Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಕಾಲೇಜ್ ಕುಮಾರ್ ಗೆ ಸಂಯುಕ್ತಾ ಕಿರಿಕ್

ಕಾಲೇಜ್ ಕುಮಾರ್ ಗೆ ಸಂಯುಕ್ತಾ ಕಿರಿಕ್

ವಾರ್ತಾಭಾರತಿವಾರ್ತಾಭಾರತಿ12 May 2017 7:20 PM IST
share
ಕಾಲೇಜ್ ಕುಮಾರ್ ಗೆ ಸಂಯುಕ್ತಾ ಕಿರಿಕ್

‘ಕಿರಿಕ್‌ಪಾರ್ಟಿ’ ಖ್ಯಾತಿಯ ಸಂಯುಕ್ತಾ ಹೆಗ್ಡೆ,, ‘ಕಾಲೇಜ್ ಕುಮಾರ್’ ಚಿತ್ರತಂಡಕ್ಕೆ ತಲೆನೋವಾಗಿ ಬಿಟ್ಟಿದ್ದಾಳೆ. ಹಾಗಂತ ಚಿತ್ರದ ನಿರ್ಮಾಪಕರೇ ದೂರುತ್ತಿದ್ದಾರೆ. ‘ಕಾಲೇಜ್ ಕುಮಾರ್’ ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡಿದ್ದ ಸಂಯುಕ್ತಾಗೆ ತಮಿಳು ಚಿತ್ರವೊಂದರಲ್ಲಿ ನಟಿಸಲು ಅವಕಾಶ ಬಂದಿತ್ತು. ಹಿಂದೆಮುಂದೆ ನೋಡದೆ ಸಂಯುಕ್ತಾ ‘ಕಾಲೇಜ್ ಕುಮಾರ್’ ಚಿತ್ರಕ್ಕೆ ಕೈಕೊಟ್ಟಿದ್ದಾರಂತೆ. ಕೆಂಡಸಂಪಿಗೆ ಖ್ಯಾತಿಯ ವಿಕ್ಕಿ ಅರುಣ್ ನಟಿಸುತ್ತಿರುವ ‘ಕಾಲೇಜ್‌ಕುಮಾರ್’ ಚಿತ್ರದಲ್ಲಿ ಸಂಯುಕ್ತಾ ನಾಯಕಿ ಪಾತ್ರದಲ್ಲಿ ನಟಿಸಲು ಆಯ್ಕೆಯಾಗಿದ್ದರು.

‘ಅಲೆಮಾರಿ’ ಸಂತು ನಿರ್ದೇಶಿಸುತ್ತಿರುವ ‘ಕಾಲೇಜ್ ಕುಮಾರ್’ ಚಿತ್ರಕ್ಕೆ ಎಲ್.ಪದ್ಮನಾಭನ್ ನಿರ್ಮಾಪಕರು. ಮೇ1ರಂದು ಚಿತ್ರದ ಶೂಟಿಂಗ್ ಆರಂಭಗೊಂಡಿತ್ತು ಮತ್ತು ಸಂಯುಕ್ತಾ ಅವರು ಮುಹೂರ್ತದಲ್ಲಿ ಪಾಲ್ಗೊಂಡಿದ್ದರು. ಮೊದಲ ದೃಶ್ಯಕ್ಕೆ ಕಿಚ್ಚ ಸುದೀಪ್ ಕ್ಲಾಪ್ ಮಾಡಿದ್ದರು.

ಚಿತ್ರೀಕರಣದ ಶೆಡ್ಯೂಲ್‌ನ್ನು ಮುಂಚಿತವಾಗಿಯೇ ಸಂಯುಕ್ತಾಗೆ ನೀಡಿದ್ದರೂ, ಇನ್ನು ಕೂಡಾ ಆಕೆ ಶೂಟಿಂಗ್‌ಗೆ ಹಾಜರಾಗುತ್ತಿಲ್ಲವೆಂದು ನಿರ್ದೇಶಕ ಸಂತು ದೂರಿದ್ದಾರೆ. ಈ ನಡುವೆ ಸಂಯುಕ್ತಾ ಅವರು ತಮಿಳು ಚಿತ್ರವೊಂದರ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ.

‘ಕಾಲೇಜ್ ಕುಮಾರ್’ ಚಿತ್ರದ ಮುಹೂರ್ತ ನಡೆದ ಬೆನ್ನಲ್ಲೇ ಸಂಯುಕ್ತಾ ಚೆನ್ನೈಗೆ ಹಾರಿದ್ದರು. ಕಾರ್ತಿಕ್ ಸುಬ್ಬರಾಜು ನಿರ್ದೇಶನದ ತಮಿಳುಚಿತ್ರದಲ್ಲಿ ಆಕೆ ಪ್ರಭುದೇವಾಗೆ ನಾಯಕಿಯಾಗಿ ಅಭಿನಯಿಸುವ ಸುವರ್ಣಾವಕಾಶ ತನಗೆ ದೊರೆತಿರುವುದಾಗಿ ಆಕೆ ಸಂತಸದಿಂದ ಹೇಳಿಕೊಂಡಿದ್ದಾರೆ. ಆದರೆ ಇತ್ತ ‘ಕಾಲೇಜ್ ಕುಮಾರ್’ ಚಿತ್ರ ತಂಡ ಸಂಯುಕ್ತಾಳಿಗಾಗಿ ಕಾದು ಕಾದು ಸುಸ್ತಾಗಿದೆ. ಹಿರಿಯ ನಟಿ ಶ್ರುತಿ, ನಟರಾದ ಸಾಧುಕೋಕಿಲಾ ಹಾಗೂ ಅಚ್ಯುತ ಕುಮಾರ್ ಅವರು ಶೂಟಿಂಗ್‌ಗೆ ಹಾಜರಾಗಿದ್ದರು. ಆದರೆ ನಾಯಕಿ ಸಂಯುಕ್ತಾ ಅವರ ಗೈರುಹಾಜರಿಯಿಂದಾಗಿ ಅವರು ಕೈಕಟ್ಟಿಕುಳಿತುಕೊಳ್ಳುವಂತಾಯಿತು. ಒಟ್ಟಾರೆಯಾಗಿ ನಾಯಕಿ ನಟಿಯಿಂದಾಗಿ ಹಣ, ಸಮಯ ಎರಡೂ ವ್ಯರ್ಥವಾಗುತ್ತಿದೆಯೆಂದು ನಿರ್ಮಾಪಕ ಪದ್ಮನಾಭ್ ಅಲವತ್ತುಕೊಂಡಿದ್ದಾರೆ.

ನಿರ್ಮಾಪಕ ಎಲ್.ಪದ್ಮನಾಭನ್ ಹಾಗೂ ನಿರ್ದೇಶಕ ಸಂತು, ಸಂಯುಕ್ತಾರನ್ನು ಸಂಪರ್ಕಿಸಲು ಹಲವು ಬಾರಿ ಯತ್ನಿಸಿದರೂ, ಯಾವುದೇ ಪ್ರಯೋಜನವಾಗಲಿಲ್ಲ. ಕೊನೆಗೂ ಬೇಸತ್ತ ನಿರ್ಮಾಪಕ ಪದ್ಮನಾಭಣ್ ಅವರು ಸಂಯುಕ್ತಾ ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಚಲನಚಿತ್ರ ನಿರ್ಮಾಪಕರ ಸಂಘಕ್ಕೆ ದೂರು ನೀಡಲು ನಿರ್ಧರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X