Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯೋಧ ಉಮರ್ ಫಯಾಜ್ ಎಲ್ಲರಿಗೂ ಮಾದರಿ:ಅರುಣ್...

ಯೋಧ ಉಮರ್ ಫಯಾಜ್ ಎಲ್ಲರಿಗೂ ಮಾದರಿ:ಅರುಣ್ ಜೇಟ್ಲಿ

ಕರ್ತವ್ಯಕ್ಕೆ ಸೇರಿದ ಐದೇ ತಿಂಗಳಲ್ಲಿ ಹುತಾತ್ಮ

ವಾರ್ತಾಭಾರತಿವಾರ್ತಾಭಾರತಿ10 May 2017 10:56 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಯೋಧ ಉಮರ್ ಫಯಾಜ್ ಎಲ್ಲರಿಗೂ ಮಾದರಿ:ಅರುಣ್ ಜೇಟ್ಲಿ

ಹೊಸದಿಲ್ಲಿ,ಮೇ 10: ದಕ್ಷಿಣ ಕಾಶ್ಮೀರದ ಶೋಪಿಯಾನ್‌ನಲ್ಲಿ ಭಯೋತ್ಪಾದಕರಿಂದ ಅಪಹೃತನಾಗಿ ಅವರ ಗುಂಡುಗಳಿಗೆ ಬಲಿಯಾದ ಕಾಶ್ಮೀರಿ ಸೇನಾಧಿಕಾರಿ ಲೆಉಮರ್ ಫಯಾಜ್ ಅವರು ಎಲ್ಲರಿಗೂ ಮಾದರಿಯಾಗಿದ್ದಾರೆ ಮತ್ತು ಕಾಶ್ಮೀರ ಕಣಿವೆಯ ಯುವಜನರಿಗೆ ಸ್ಫೂರ್ತಿಯಾಗಿ ಮುಂದುವರಿಯುತ್ತಾರೆ ಎಂದು ರಕ್ಷಣಾ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಭಯೋತ್ಪಾದಕರಿಂದ ಲೆಉಮರ್ ಫಯಾಜ್ ಅವರ ಅಪಹರಣ ಮತ್ತು ಹತ್ಯೆ ಹೇಡಿತನದ ಕೃತ್ಯವಾಗಿದೆ. ಜಮ್ಮು-ಕಾಶ್ಮೀರದ ಈ ಯುವ ಸೇನಾಧಿಕಾರಿ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಜೇಟ್ಲಿ ಟ್ವೀಟಿಸಿದ್ದಾರೆ. ಗುಂಡುಗಳಿಂದ ಛಿದ್ರಗೊಂಡಿದ್ದ ಫಯಾಜ್ ಶವ ಇಂದು ಬೆಳಿಗ್ಗೆ ಶೋಪಿಯಾನ್‌ನಲ್ಲಿ ಪತ್ತೆಯಾಗಿತ್ತು.

ಫಯಾಜ್ ಅವರ ಕುಟುಂಬದ ದುಃಖದಲ್ಲಿ ನಾವು ಭಾಗಿಯಾಗಿದ್ದೇವೆ ಮತ್ತು ನಾವು ಅವರೊಂದಿಗಿದ್ದೇವೆ. ಫಯಾಜ್ ಅವರು ಕಣಿವೆಯ ಯುವಜನರಿಗೆ ಸ್ಫೂರ್ತಿ ನೀಡುವುದನ್ನು ಮುಂದುವರಿಸಲಿದ್ದಾರೆ ಎಂದೂ ಜೇಟ್ಲಿ ಟ್ವೀಟಿಸಿದ್ದಾರೆ.

ಸೇನೆಯು ಕರುಳಿನ ಕುಡಿಯನ್ನು ಕಳೆದುಕೊಂಡಿರುವ ದುಃಖತಪ್ತ ಕುಟುಂಬಕ್ಕೆ ಬೆಂಬಲವಾಗಿ ನಿಂತಿದೆ ಎಂದು ರಾಜಪುತಾನಾ ರೈಫಲ್ಸ್‌ನ ಲೆಜ ಅಭಯ ಕೃಷ್ಣ ಅವರು ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

ಐದು ತಿಂಗಳ ಹಿಂದಷ್ಟೇ ಸೇನೆಯ ಕರ್ತವ್ಯಕ್ಕೆ ಸೇರಿದ್ದ 22ರ ಹರೆಯದ ಫಯಾಜ್ ಮದುವೆಯೊಂದರಲ್ಲಿ ಪಾಲ್ಗೊಳ್ಳಲು ಮನೆಗೆ ಮರಳಿದ್ದರು. ಈ ಸಂದರ್ಭ ಸಾಧಿಸಿದ ಭಯೋತ್ಪಾದಕರು ಮಂಗಳವಾರ ರಾತ್ರಿ ಅವರನ್ನು ಅಪಹರಿಸಿದ್ದರು.

ಇದು ಕಾಶ್ಮೀರ ಕಣಿವೆಯಲ್ಲಿ ಮಹತ್ವದ ತಿರುವು ನೀಡಿರುವ ಘಳಿಗೆಯಾಗಿದೆ ಮತ್ತು ಕಾಶ್ಮೀರದ ಜನರ ಆಕ್ರೋಶ ಖಂಡಿತವಾಗಿಯೂ ಭೀತಿವಾದದ ವಿರುದ್ಧ ಅಲೆಗಳ ನ್ನೆಬ್ಬಿಸಲಿದೆ ಎಂದು ಸೇನೆಯ ಹೇಳಿಕೆಯು ತಿಳಿಸಿದೆ.

 ಫಯಾಜ್‌ರಿಗೆ ಅಂತಿಮ ನಮನಗಳನ್ನು ಸಲ್ಲಿಸಲು ಅವರ ನಿವಾಸದಲ್ಲಿ ಏರ್ಪಡಿಸಿದ್ದ ಅಧಿಕೃತ ಕಾರ್ಯಕ್ರಮಕ್ಕೆ ಆತಂಕಭರಿತ, ಶೋಕತಪ್ತ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಫಯಾಜ್‌ರ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛಗಳನ್ನು ಅರ್ಪಿಸುವ ಸಂದರ್ಭದಲ್ಲಿ ಮನೆಯ ಬಳಿ ಕಲ್ಲುತೂರಾಟದಂತಹ ಕೆಲವು ಸಣ್ಣಪುಟ್ಟ ಘಟನೆಗಳು ನಡೆದಿದ್ದವು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.

ಫಯಾಜ್ ಹತ್ಯೆಯನ್ನು ಖಂಡಿಸಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ ಮಾಧವ್ ಅವರು, ಈ ಬರ್ಬರ ಹತ್ಯೆಯು ಭೀತಿವಾದದ ಹೇಡಿತನದ ಸ್ವರೂಪವನ್ನು ಪ್ರದರ್ಶಿಸಿದೆ ಎಂದು ಹೇಳಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X