Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಡೆವಿಲ್ಸ್‌ಗೆ ಬೆದರಿದ ಪುಣೆಗೆ 7 ರನ್...

ಡೆವಿಲ್ಸ್‌ಗೆ ಬೆದರಿದ ಪುಣೆಗೆ 7 ರನ್ ಸೋಲು

ವಾರ್ತಾಭಾರತಿವಾರ್ತಾಭಾರತಿ12 May 2017 11:49 PM IST
share
ಡೆವಿಲ್ಸ್‌ಗೆ ಬೆದರಿದ ಪುಣೆಗೆ 7 ರನ್ ಸೋಲು

ಹೊಸದಿಲ್ಲಿ, ಮೇ 12: ಐಪಿಎಲ್‌ನ 52ನೆ ಪಂದ್ಯದಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡ ರೈಸಿಂಗ್ ಪುಣೆ ಸೂಪರ್‌ಜೈಂಟ್ ತಂಡವನ್ನು 7 ರನ್‌ಗಳ ಅಂತರದಿಂದ ಮಣಿಸಿತು.

ಇಲ್ಲಿನ ಫಿರೋಝ್ ಶಾ ಕೋಟ್ಲಾ ಸ್ಟೇಡಿಯಂನಲ್ಲಿ ನಡೆದ ಶುಕ್ರವಾರ ನಡೆದ ಪಂದ್ಯದಲ್ಲಿ ಗೆಲ್ಲಲು 169 ರನ್ ಗುರಿ ಪಡೆದಿದ್ದ ಪುಣೆ ತಂಡ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿ ಸೋಲೊಪ್ಪಿಕೊಂಡಿತು.

ಪುಣೆಗೆ ಅಂತಿಮ ಓವರ್‌ನಲ್ಲಿ ಗೆಲುವಿಗೆ 25 ರನ್ ಅಗತ್ಯವಿತ್ತು. ಆಗ ಸತತ 2 ಎಸೆತಗಳಲ್ಲಿ ಸಿಕ್ಸರ್ ಸಿಡಿಸಿದ ಮನೋಜ್ ತಿವಾರಿ ಗೆಲುವಿನ ವಿಶ್ವಾಸ ಮೂಡಿಸಿದ್ದರು. ಅಂತಿಮ ಓವರ್ ಬೌಲಿಂಗ್ ಮಾಡಿದ ಕಮಿನ್ಸ್ ಇನಿಂಗ್ಸ್‌ನ ಕೊನೆಯ ಎಸೆತದಲ್ಲಿ ತಿವಾರಿ(64 ರನ್, 45 ಎಸೆತ, 6 ಬೌಂಡರಿ, 3 ಸಿಕ್ಸರ್) ವಿಕೆಟ್ ಪಡೆದು ಡೆಲ್ಲಿಗೆ ರೋಚಕ ಗೆಲುವು ತಂದರು.

ನಿರ್ಣಾಯಕ ಪಂದ್ಯದಲ್ಲಿ ಸೋತಿರುವ ಪುಣೆಯ ಪ್ಲೇ-ಆಫ್ ಅವಕಾಶಕ್ಕೆ ಹಿನ್ನಡೆಯಾಗಿದೆ. ಪುಣೆ ತಂಡ ಪಂಜಾಬ್‌ನ ವಿರುದ್ಧ ಮೇ 14 ರಂದು ಕೊನೆಯ ಲೀಗ್ ಪಂದ್ಯವನ್ನು ಆಡಲಿದೆ. ಪುಣೆ ತಂಡದ ಪರ ಮನೋಜ್ ತಿವಾರಿ ಅಗ್ರ ಸ್ಕೋರರ್(64) ಎನಿಸಿಕೊಂಡರು. ನಾಯಕ ಸ್ಟೀವನ್ ಸ್ಮಿತ್(38) ಹಾಗೂ ಬೆನ್ ಸ್ಟೋಕ್ಸ್(33) ಎರಡಂಕೆ ಸ್ಕೋರ್ ದಾಖಲಿಸಿದರು. ತಿವಾರಿ ಹಾಗೂ ಸ್ಟೋಕ್ಸ್ 4ನೆ ವಿಕೆಟ್‌ಗೆ 51 ರನ್ ಸೇರಿಸಿದ್ದು, ಇದು ತಂಡದ ಪರ ದಾಖಲಾದ ಗರಿಷ್ಠ ಜೊತೆಯಾಟವಾಗಿದೆ.

ಡೆಲ್ಲಿ 168/8: ಇದಕ್ಕೆ ಮೊದಲು ಟಾಸ್ ಜಯಿಸಿ ಬ್ಯಾಟಿಂಗ್ ಆಯ್ದುಕೊಂಡ ಆತಿಥೇಯ ಡೆಲ್ಲಿ ಡೇರ್ ಡೆವಿಲ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 168 ರನ್ ಗಳಿಸಿತು.

ಡೆಲ್ಲಿಯ ಆರಂಭ ಚೆನ್ನಾಗಿರಲಿಲ್ಲ. 2.1 ಓವರ್‌ಗಳಲ್ಲಿ 9 ರನ್ ಗಳಿಸುವಷ್ಟರಲ್ಲಿ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್(2) ಹಾಗೂ ಶ್ರೇಯಸ್ ಐಯ್ಯರ್(3) ವಿಕೆಟ್ ಒಪ್ಪಿಸಿದರು.

ಆಗ 3ನೆ ವಿಕೆಟ್‌ಗೆ 80 ರನ್ ಜೊತೆಯಾಟ ನಡೆಸಿದ ಇನ್ನೋರ್ವ ಆರಂಭಿಕ ಆಟಗಾರ ಕರುಣ್ ನಾಯರ್(64 ರನ್, 45 ಎಸೆತ, 9 ಬೌಂಡರಿ) ಹಾಗೂ ರಿಷಬ್ ಪಂತ್(36 ರನ್, 22 ಎಸೆತ, 4 ಬೌಂಡರಿ, 2 ಸಿಕ್ಸರ್) ತಂಡಕ್ಕೆ ಆಸರೆಯಾದರು.

ಪಂತ್ ವಿಕೆಟ್ ಕಬಳಿಸಿದ ಝಾಂಪ ಈ ಜೋಡಿಯನ್ನು ಬೇರ್ಪಡಿಸಿದರು. ಮರ್ಲಾನ್ ಸ್ಯಾಮುಯೆಲ್ಸ್(27), ಕಮಿನ್ಸ್(11) ಹಾಗೂ ಅಮಿತ್ ಮಿಶ್ರಾ(ಅಜೇಯ 13) ಕೊಡುಗೆಯ ನೆರವಿನಿಂದ ಡೆಲ್ಲಿ 8 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿತು.

ಪುಣೆಯ ಪರವಾಗಿ ಜೈದೇವ್ ಉನದ್ಕಟ್(2-29) ಹಾಗೂ ಬೆನ್ ಸ್ಟೋಕ್ಸ್(2-31) ತಲಾ ಎರಡು ವಿಕೆಟ್ ಪಡೆದರು.

100 ವಿಕೆಟ್ ಪೂರೈಸಿದ ಝಹೀರ್

 ಪುಣೆ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಅಜಿಂಕ್ಯ ರಹಾನೆ ಅವರನ್ನು ಮೊದಲ ಓವರ್‌ನ ಮೊದಲ ಎಸೆತದಲ್ಲೇ ಕ್ಲೀನ್‌ಬೌಲ್ಡ್ ಮಾಡಿದ ಡೆಲ್ಲಿ ನಾಯಕ ಝಹೀರ್ ಖಾನ್ ಐಪಿಎಲ್‌ನಲ್ಲಿ 100 ವಿಕೆಟ್ ಪೂರೈಸಿದರು.

 38ರ ಹರೆಯದ ಝಹೀರ್ ಐಪಿಎಲ್‌ನಲ್ಲಿ 100 ವಿಕೆಟ್ ಪಡೆದ 8ನೆ ಬೌಲರ್ ಎಂಬ ಕೀರ್ತಿಗೆ ಭಾಜನರಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X