Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ. ಅಂಗನವಾಡಿಗಳಿಗೆ ‘ಎಸಿ ಭಾಗ್ಯ’!

ದ.ಕ. ಅಂಗನವಾಡಿಗಳಿಗೆ ‘ಎಸಿ ಭಾಗ್ಯ’!

ಆರಂಭದಲ್ಲಿ ಹತ್ತು ಅಂಗನವಾಡಿಗಳಿಗೆ ಅಳವಡಿಕೆ

ವಾರ್ತಾಭಾರತಿವಾರ್ತಾಭಾರತಿ10 May 2017 11:48 PM IST
share
ದ.ಕ. ಅಂಗನವಾಡಿಗಳಿಗೆ ‘ಎಸಿ ಭಾಗ್ಯ’!

ಮಂಗಳೂರು, ಮೇ 10: ಅಂಗನವಾಡಿ ಮಕ್ಕಳು ಸೆಖೆಯಿಂದ ಬಳಲುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ಹವಾನಿಯಂತ್ರಣ (ಎಸಿ) ಸೌಲಭ್ಯ ಅಳಡಿಸುವ ಯೋಜನೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಂದಾಗಿದೆ.

ರಾಜ್ಯದಲ್ಲಿಯೇ ಪ್ರಥಮವಾಗಿ ದ.ಕ. ಜಿಲ್ಲೆಯಲ್ಲಿ ಈ ಪ್ರಯೋಗ ಅನುಷ್ಠಾನಗೊಳ್ಳಲಿದ್ದು, ಪ್ರಥಮ ಹಂತವಾಗಿ ಮಂಗಳೂರು ಹಾಗೂ ಬಂಟ್ವಾಳ ತಾಲೂಕಿನ 10 ಅಂಗನವಾಡಿ ಕೇಂದ್ರಗಳಲ್ಲಿ ಎಸಿ ಅಳವಡಿಸಲು ನಿರ್ಧರಿಸಲಾಗಿದೆ. ಮಂಗಳೂರಿನ ಎಕ್ಕಾರು ಗ್ರಾಪಂನ ಕೆಂಜಗುಡ್ಡೆ ಹಾಗೂ ಬಂಟ್ವಾಳ ತಾಲೂಕಿನ ಶಂಭೂರು ಶಾಲೆಗಳಿಗೆ ಈಗಾಗಲೇ ಎಸಿ ಅಳವಡಿಕೆ ಕಾರ್ಯವಾಗಿದೆ. ದ.ಕ. ಜಿಪಂ ಸಿಇಒ ಡಾ.ಎಂ.ಆರ್.ರವಿಯವರ ಪರಿಕಲ್ಪನೆ ಇದಾಗಿದ್ದು, ಇದಕ್ಕಾಗಿ ಖಾಸಗಿ ಸಂಸ್ಥೆಗಳ ನೆರವು ಪಡೆಯಲು ಅವರು ಮುಂದಾಗಿದ್ದಾರೆ. ದ.ಕ. ಜಿಲ್ಲೆಯಲ್ಲಿ 2,104 ಅಂಗನವಾಡಿ ಕೇಂದ್ರಗಳಿವೆ. ಅದರಲ್ಲಿ 20 ಮಿನಿ ಅಂಗನವಾಡಿಗಳು, 1,494 ಸ್ವಂತ ಕಟ್ಟಡ ಇರುವ ಅಂಗನವಾಡಿಗಳಾಗಿವೆ. ಅಂಗನವಾಡಿಗಳಿಗೆ ಎಸಿ ಅಳವಡಿಸುವ ಮೂಲಕ ಹೈಟೆಕ್ ಸ್ಪರ್ಶ ನೀಡುವ ಉದ್ದೇಶವನ್ನೂ ಹೊಂದಿದ್ದು, ದ.ಕ. ಜಿಲ್ಲೆಯ ಪ್ರತಿಯೊಂದು ವಿಧಾನಸಭಾ ಕ್ಷೇತ್ರದ ಒಂದೊಂದು ಅಂಗನವಾಡಿಯನ್ನು ಆಯ್ಕೆ ಮಾಡಿ ಅದನ್ನು ಮಾದರಿಯಾಗಿ ರೂಪಿಸಲು ಯೋಜನೆ ತಯಾರಾಗಿದೆ. ಇದಕ್ಕಾಗಿ ತಲಾ 30 ಲಕ್ಷ ರೂ. ವೆಚ್ಚದಲ್ಲಿ 2.4 ಕೋಟಿ ರೂ. ಮೊತ್ತದ ಅಂದಾಜು ಪಟ್ಟಿ ತಯಾರಿಸಲಾಗಿದ್ದು, ಅದನ್ನು ಸಿಎಸ್‌ಆರ್ ನಿಧಿಯಿಂದ ಭರಿಸುವಂತೆ ಎಂಆರ್‌ಪಿಎಲ್‌ಗೆ ಕೋರಿಕೆಯನ್ನೂ ಸಲ್ಲಿಸಲಾಗಿದೆ.

ಮಾದರಿ ಅಂಗನವಾಡಿ ಕೇಂದ್ರಗಳನ್ನು ಹಂಚಿನ ಮೇಲ್ಛಾವಣಿಯೊಂದಿಗೆ ನಿರ್ಮಾಣ ಮಾಡಲಾಗುವುದು. ಮಕ್ಕಳಿಗೆ ಆಟವಾಡಲು ಅಗತ್ಯವಾದ ಆಟಿಕೆಗಳು, ಕ್ರೀಡಾ ಸಾಮಗ್ರಿಗಳು, ಸಣ್ಣ ಉದ್ಯಾನವರ, ಗೊಂಬೆಗಳು, ಚಿತ್ರಗಳು ಕೂಡಾ ಈ ಮಾದರಿ ಅಂಗನವಾಡಿ ಕೇಂದ್ರಗಳು ಹೊಂದಲಿವೆ. ಬಡ ಮಕ್ಕಳಿಗೂ ಉತ್ತಮ ಸೌಲಭ್ಯಗಳನ್ನು ಒದಗಿಸಬೇಕೆಂಬ ಆಶಯದೊಂದಿಗೆ ಹಾಗೂ ಸರಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಪೋಷಕರನ್ನು ಪ್ರೋತ್ಸಾಹಿಸುವ ಅಂಶವೂ ಈ ಯೋಜನೆಯದ್ದಾಗಿದೆ. ಎಸಿ ಅಳವಡಿಕೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಸ್ವಂತ ಆರ್‌ಸಿಸಿ ಕಟ್ಟಡ ಮತ್ತು 15ಕ್ಕಿಂತ ಅಧಿಕ ಮಕ್ಕಳು ಇರುವ ಹಾಗೂ ಕಾಂಪೌಂಡ್ ಹೊಂದಿರುವ ಅಂಗನವಾಡಿಗಳಿಗೆ ಆದ್ಯತೆ ನೀಡಲಾಗಿದೆ.

ಮಂಗಳೂರು ತಾಲೂಕಿನ ಕಟೀಲಿನ ಕೆಂಚಗುಡ್ಡೆ, ಸೋಮೇಶ್ವರದ ಕುಂಪಲ, ಬಜ್ಪೆ ಗ್ರಾಪಂನ ಶಾಂತಿಗುಡ್ಡೆ, ಮಂಗಳೂರು ನಗರದ ಕದ್ರಿ ಶಾಲೆ, ಪದವು ಶಕ್ತಿನಗರ, ಬೋಳೂರು, ಬೋಳಾರ, ಉಳ್ಳಾಲ ನಗರಸಭೆಯ ಕೆರೆಬೈಲು, ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಪಂನ ಶಂಭೂರು ಶಾಲೆಯ ಅಂಗನವಾಡಿ, ಬಂಟ್ವಾಳ ಪುರಸಭೆಯ ಗೋಳಿನೆಲೆ ಅಂಗನವಾಡಿಗಳಿಗೆ ಪ್ರಥಮ ಹಂತದಲ್ಲಿ ಎಸಿ ಅಳವಡಿಸಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X