Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​ರಾಮನಗರದ ‘ತಂಗುಛತ್ರಿ’: ತಲೆ ಮೇಲಿನ...

​ರಾಮನಗರದ ‘ತಂಗುಛತ್ರಿ’: ತಲೆ ಮೇಲಿನ ತೂಗುಕತ್ತಿ!

ವಾರ್ತಾಭಾರತಿವಾರ್ತಾಭಾರತಿ11 May 2017 10:44 PM IST
share
​ರಾಮನಗರದ ‘ತಂಗುಛತ್ರಿ’: ತಲೆ ಮೇಲಿನ ತೂಗುಕತ್ತಿ!

 ಸಾಗರ, ಮೇ 11: ನಗರದ ಹೊರವಲಯದಲ್ಲಿ ಹೊಸನಗರ ರಸ್ತೆಯ ಪಕ್ಕದ ರಾಮನಗರದ ಬಸ್ ತಂಗುದಾಣ ಅಕ್ಷರಶಃ ನೆರಳು ನೀಡುವ ಛತ್ರಿಯ ಮಾದರಿಯಲ್ಲಿದೆ. ಇಂದಿನ ಬಿಸಿಲಿನಲ್ಲಿ ಬಸ್‌ಗೆ ಕಾಯುವವರಲ್ಲದೆ ಸುಸ್ತಾಗಿ ಸುಧಾರಿಸಿಕೊಳ್ಳಬಯಸುವ ಪಾದಚಾರಿಗಳು, ಸಂಜೆಯ ವಾಕಿಂಗ್ ಹವ್ಯಾಸಿಗಳು, ವೃದ್ಧರನ್ನು ಕೂಡ ಆಕರ್ಷಿಸುವಂತಿದೆ. ಇದನ್ನು ನೆರಳು ನೀಡುವ ತಂಗುಛತ್ರಿ ಎನ್ನುವುದಕ್ಕಿಂತ ತಲೆ ಮೇಲಿನ ತೂಗುಕತ್ತಿ ಎಂತಲೂ ಕರೆಯಬಹುದು.


ಈ ಬಸ್ ನಿಲ್ದಾಣವನ್ನು ಒಂದು ಪಿಲ್ಲರ್‌ನ ಮೇಲೆ ಛಾವಣಿ ಮಾದರಿಯಲ್ಲಿ ಕಟ್ಟಲಾಗಿದೆ. ಕೊಡೆ ಹಿಡಿದು ನೆರಳಿಗಾಗಿ ಅರಸುವವರನ್ನು ಆಹ್ವಾನಿಸುವಂತಹ ಈ ರಚನೆ ಗಮನ ಸೆಳೆಯುತ್ತದೆ. ಈ ಬಸ್ ನಿಲ್ದಾಣದಲ್ಲಿ ಬೆಳಗ್ಗೆ ಹಾಗೂ ಸಂಜೆ ಸಮಯದಲ್ಲಿ ಶಾಲಾ ಮಕ್ಕಳು, ಕೂಲಿ ಕಾರ್ಮಿಕರು ಮತ್ತು ಗಾರ್ಮೆಂಟ್ಸ್‌ಗೆ ಹೋಗುವ ಅತೀ ಹೆಚ್ಚು ಮಹಿಳೆಯರು ಸಾಗರಕ್ಕೆ ಹೋಗಲು ಬಸ್ಸಿಗಾಗಿ ಕಾದು ಕುಳಿತಿರುತ್ತಾರೆ. ಒಂದರ್ಥದಲ್ಲಿ ಇದು ಸದಾ ಜನನಿಬಿಡ ಬಸ್ ಪ್ರಯಾಣಿಕರ ತಂಗುದಾಣ.


ಕೆಲ ದಿನಗಳ ಹಿಂದೆ ಇದರ ಕಂಬದಲ್ಲಿ ಬಿರುಕು ಮೂಡಿದೆ. ಸಿಮೆಂಟಿನ ಚಕ್ಕಳಿಕೆಗಳು ಹೊರಬಂದು ಕಬ್ಬಿಣದ ಸರಳುಗಳು ಮಾತ್ರ ಛಾವಣಿಯನ್ನು ಆಧರಿಸಿ ನಿಂತಿವೆೆ. ಛಾವಣಿಯ ಭಾರದ ಕಾರಣ ಯಾವುದೇ ಸಂದಭರ್ದಲ್ಲಿ ಇದು ಇದ್ದಕ್ಕಿದ್ದಂತೆ ನೆಲಕ್ಕೆ ಒರಗಬಹುದು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಾರೆ.


 ಈ ಛಾವಣಿ ಪ್ರಯಾಣಿಕರ ತಲೆ ಮೇಲೆ ಬೀಳುವ ಅಪಾಯ ಇರುವ ಕುರಿತು ನಗರಸಭೆ ಆಡಳಿತಕ್ಕೆ ಮತ್ತು ಈ ಭಾಗದ ನಗರಸಭೆ ಸದಸ್ಯ ವೀಣಾ ಪರಮೇಶ್ವರ್ ಅವರ ಗಮನಕ್ಕ್ಕೆ ತರಲಾಗಿದ್ದರೂ ಅದನ್ನು ಅವರು ಗಂಭೀರವಾಗಿ ಪರಿಗಣಿಸಿದಂತಿಲ್ಲ ಎಂದು ಸ್ಥಳೀಯರು ಆರೋಪಿಸುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X