Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಲಿತ ಮಹಿಳೆ ಭಾರತದ ಮೊದಲ...

ದಲಿತ ಮಹಿಳೆ ಭಾರತದ ಮೊದಲ ರಾಷ್ಟ್ರಪತಿಯಾಗಲೆಂದು ಮಹಾತ್ಮಾ ಗಾಂಧಿ ಬಯಸಿದ್ದರು

ವಾರ್ತಾಭಾರತಿವಾರ್ತಾಭಾರತಿ11 May 2017 7:27 PM IST
share
ದಲಿತ ಮಹಿಳೆ ಭಾರತದ ಮೊದಲ ರಾಷ್ಟ್ರಪತಿಯಾಗಲೆಂದು ಮಹಾತ್ಮಾ ಗಾಂಧಿ ಬಯಸಿದ್ದರು

ಹೊಸದಿಲ್ಲಿ,ಮೇ 11: ಅಧ್ಯಕ್ಷೀಯ ಚುನಾವಣೆಗೆ ತಮ್ಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ರಾಜಕೀಯ ಪಕ್ಷಗಳು ಸಜ್ಜಾಗುತ್ತಿರುವ ಈ ಸಂದರ್ಭದಲ್ಲಿ ಬಿಡುಗಡೆ ಗೊಂಡಿರುವ ಪುಸ್ತಕವೊಂದು, ದಲಿತ ಮಹಿಳೆಯೋರ್ವಳು ಭಾರತದ ಮೊದಲ ರಾಷ್ಟ್ರಪತಿಯಾಗಬೇಕೆಂದು ಮಹಾತ್ಮಾ ಗಾಂಧಿಯವರು ಬಯಸಿದ್ದರು, ಆದರೆ ಅವರ ಈ ‘ತೀವ್ರಗಾಮಿ ಸಲಹೆ ’ಯನ್ನು ತಳ್ಳಿಹಾಕಲಾಗಿತ್ತು ಎಂದು ಹೇಳಿದೆ.

ಕೆ.ಆರ್.ನಾರಾಯಣನ್ ರೂಪದಲ್ಲಿ ತನ್ನ ಮೊದಲ ದಲಿತ ರಾಷ್ಟ್ರಪತಿಯನ್ನು ಪಡೆಯಲು ಭಾರತವು 1997ರವರೆಗೂ ಕಾಯಬೇಕಾಗಿತ್ತು ಎಂದಿರುವ ಪುಸ್ತಕದಲ್ಲಿ ಮಹಾತ್ಮಾರ ಮೊಮ್ಮಗ ಹಾಗೂ ಶಿಕ್ಷಣತಜ್ಞ ರಾಜಮೋಹನ ಗಾಂಧಿ ಅವರು ಕೆಲವು ಮಾತುಕತೆಗಳನ್ನು ಮತ್ತು 1947ರಲ್ಲಿ ತನ್ನ ಆದ್ಯತೆಯನ್ನು ವ್ಯಕ್ತಪಡಿಸಿ ಗಾಂಧೀಜಿಯವರು ಮಾಡಿದ್ದ ಭಾಷಣವನ್ನು ಬೆಳಕಿಗೆ ತಂದಿದ್ದಾರೆ.

ದಲಿತರಾಗಿರುವ ಜಾರ್ಖಂಡ್ ರಾಜ್ಯಪಾಲೆ ದ್ರೌಪದಿ ಮುರ್ಮು ಮತ್ತು ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಅವರು ರಾಷ್ಟ್ರಪತಿ ಹುದ್ದೆಗೆ ಸಂಭಾವ್ಯ ಅಭ್ಯರ್ಥಿಗಳಲ್ಲಿ ಸೇರಬಹುದು ಎಂಬ ಊಹಾಪೋಹಗಳ ನಡುವೆಯೇ ‘‘ಗಾಂಧಿ ಇನ್ನೂ ಏಕೆ ಪ್ರಸ್ತುತ:ಮಹಾತ್ಮಾರ ಪರಂಪರೆಯ ಒಂದು ಮೌಲ್ಯಮಾಪನ ’’ಎಂಬ ಈ ಪುಸ್ತಕ ಹೊರಬಂದಿದೆ.

ಸೇವಾಗ್ರಾಮ ಆಶ್ರಮ ಸ್ಥಾಪನೆಗೊಂಡಾಗಿನಿಂದಲೂ ಗಾಂಧಿಯವರ ಜೊತೆಗಿದ್ದ ಆಂಧ್ರಪ್ರದೇಶದ ಪ್ರತಿಭಾವಂತ ದಲಿತ ಯುವಕ ಚಕ್ರಯ್ಯನವರ ನಿಧನದಿಂದಾಗಿ ಮೊದಲ ರಾಷ್ಟ್ರಪತಿಯಾಗಿ ದಲಿತ ಮಹಿಳೆಯನ್ನು ನೇಮಕಗೊಳಿಸುವ ಚಿಂತನೆ ಮೊಳಕೆಯೊಡೆದಿತ್ತು.

ಚಕ್ರಯ್ಯ ಸ್ಮರಣಾರ್ಥ 1947,ಜೂ.2ರಂದು ನಡೆದಿದ್ದ ಪ್ರಾರ್ಥನಾ ಸಭೆಯಲ್ಲಿ ಗಾಂಧಿ, ಚಕ್ರಯ್ಯ ಬದುಕಿದ್ದಿದ್ದರೆ ಉನ್ನತ ಹುದ್ದೆಗೆ ಅವರ ಹೆಸರನ್ನೇ ಮುಂದಿಡುತ್ತಿದ್ದೆ ಎಂದು ಹೇಳಿದ್ದರು. ನಾಲ್ಕು ದಿನಗಳ ಬಳಿಕ ರಾಜೇಂದ್ರ ಪ್ರಸಾದ್ ಜೊತೆ ಮಾತನಾಡುತ್ತಿದ್ದಾಗಲೂ ಗಾಂಧಿ ತನ್ನ ಚಿಂತನೆಯನ್ನು ಪುನರಾವರ್ತಿಸಿದ್ದರು. ಚಕ್ರಯ್ಯನಂತಹ ದಲಿತ ಅಥವಾ ದಲಿತ ಮಹಿಳೆ ದೇಶದ ಮೊದಲ ರಾಷ್ಟ್ರಪತಿಯಾಗಬೇಕು ಎಂದು ಹೇಳಿದ್ದರು. ಇದೇ ರಾಜೇಂದ್ರ ಪ್ರಸಾದ ಮುಂದೆ 1950,ಜ.26ರಂದು ಭಾರತದ ಮೊದಲ ರಾಷ್ಟ್ರಪತಿಯಾಗಿದ್ದರು.

1947,ಜೂ.27ರಂದು ಬಹಿರಂಗ ಭಾಷಣದಲ್ಲಿಯೂ ಗಾಂಧಿಯವರು ದಲಿತ ಮಹಿಳೆಯನ್ನು ಮೊದಲ ರಾಷ್ಟ್ರಪತಿಯನ್ನಾಗಿ ಮಾಡುವ ಬಗ್ಗೆ ಪ್ರಸ್ತಾವಿಸಿದ್ದರು. ಆದರೆ ಲಾರ್ಡ್ ವೌಂಟ್‌ಬ್ಯಾಟನ್‌ರನ್ನೇ ಗವರ್ನರ್ ಜನರಲ್ ಆಗಿ ಉಳಿಸಿಕೊಳ್ಳಲು ಬಯಸಿದ್ದ ಜವಾಹರಲಾಲ ನೆಹರು,ವಲ್ಲಭಭಾಯಿ ಪಟೇಲ್ ಮತ್ತು ಕಂಪನಿಯು ಗಾಂಧಿಯವರ ತೀವ್ರಗಾಮಿ ಸಲಹೆಯನ್ನು ತಳ್ಳಿಹಾಕಿತ್ತು ಎಂದು ಪುಸ್ತಕವು ಹೇಳಿದೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X