ಸಾರ್ವಜನಿಕರಿಗೆ ಕೆಎಸ್ಸಾರ್ಟಿಸಿ ಉತ್ತಮ ಸೌಲಭ್ಯ ನೀಡುತ್ತಿದೆ: ಸಚಿವ ಕಾಗೋಡು
.jpg)
ಸಾಗರ, ಮೇ 13: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರಿಗೆ ಉತ್ತಮ ಸೌಲಭ್ಯ ನೀಡುತ್ತಿದೆ. ರಾಜ್ಯ ಸರಕಾರ ಕೆಎಸ್ಸಾರ್ಟಿಸಿ ಅಭಿವೃದ್ಧಿಗೆ ಬೇಕಾದ ಎಲ್ಲ ಸವಲತ್ತುಗಳನ್ನು ನೀಡುತ್ತಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪತಿಳಿಸಿದ್ದಾರೆ.
ಇಲ್ಲಿನ ಕೆಎಸ್ಸಾರ್ಟಿಸಿ. ಬಸ್ ನಿಲ್ದಾಣ ದಲ್ಲಿ ಶುಕ್ರವಾರ ಸಾಗರ-ಬೆಂಗಳೂರು ಸುಖಾ ಸೀನ ಐರಾವತ ಬಸ್ಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ಖಾಸಗಿ ಬಸ್ಗಳ ಸ್ಪರ್ಧೆಯ ನಡುವೆಯೂ ಕೆಎಸ್ಸಾರ್ಟಿಸಿ ಸಂಸ್ಥೆ ಉತ್ತಮ ಸಾರಿಗೆ ಸೌಲಭ್ಯವನ್ನು ನೀಡಿ ಅನೇಕ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.
ಈಗಾಗಲೇ ರಾಜ್ಯದ ಎಲ್ಲ ಭಾಗಗಳಲ್ಲಿ ಸರಕಾರಿ ಬಸ್ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ನೌಕರರು ಸಹ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು. ಸಾಗರ ಹಾಗೂ ಜೋಗ್ಫಾಲ್ಸ್, ಜೋಗ ದಿಂದ ಸಾಗರ ಮೂಲಕ ಮಂಗಳೂರಿಗೆ ನೂತನ ಬಸ್ ಸೌಲಭ್ಯ ಕಲ್ಪಿಸಲು ಪ್ರಸ್ತಾವ ಸಲ್ಲಿಸಲಾಗಿದೆ.
ಈಗಾಗಲೇ ಶಿವಮೊಗ್ಗದಿಂದ ಸಾಗರಕ್ಕೆ ಎರಡು ಬಸ್ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ಇನ್ನೂ ನಾಲ್ಕು ಪರ್ಮಿಟ್ಗಳು ಇರುವುದರಿಂದ ಹೆಚ್ಚುವರಿ ಬಸ್ಗಳನ್ನು ಬಿಡುವಂತೆ ಸಾರಿಗೆ ಸಚಿವರಿಗೆ ಮನವಿ ಮಾಡ ಲಾಗಿದೆ ಎಂದರು. ಕೆಎಸ್ಸಾರ್ಟಿಸಿ ಹಾಗೂ ರೈಲು ನಿಲ್ದಾಣದ ಪಕ್ಕದಲ್ಲಿ ಖಾಸಗಿ ಬಸ್ ನಿಲ್ದಾಣ ಸ್ಥಾಪಿಸುವ ಬಗ್ಗೆ ಪ್ರಸ್ತಾವವಿದೆ. ಈಗಾಗಲೇ ನಗರಸಭೆ ವತಿಯಿಂದ ಯೋಜನೆ ಕುರಿತು ಚಟುವಟಿಕೆ ನಡೆಯುತ್ತಿದೆ.
ಇದನ್ನು ಶೀಘ್ರ ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಜಾಗ ಪರಿಶೀಲಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ಡಿಪೋ ಮ್ಯಾನೇಜರ್ ರಾಜಪ್ಪ, ಪರಶುರಾಮ್, ಡಿವೈಎಸ್ಪಿ ಮಂಜು ನಾಥ ಕೌರಿ, ಸರ್ಕಲ್ ಇನ್ಸ್ಪೆಕ್ಟರ್ ಬಿ.ಎಲ್.ಜನಾರ್ದನ್, ಪಿಡಬ್ಲುಡಿ ಸಹಾಯಕ ಅಭಿ ಯಂತರ ಟಿ.ಪಿ.ರಮೇಶ್ ಮತ್ತಿತರರು ಉಪಸ್ಥಿತರಿದ್ದರು.







