Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ಡಿ.ಸಿ. ದಿಢೀರ್ ಭೇಟಿ; 10...

ಶಿವಮೊಗ್ಗ: ಡಿ.ಸಿ. ದಿಢೀರ್ ಭೇಟಿ; 10 ನ್ಯಾಯಬೆಲೆ ಅಂಗಡಿಗಳಿಗೆ ಶೋಕಾಸ್ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ12 May 2017 6:55 PM IST
share
ಶಿವಮೊಗ್ಗ: ಡಿ.ಸಿ. ದಿಢೀರ್ ಭೇಟಿ; 10 ನ್ಯಾಯಬೆಲೆ ಅಂಗಡಿಗಳಿಗೆ ಶೋಕಾಸ್ ನೋಟಿಸ್

ಶಿವಮೊಗ್ಗ, ಮೇ 12: ಸರ್ಕಾರಿ ಕಚೇರಿ ಸೇರಿದಂತೆ ನಗರ ಹಾಗೂ ಗ್ರಾಮೀಣ ಭಾಗದ ನ್ಯಾಯಬೆಲೆ ಅಂಗಡಿಗಳಿಗೆ ಜಿಲ್ಲಾಧಿಕಾರಿ ಡಾ.ಎಂ. ಲೋಕೇಶ್‌ ದಿಢೀರ್ ಭೇಟಿ ನೀಡಿ ಲೋಪದೋಷ ಪತ್ತೆ ಹಚ್ಚಿ ತಪ್ಪಿಸ್ಥರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಂಡ ಘಟನೆ ಶುಕ್ರವಾರ ಶಿವಮೊಗ್ಗದಲ್ಲಿ ನಡೆಯಿತು.

ಈ ವೇಳೆ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಹಲವು ನ್ಯಾಯಬೆಲೆ ಅಂಗಡಿಗಳು ಬಾಗಿಲು ಮುಚ್ಚಿದ್ದುವು. ಕೆಲವೆಡೆ ಸ್ವತಃ ಜಿಲ್ಲಾಧಿಕಾರಿ ಅಂಗಡಿಗಳ ಮಾಲಕರನ್ನು ಕರೆಯಿಸಿ ಬಾಗಿಲು ತೆರೆಯಿಸಿದ್ದಾರೆ. ನಿಗದಿತ ಸಮಯಕ್ಕೆ ಬಾಗಿಲು ತೆರೆಯದ 10 ಪಡಿತರ ಕೇಂದ್ರಗಳ ಮಾಲಕರ ವಿರುದ್ಧ ಶೋಕಾಸ್ ನೋಟಿಸ್ ಜಾರಿಗೊಳಿಸಿ, 24 ಗಂಟೆಯೊಳಗೆ ವರದಿ ನೀಡುವಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

 ಕಾಲಮಿತಿಯಲ್ಲಿ ಆಹಾರ ಧಾನ್ಯ ಎತ್ತುವಳಿ ಮಾಡಿ ಗ್ರಾಹಕರಿಗೆ ವಿತರಣೆ ಮಾಡುವಲ್ಲಿಯು ಲೋಪ ಎಸಗಿದ ಪಡಿತರ ಕೇಂದ್ರಗಳಿಂದಲೂ ಮಾಹಿತಿ ಸಂಗ್ರಹಿಸುವಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ಡಿ.ಸಿ. ಸೂಚಿಸಿದ್ದಾರೆ.

ನ್ಯಾಯಬೆಲೆ ಅಂಗಡಿಗಳು ಬೆಳಗ್ಗೆ 8 ಗಂಟೆಯಿಂದ 12 ಹಾಗೂ ಸಂಜೆ 4 ರಿಂದ 8 ಗಂಟೆಯವರೆಗೆ ಬಾಗಿಲು ತೆರೆಯಬೇಕು. ವಾರದಲ್ಲಿ ಮಂಗಳವಾರ ಹಾಗೂ ಸರ್ಕಾರಿ ರಜೆ ದಿನಗಳಂದು ಬಾಗಿಲು ಮುಚ್ಚಲು ಅವಕಾಶವಿದೆ.

ಶಿವಮೊಗ್ಗ ನಗರದ ಹಲವು ನ್ಯಾಯಬೆಲೆ ಅಂಗಡಿಗಳು ನಿಗದಿತ ಸಮಯಕ್ಕೆ ಬಾಗಿಲು ತೆರೆಯದಿರುವ ಬಗ್ಗೆ ಜಿಲ್ಲಾಧಿಕಾರಿಗೆ ದೂರಲಾಗಿತ್ತು.  ಈ ಹಿನ್ನೆಲೆಯಲ್ಲಿ ಡಿಸಿ ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ಶುಕ್ರವಾರ ಶಿವಮೊಗ್ಗದ ನ್ಯಾಯಬೆಲೆ ಅಂಗಡಿಗಳಿಗೆ ದಿಢೀರ್ ಭೇಟಿ ನೀಡಿದ್ದರು.

ಅಂಗಡಿ ಮಾಲಕರಲ್ಲಿ ಸಂಚಲನ..!
 ಶಿವಮೊಗ್ಗ ನಗರದ ಪಡಿತರ ಕೇಂದ್ರಗಳಿಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ ನೀಡಿದ ಬಗ್ಗೆ ಪಡಿತರ ಕೇಂದ್ರಗಳ ಮಾಲಕರಲ್ಲಿ ಸಂಚಲನ ಮೂಡಿ ಸಿತ್ತು. ಡಿ.ಸಿ. ದಿಢೀರ್ ಬೇಟಿ ನೀಡುತ್ತಿರುವ ಮಾಹಿತಿ ಅರಿತ ಕೆಲ ಅಂಗಡಿಗಳ ಮಾಲಕರು ಎಲ್ಲಿ ತಮ್ಮ ಅಂಗಡಿಗಳಿಗೂ ಆಗಮಿಸುತ್ತಾರೋ ಎಂಬ ಆತಂಕದಿಂದ ಸಾರ್ವಜನಿಕರಿಗೆ ಪಡಿತರ ವಿತರಣೆ ಮಾಡುತ್ತಿದ್ದ ದೃಶ್ಯ ಕಂಡುಬಂದಿತ್ತು.

ಈ ಸಂದರ್ಭ ಆಹಾರ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಲಕ್ಷ್ಮೀ ನಾರಾಯಣ ರೆಡ್ಡಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X