Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಜೆಪಿಯ 'ಮಿಷನ್ 150' ಆಸೆ ನುಚ್ಚುನೂರು:...

ಬಿಜೆಪಿಯ 'ಮಿಷನ್ 150' ಆಸೆ ನುಚ್ಚುನೂರು: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ12 May 2017 3:04 PM IST
share
ಬಿಜೆಪಿಯ ಮಿಷನ್ 150 ಆಸೆ ನುಚ್ಚುನೂರು: ಸಿದ್ದರಾಮಯ್ಯ

ಬೆಂಗಳೂರು, ಮೇ 12: ಬಿಜೆಪಿಯ 'ಮಿಷನ್ 150' ಆಸೆ ನುಚ್ಚುನೂರಾಗಿದೆ. ಲೋಕಸಭೆ ಚುನಾವಣೆ ಹೊರತುಪಡಿಸಿ ಬೇರೆಲ್ಲಾ ಚುನಾವಣೆ ನಾವು ಗೆದ್ದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಇಂದು ಮಾತನಾಡುತ್ತಿದ್ದ ಅವರು, ನಾವು ಉಪಚುನಾವಣೆಯಲ್ಲಿ ಯಾರನ್ನೂ ಟೀಕೆ ಮಾಡಲಿಲ್ಲ. ನಮ್ಮ ಕೆಲಸ ಮುಂದಿಟ್ಟುಕೊಂಡೇ ಚುನಾವಣೆ ಎದುರಿಸಿದೆವು. ಎರಡೂ ಸ್ಥಾನಗಳನ್ನ ಗೆದ್ದೆವು ಎಂದರು.

ಶಿಕ್ಷಣ ಇಲಾಖೆಯಲ್ಲಿ ಹೆಚ್ಚಿನ ಹಣ ಖರ್ಚು ಮಾಡಿದ್ದು ನಾವು. ಐದು ವರ್ಷದಲ್ಲಿ ಬಿಜೆಪಿ ಖರ್ಚು ಮಾಡಿದ್ದು 55 ಸಾವಿರ ಕೋಟಿ ರೂ. ನಾವು ಖರ್ಚು ಮಾಡಿದ್ದು 99 ಸಾವಿರ ಕೋಟಿ ರೂ. ನೀರಾವರಿಗೆ ಅವರು ಖರ್ಚು ಮಾಡಿದ್ದು 25 ಸಾವಿರ ಕೋಟಿ ರೂ. ನಾವು ಖರ್ಚು ಮಾಡಿದ್ದು 62,570 ಕೋಟಿ ರೂ. ಕೃಷಿಗೆ ಅವರು ಖರ್ಚು ಮಾಡಿದ್ದು 17,182 ಕೋಟಿ ರೂ., ನಾವು ಖರ್ಚು ಮಾಡುತ್ತಿರುವುದು 44,655 ಕೋಟಿ ರೂ. ಗ್ರಾಮೀಣಾಭಿವೃದ್ಧಿಗೆ ಬಿಜೆಪಿ ಸರಕಾರ ಖರ್ಚು ಮಾಡಿದ್ದು 5,220 ಕೋಟಿ ರೂ. ನಾವು ಖರ್ಚು ಮಾಡಿದ್ದು 52,280 ಕೋಟಿ ರೂ. ವಸತಿಗೆ ಬಿಜೆಪಿ ಖರ್ಚು ಮಾಡಿದ್ದು 5157 ಕೋಟಿ ರೂ., ನಮ್ಮ ಸರ್ಕಾರ 17,237 ಕೋಟಿ ರೂ. ಖರ್ಚು ಮಾಡಿದೆ. ಎಸ್ ಸಿ ಎಸ್ ಟಿ ಅಭಿವೃದ್ಧಿಗೆ ಬಿಜೆಪಿ ಸರಕಾರ ಖರ್ಚು ಮಾಡಿದ್ದು 6200 ಕೋಟಿ ರೂ. ನಮ್ಮ ಅವಧಿಯಲ್ಲಿ ಮಾಡಿರುವುದು 16,000 ಕೋಟಿ ರೂ.ಎಂದು ಸಿಎಂ ಅಂಕಿಅಂಶಗಳ ಸಹಿತ ವಿವರಿಸಿದರು.     

# ಯಡಿಯೂರಪ್ಪರ ಮೇಲಿನ ಚಾರ್ಜ್ ಶೀಟ್ ಗಳ ಸಂಖ್ಯೆ ಎಷ್ಟು?              

ಯಡಿಯೂರಪ್ಪ ನಮ್ಮ ಸರಕಾರದ ಮೇಲೆ ಚಾರ್ಜ್ ಶೀಟ್ ಬಿಡುಗಡೆ ಮಾಡುತ್ತಾರೆ. ಮೊದಲು ಅವರ ಮೇಲೆ ಎಷ್ಟು ಚಾರ್ಜ್ ಶೀಟ್ ಹಾಕಿದ್ದಾರೆ ಅಂತ ಹೇಳಲಿ ಎಂದ ಮುಖ್ಯಮಂತ್ರಿ ಸವಾಲು ಹಾಕಿದರು.

 ಹೈ ಕೋರ್ಟ್ - ಸುಪ್ರೀಂ ಕೋರ್ಟ್, ಲೋಕಾಯುಕ್ತದಲ್ಲಿ ಯಡಿಯೂರಪ್ಪ ಮೇಲೆ ಕೇಸ್ ಇದೆ. ಜೈಲಿಗೆ ಹೋಗಿ ಬಂದವರು ನಮ್ಮ ಮೇಲೆ ಚಾರ್ಜ್ ಶೀಟ್ ಬಿಡುಗಡೆ ಮಾಡುತ್ತಾರೆ. ಗಾಜಿನ ಮನೆಯಲ್ಲಿ ಕುಳಿತು ಅವರು ಕಲ್ಲು ಹೊಡೆಯುತ್ತಾರೆ. ಬಿಜೆಪಿಯವರ ಜನರು ಕೇಳೋದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X