Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೇ18: ವಿವೇಕಾನಂದ ಕನ್ನಡ ಮಾದ್ಯಮ ಶಾಲೆಯ...

ಮೇ18: ವಿವೇಕಾನಂದ ಕನ್ನಡ ಮಾದ್ಯಮ ಶಾಲೆಯ ಬೆಳ್ಳಿ ಹಬ್ಬ

ವಾರ್ತಾಭಾರತಿವಾರ್ತಾಭಾರತಿ10 May 2017 6:29 PM IST
share

ಪುತ್ತೂರು, ಮೇ 10: ದ.ಕ. ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ವಿವೇಕಾನಂದ ವಿದ್ಯಾವರ್ಧಕ ಸಂಘದ ಪ್ರವರ್ತನೆಯಲ್ಲಿ ಕಾರ್ಯಾಚರಿಸುತ್ತಿರುವ ನಗರದ ತೆಂಕಿಲದಲ್ಲಿನ ವಿವೇಕಾನಂದ ಕನ್ನಡ ಮಾದ್ಯಮ ಶಾಲೆಯ ಬೆಳ್ಳಿಹಬ್ಬ ಸಮಾರಂಭ ಮೇ18ರಂದು ನಡೆಯಲಿದೆ. ಈ ಸಂದರ್ಭ ಬೆಳ್ಳಿಹಬ್ಬದ ಸವಿನೆನಪಿಗಾಗಿ 7 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಕಟ್ಟಡ ಲೋಕಾರ್ಪಣೆಗೊಳ್ಳಲಿದೆ ಎಂದು ಶಾಲಾ ಆಡಳಿತ ಸಮಿತಿಯ ಅಧ್ಯಕ್ಷ ಎಚ್. ಅಚ್ಚುತ್ ನಾಯಕ್ ತಿಳಿಸಿದರು.

ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನೂತನ ಕಟ್ಟಡವನ್ನು ಕೆಂದ್ರ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ದೇಕರ್ ಉದ್ಘಾಟಿಸಲಿದ್ದಾರೆ. ಸಭಾಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕುಟುಂಬ ಪ್ರಭೋದನದ ಅಖಿಲ ಭಾರತೀಯ ಸಂಯೋಜಕ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಪಾಲ್ಗೊಳ್ಳಲಿದ್ದಾರೆ. ಗ್ರಾಂಥಾಲಯದ ಉದ್ಘಾಟನೆಯನ್ನು ಸಂಸದ ನಳಿನ್ ಕುಮಾರ್ ಕಟೀಲ್, ಗಣಕಯಂತ್ರ ಕೊಠಡಿ ಉದ್ಘಾಟನೆಯನ್ನು ಕೆಂದ್ರ ಹಣಕಾಸು ಇಲಾಖೆಯ ಸಹಾಯಕ ಸಚಿವ ಅರ್ಜುನ್‌ರಾಮ್ ಮೇಫ್ವಾಲ್ ನೆರವೇರಿಸಲಿದ್ದಾರೆ. ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್. ಶಶಿಧರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ಅಂದು ಸಂಜೆ 3ಕ್ಕೆ ಶಾಲಾ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು.
ನೂತನ ಕಟ್ಟಡದಲ್ಲಿ ಸುಸಜ್ಜಿತ ಗ್ರಂಥಾಲಯವನ್ನು ತೆರೆಯಲಾಗುವುದು. ಈ ಸಂದರ್ಭ ಗ್ರಂಥಾಲಯಕ್ಕೆ ಪುಸ್ತಕ ಸಮರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಗ್ರಂಥಾಲಯದ ಬಳಿ 4 ಪುಸ್ತಕ ಮಳಿಗೆಗಳನ್ನು ತೆರೆಯಲಾಗುವುದು. ಶಿಕ್ಷಣ ಪ್ರೇಮಿಗಳು ಇಲ್ಲಿಂದ ಪುಸ್ತಕ ಖರೀದಿಸಿ ಗ್ರಂಥಾಲಯಕ್ಕೆ ಸಮರ್ಪಿಸಲು ಅವಕಾಶವಿದೆ. ಶಾಲಾ ಕಟ್ಟಡವು 3 ಹಂತಗಳನ್ನು ಹೊಂದಿದ್ದು 25 ತರಗತಿ ಕೊಠಡಿಗಳಿವೆ. ಇಲ್ಲಿ ಸುಸಜ್ಜಿತ ಪ್ರಯೋಗಾಲಯ, ವಿಜ್ಞಾನ ಆವಿಷ್ಕಾರಗಳ ಅನ್ವೇಷಣಾ ಕೊಠಡಿ, ಆಪ್ತ ಸಲಹಾ ಕೇಂದ್ರ, ಗ್ರಂಥಾಲಯವಿದೆ. ಈ ಕಟ್ಟಡ 50 ಸಾವಿರ ಚದರ ಅಡಿ ವಿಸ್ತೀರ್ಣ ಹೊಂದಿದೆ.


ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬೆಳ್ಳಿಹಬ್ಬ ಸಮಾರಂಭದ ಆಮಂತ್ರಣ ವಿತರಣಾ ಕಾರ್ಯಕ್ರಮ ಮೇ11ರಂದು ನಡೆಯಲಿದೆ. ಬೆಳಗ್ಗೆ ನಗರದ ಬೊಳುವಾರು ಶ್ರೀ ಆಂಜನೇಯ ಮಂತ್ರಾಲಯದಿಂದ ಮೆರವಣಿಗೆ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಆಮಂತ್ರಣ ವಿತರಣೆ ಮಾಡಲಾಗುವುದು. ಮೇ 18ರ ಕಾರ್ಯಕ್ರಮದಲ್ಲಿ 5 ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್, ಬೆಳ್ಳಿಹಬ್ಬ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಹೇರಳೆ, ಕಾರ್ಯದರ್ಶಿ ಹರಿಣಿ ಪುತ್ತೂರಾಯ, ಶಾಲಾ ಸಂಚಾಲಕ ವಿನೋದ್ ರೈ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X