ಪಡುಬಿದ್ರೆ: ರಿಕ್ಷಾ ಚಾಲಕನಿಗೆ ಚೂರಿ ಇರಿತ

ಪಡುಬಿದ್ರೆ, ಮೇ 12: ರಿಕ್ಷಾ ಚಾಲಕನೋರ್ವನಿಗೆ ಚೂರಿ ಇರಿದ ಘಟನೆ ಪಡುಬಿದ್ರೆ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ನಡೆದಿದೆ.
ಕಂಚಿನಡ್ಕ ನಿವಾಸಿ ಎಂ.ಯೂಸುಫ್ ಚೂರಿ ಇರಿತದಿಂದ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಅಶ್ರಫ್, ಆಸ್ಪನ್ ಎಂಬವರು ಚೂರಿ ಇರಿದ ಆರೋಪಿಗಳು ಎಂದು ಗುರುತಿಸಲಾಗಿದೆ. ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
Next Story





