Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಚಿದಾನಂದಮೂರ್ತಿ ಹಿಂದೂ ಧರ್ಮಾಂದ ಚಿಂತಕ:...

ಚಿದಾನಂದಮೂರ್ತಿ ಹಿಂದೂ ಧರ್ಮಾಂದ ಚಿಂತಕ: ಎಚ್.ಎಸ್.ದೊರೆಸ್ವಾಮಿ

‘ನಾಡೋಜ ಡಾ.ಎಂ.ಚಿದಾನಂದ ಮೂರ್ತಿ-87 ಅಭಿನಂದನೆ’

ವಾರ್ತಾಭಾರತಿವಾರ್ತಾಭಾರತಿ11 May 2017 7:56 PM IST
share
ಚಿದಾನಂದಮೂರ್ತಿ ಹಿಂದೂ ಧರ್ಮಾಂದ ಚಿಂತಕ: ಎಚ್.ಎಸ್.ದೊರೆಸ್ವಾಮಿ

ಬೆಂಗಳೂರು, ಮೇ 11: ಹಿರಿಯ ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ ಬಹುತೇಕ ವಿಷಯಗಳಲ್ಲಿ ಹಿಂದೂ ಧರ್ಮಾಂದರಂತೆ ವರ್ತಿಸುತ್ತಾರೆ ಎಂದು ಹಿರಿಯ ಸ್ವಾತಂತ್ರ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅಭಿಪ್ರಾಯಿಸಿದ್ದಾರೆ.

ಗುರುವಾರ ನಾಡಪ್ರಭು ಕೆಂಪೇಗೌಡ ನಾಗರಿಕ ಹಿತರಕ್ಷಣಾ ವೇದಿಕೆ ನಗರದ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಆಯೋಜಿಸಿದ್ದ ‘ನಾಡೋಜ ಡಾ.ಎಂ.ಚಿದಾನಂದ ಮೂರ್ತಿ-87ಅಭಿನಂದನೆ’ ಹಾಗೂ ಸತ್ಯವಾರ್ತೆ ಕನ್ನಡ ಮಾಸ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ ತಮ್ಮ ಸಂಶೋಧನೆಯ ಲಿಂಗಾಯಿತ ಧರ್ಮ ಹಿಂದೂ ಧರ್ಮದ ಭಾಗ, ದೇವರ ದಾಸಿಮಯ್ಯ ವಚನಕಾರನಲ್ಲ ಎಂಬ ವಿಷಯಗಳು ವಿವಾದಕ್ಕೀಡಾಗಿವೆ. ಹೀಗೆ ಅನೇಕ ವಿಷಯಗಳಲ್ಲಿ ಹಿಂದೂ ಧರ್ಮಾಂದರ ರೀತಿಯಲ್ಲಿ ಚಿಂತಿಸುತ್ತಾರೆ ಎಂದು ಅವರು ತಿಳಿಸಿದರು.

ಡಾ.ಎಂ.ಚಿದಾನಂದಮೂರ್ತಿ ಕೇವಲ ಸಂಶೋಧಕರು ಮಾತ್ರವಲ್ಲ. ನಾಡು, ನುಡಿಗೆ ಸಂಕಷ್ಟ ಬಂದಾಗಲೆಲ್ಲ ಕಾರ್ಯಕರ್ತರನ್ನು ಜೊತೆಗೂಡಿಸಿಕೊಂಡು ಬೀದಿಗಿಳಿದು ಹೋರಾಟ ಮಾಡಿದ್ದಾರೆ. ಅವರ ಹೋರಾಟದ ಫಲವಾಗಿ ರಾಜ್ಯ ಸರಕಾರ ಕನ್ನಡಪರವಾಗಿ ಅನೇಕ ಯೋಜನೆಗಳನ್ನು ರೂಪಿಸಲು ಸಾಧ್ಯವಾಯಿತು ಎಂದು ಎಚ್.ಎಸ್.ದೊರೆಸ್ವಾಮಿ ಅಭಿಮಾನ ವ್ಯಕ್ತಪಡಿಸಿದರು.

ಹಿರಿಯ ಸಿನಿಮಾ ನಟ ಎಸ್.ಶಿವರಾಮ್ ಮಾತನಾಡಿ, ದೇಶಕ್ಕೆ ಸ್ವಾತಂತ್ರ ಬಂದ ಪ್ರಾರಂಭದಲ್ಲಿ ರೈತರು ಹಾಗೂ ಕಾರ್ಮಿಕರ ಅಭಿವೃದ್ಧಿ ಹಾಗೂ ಜಾತ್ಯತೀತ ವೌಲ್ಯಗಳಿಗೆ ಮೊದಲ ಆದ್ಯತೆ ಕೊಡುವುದಾಗಿತ್ತು. ಆದರೆ, ಇಷ್ಟು ವರ್ಷಗಳು ಕಳೆದರು ರೈತರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಬೀದಿಯಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.

ರಾಜಕೀಯ ವ್ಯಕ್ತಿಗಳು ಶಿವಶರಣರ ವಚನಗಳನ್ನು ಬಾಯಿಪಾಠ ಮಾಡಿಕೊಂಡು ವೇದಿಕೆಗಳಲ್ಲಿ ಹೇಳುವುದನ್ನೇ ದೊಡ್ಡ ಸಾಧನೆಯೆಂದು ಭಾವಿಸುತ್ತಾರೆಯೇ ಹೊರತು ವಚನಗಳಲ್ಲಿರುವ ನಿಜವಾದ ಆಶಯಗಳನ್ನು ಅನುಷ್ಠಾನಕ್ಕೆ ತರಲು ಯಾವುದೇ ಕಾರ್ಯಕ್ರಮಗಳನ್ನು ಯೋಜಿಸಿಲ್ಲ. ಇಂತಹ ಜನಪ್ರತಿನಿಧಿಗಳಿಂದ ರಾಜ್ಯ ದುಸ್ಥಿತಿಯತ್ತ ವಾಲುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ನಲ್ಲೂರು ಪ್ರಸಾದ್ ಮಾತನಾಡಿ, ಕನ್ನಡ ಸಂಶೋಧನ ಕ್ಷೇತ್ರಕ್ಕೆ ಡಾ.ಎಂ.ಚಿದಾನಂದಮೂರ್ತಿ ಕೊಟ್ಟಿರುವ ಸಾಧನೆ ಅವಿಸ್ಮರಣೀಯ. ಅವರ ಸಂಶೋಧನಾ ಬರಹಗಳ ಆಧಾರದ ಮೇಲೆ ನಾಡು, ನುಡಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ಬಗೆ ಹರಿದಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
 ಹಿರಿಯ ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ಸೇರಿದಂತೆ ನಾಡಿಗೆ ಅಪಾರ ಕಾಣಿಕೆ ನೀಡಿರುವ ಹಿರಿಯ ಸಾಧಕರು ತಮ್ಮ ಆತ್ಮ ಚರಿತ್ರೆಗಳನ್ನು ಬರೆಯಬೇಕು. ಆ ಮೂಲಕ ಯುವ ಜನತೆಗೆ ನಾಡು, ನುಡಿ ಎದುರಿಸಿದ ಸಮಸ್ಯೆಗಳು, ಆ ಸಮಸ್ಯೆಗಳ ನಿವಾರಣೆಗಾಗಿ ಕೈಗೊಂಡ ಹೋರಾಟಗಳ ಕುರಿತು ತಿಳಿದುಕೊಳ್ಳಬಹುದು. ಆ ಮೂಲಕ ಭವಿಷ್ಯದಲ್ಲಿ ನಾಡನ್ನು ಹೇಗೆ ಕೊಂಡೊಯ್ಯಬೇಕೆಂಬ ಅರಿವನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಅವರು ಆಶಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿಗೆ 87ವರ್ಷ ತುಂಬಿದ ಹಿನ್ನೆಲೆಯಲ್ಲಿ ಅಭಿನಂದಿಸಲಾಯಿತು. ಇವರೊಂದಿಗೆ ಹಿರಿಯ ನಾಗರಿಕರಿಗೆ ಸನ್ಮಾನ ಮಾಡಲಾಯಿತು. ಡಾ.ಚಿದಾನಂದ ಮೂರ್ತಿ ಕುರಿತು ಹಂಪಿ ವಿವಿಯ ಪ್ರಾಧ್ಯಾಪಕ ಡಾ.ಎಸ್.ಎಸ್.ಅಂಗಡಿ ಅಭಿನಂದನಾ ನುಡಿಗಳನ್ನಾಡಿದರು. ಈ ವೇಳೆ ನಾಡಪ್ರಭು ಕೆಂಪೇಗೌಡ ನಾಗರಿಕ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಡಾ.ಎ.ಎಚ್.ಬಸವರಾಜು ಉಪಸ್ಥಿತರಿದ್ದರು.

ಹಿರಿಯ ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ಪ್ರತಿಪಾದಿಸುವ ಅನೇಕ ವಿಷಯಗಳನ್ನು ವೈಯಕ್ತಿಕವಾಗಿ ಒಪ್ಪುವುದಿಲ್ಲ. ಆದರೆ, ಸಂಶೋಧನೆ ಬಗೆಗಿರುವ ಅವರ ಬದ್ಧತೆ, ಕಾಳಜಿ ಎಲ್ಲರಿಗೂ ಸ್ಫೂರ್ತಿದಾಯಕ.
-ಡಾ.ನಲ್ಲೂರು ಪ್ರಸಾದ್, ಮಾಜಿ ಅಧ್ಯಕ್ಷ ಕನ್ನಡ ಸಾಹಿತ್ಯ ಪರಿಷತ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X