾನ ನಿಲ್ದಾಣದಲ್ಲಿ ತಡೆಹಿಡಿದ ಕಸ್ಟಮ್ಸ್ ಅಧಿಕಾರಿಗಳು!

ವಾರ್ತಾಭಾರತಿವಾರ್ತಾಭಾರತಿ9 May 2017 9:44 PM IST
share
ಶೂಟರ್‌ಗಳನ್ನು ವಿಮಾನ ನಿಲ್ದಾಣದಲ್ಲಿ ತಡೆಹಿಡಿದ ಕಸ್ಟಮ್ಸ್ ಅಧಿಕಾರಿಗಳು!

 ಹೊಸದಿಲ್ಲಿ, ಮೇ 9: ಒಲಿಂಪಿಯನ್ ಶೂಟರ್‌ಗಳಾದ ಗುರುಪ್ರೀತ್ ಸಿಂಗ್ ಹಾಗೂ ಕಿನನ್ ಚೆನೈ ಸಹಿತ ಇತರ 10 ಅಂತಾರಾಷ್ಟ್ರೀಯ ಶೂಟರ್‌ಗಳನ್ನು ಕಸ್ಟಮ್ಸ್ ಅಧಿಕಾರಿಗಳು ಇಂದಿರಾಗಾಂಧಿ ಇಂಟರ್‌ನ್ಯಾಶನಲ್ ಏರ್‌ಪೋರ್ಟ್‌ನಲ್ಲಿ ಸುಮಾರು 12 ಗಂಟೆಗೂ ಅಧಿಕ ಕಾಲ ಹಿಡಿದಿಟ್ಟುಕೊಂಡ ಘಟನೆ ಮಂಗಳವಾರ ನಡೆದಿದೆ.

ಸಿಪ್ರಸ್‌ನಲ್ಲಿ ಶೂಟಿಂಗ್ ವಿಶ್ವಕಪ್‌ನಲ್ಲಿ ಭಾಗವಹಿಸಿ ವಾಪಸಾಗುತ್ತಿದ್ದ ವೇಳೆ ಶೂಟರ್‌ಗಳನ್ನು ತಡೆದ ಕಸ್ಟಮ್ಸ್ ಅಧಿಕಾರಿಗಳು ಅವರ ಬಳಿಯಿದ್ದ ಶೂಟಿಂಗ್ ಗನ್‌ಗಳನ್ನು ವಶಪಡಿಸಿಕೊಂಡಿದ್ದರು. ಕಸ್ಟಮ್ಸ್ ವಿಭಾಗ ಶೂಟರ್‌ಗಳ ಗನ್‌ಗಳನ್ನು ತುಂಬಾ ಹೊತ್ತು ವಾಪಸ್ ನೀಡದೇ ಶೂಟರ್‌ಗಳನ್ನು ಆತಂಕಕ್ಕೆ ತಳ್ಳಿತ್ತು.

 ‘‘20 ಗಂಟೆ ವಿಮಾನದಲ್ಲಿ ಪ್ರಯಾಣಿಸಿ ಬೆಳಗ್ಗೆ 4 ಗಂಟೆಗೆ ದಿಲ್ಲಿ ವಿಮಾನ ನಿಲ್ದಾಣವನ್ನು ತಲುಪಿದ್ದೆವು. ನಮ್ಮ ಗನ್‌ಗಳನ್ನು ವಶಪಡಿಸಿಕೊಂಡಿದ್ದ ಕಸ್ಟಮ್ಸ್ ವಿಭಾಗ ಕಮಿಶನರ್ ಬರುವ ತನಕ ಕಾಯಿರಿ ಎಂದು ಹೇಳಿದ್ದರು. ಅವರು ಬೆಳಗ್ಗೆ 10 ಗಂಟೆ ಬರಬೇಕಿದ್ದವರು ಬಂದಿರಲಿಲ್ಲ. ಅಧಿಕಾರಿ ಯಾವಾಗ ಬರುತ್ತಾರೆಂದು ನಮಗೆ ಗೊತ್ತಿರಲಿಲ್ಲ. ನಮ್ಮನ್ನು ಏಕೆ ಹಿಡಿದಿಟ್ಟುಕೊಳ್ಳಲಾಗಿದೆ ಎಂದೇ ಗೊತ್ತಿರಲಿಲ್ಲ. ನಾವು ಅಂತಾರಾಷ್ಟ್ರೀಯ ಶೂಟರ್‌ಗಳಾಗಿದ್ದು, ವಿಶ್ವದೆಲ್ಲೆಡೆ ಪ್ರಯಾಣಿಸುತ್ತಿರುತ್ತೇವೆ. ನಾವು ವಿಮಾನ ಪ್ರಯಾಣದಿಂದ ಬಳಲಿದ್ದೆವು. ಈ ಬಗ್ಗೆ ಅಧಿಕಾರಿಗೆ ತಿಳಿಸಿದರೆ, ‘ನೀವು ತಿನ್ನದಿದ್ದರೆ ಸಾಯಿಯುವುದಿಲ್ಲ’’ ಎಂದು ಉದ್ದಟನದ ಉತ್ತರ ನೀಡಿದ್ದರು. ನಾವು ಸ್ಟಾಂಪ್ ಇದ್ದ ಪತ್ರಗಳನ್ನು, ನಮ್ಮ ಗನ್‌ಗಳ ಸಿರೀಯಲ್ ನಂಬರ್ ನೀಡಿದರೂ ನಮ್ಮ ಮೇಲೆ ಅವರಿಗೆ ನಂಬಿಕೆ ಬರಲಿಲ್ಲ’’ ಎಂದು ಶೂಟರ್‌ವೊಬ್ಬರು ಹೇಳಿದ್ದಾರೆ.

ಎನ್‌ಆರ್‌ಎಐ ವಿರುದ್ಧ ಬಿಂದ್ರಾ ಆಕ್ರೋಶ:

ಹೊಸದಿಲ್ಲಿ, ಮೇ 9: ಐಜಿ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳಿಂದ ಕೆಲವು ಗಂಟೆಗಳ ಕಾಲ ಬಂಧಿಲಸ್ಪಟ್ಟಿದ್ದ ಶೂಟರ್‌ಗಳ ನೆರವಿಗೆ ಧಾವಿಸದ ಭಾರತದ ರೈಫಲ್ ಸಂಸ್ಥೆ(ಎನ್‌ಆರ್‌ಎಐ) ವಿರುದ್ಧ ಮಾಜಿ ಶೂಟರ್ ಅಭಿನವ್ ಬಿಂದ್ರಾ ಕಿಡಿಕಾರಿದ್ದಾರೆ.

‘‘ನಮ್ಮ ಶೂಟರ್‌ಗಳನ್ನು ದಿಲ್ಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಿರುವ ಸುದ್ದಿ ಕೇಳಿ ಬೇಸರವಾಯಿತು. ಕೆಲವು ಅಥ್ಲೀಟ್‌ಗಳ ಬಳಿ ಮಾತನಾಡಿದಾಗ ರಾಷ್ಟ್ರೀಯ ಶೂಟಿಂಗ್ ಫೆಡರೇಶನ್‌ನಿಂದ ನೆರವು ಸಿಗದಿರುವುದು ಗೊತ್ತಾಯಿತು. ಶೂಟರ್‌ಗಳು ನಮ್ಮ ದೇಶದ ರಾಯಭಾರಿಗಳು, ಅವರನ್ನು ಈರೀತಿ ನಡೆಸಿಕೊಳ್ಳಬಾರದಿತ್ತು. ಕ್ರಿಕೆಟ್ ಆಟಗಾರರಿಗೆ ಯಾವತ್ತಾದರೂ ಈರೀತಿ ಆಗಿದೆಯೇ’’ ಎಂದು ಬಿಂದ್ರಾ ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X