ಮೂಡುಬಿದಿರೆ : ಬಂಟರ ಸಮ್ಮಿಲನ - 2017 ಉದ್ಘಾಟನೆ

ಮೂಡುಬಿದಿರೆ, ಮೇ 13: ಜಾತಿ ಮತ ನೋಡದೆ ನಾವೆಲ್ಲರೂ ಒಂದೇ ಎಂಬ ಬಾವನೆಯಿಂದ ಬಾಳಿದವರು ಬಂಟರು. ಆತ್ಮವಿಶ್ವಾಸದೊಂದಿಗೆ ಅನ್ಯಾಯದ ವಿರುದ್ಧ ಹೋರಾಟ ಮಾಡುವ ಬಂಟರು ಒಂದು ಕಡೆ ಒಟ್ಟಾಗಿ ಸೇರಿ ಒಬ್ಬರನೊಬ್ಬರು ಪ್ರೀತಿಯಿಂದ ಅರ್ಥಮಾಡಿಕೊಂಡು ಬಾಳಬೇಕಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಹೇಳಿದರು.
ಶನಿವಾರ ಸ್ವರಾಜ್ಯ ಮೈದಾನದಲ್ಲಿ ಬಂಟೆರ್ ಬೆದ್ರ ಇದರ ವತಿಯಿಂದ ಪುರುಷರ ವಿಬಾಗದ ಜಿಲ್ಲಾ ಮಟ್ಟದ ವಾಲಿಬಾಲ್ ಮತ್ತು ಮಹಿಳೆಯರ ವಿಬಾಗದ ತ್ರೋಬಾಲ್ ಪಂದ್ಯಾಟ ಹಾಗೂ ಮಿಸ್ಟರ್ ಬಂಟ್ ಮಿಸ್ ಬಂಟ್ ಬಂಟರ ಸಮ್ಮಿಲನ-2017ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು.
ನ್ನಿಗೋಳಿ ವಿವೇಕಾನಂದ ನೇವಾ ಟ್ರಸ್ಟ್ (ರಿ)ನ ಅಧ್ಯಕ್ಷ ನಿಡ್ಡೋಡಿ ಚಾವಡಿಮನೆ ಜಗನ್ನಾಥ ಶೆಟ್ಟಿ, ಮೂಡುಬಿದಿರೆ ಬಂಟರ ಸಂಘದ ಅಧ್ಯಕ್ಷ ತಿಮ್ಮಯ್ಯ ಶೆಟ್ಟಿ, ಕಾರ್ಯದರ್ಶಿ ಮೇಘನಾಥ ಶೆಟ್ಟಿ, ಉಪಾಧ್ಯಕ್ಷರಾದ ಡಾ/ವಿನಯಕುಮಾರ್ ಹೆಗ್ಡೆ, ಡಿ.ದಿನಕರ ಶೆಟ್ಟಿ, ಕೋಶಾಧಿಕಾರಿ ಪುರುಷೋತ್ತಮ ಶೆಟ್ಟಿ, ಜತೆ ಕಾರ್ಯದರ್ಶಿಗಳಾದ ದಿವಾಕರ ಶೆಟ್ಟಿ ತೋಡಾರು, ಸುಚರಿತ ಶೆಟ್ಟಿ, ಹರಿಪ್ರಸಾದ್ ಶೆಟ್ಟಿ,ಕಾನೂನು ಸಲಹೆಗಾರ ಶರತ್ ಶೆಟ್ಟಿ, ಉದ್ಯಮಿ ರೋಹಿತ್ ಕುಮಾರ್ ಕಟೀಲು, ದೇವಿಪ್ರಸಾದ್ ಶೆಟ್ಟಿ, ಜಯಶ್ರೀ ಅಮರನಾಥ ಶೆಟ್ಟಿ, ಡಾ/ ರತ್ನಾಕರ ಶೆಟ್ಟಿ,ಜಿ.ಪಂ ಮಾಜಿ ಸದಸ್ಯೆ ಅಂಬಿಕಾ ಡಿ.ಶೆಟ್ಟಿ, ಮೂಡುಬಿದಿರೆ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸುಪ್ರಿಯಾ ಡಿ.ಶೆಟ್ಟಿ, ಪುರಸಬೆಯ ಮಾಜಿ ಅಧ್ಯಕ್ಷೆ ರೂಪಾ ಎಸ್.ಶೆಟ್ಟಿ, ಮೂಲ್ಕಿ ಬಂಟರ ಸಂಘದ ಮಹಿಳಾ ವೇದಿಕೆಯ ಸಂಚಾಲಕಿ ಬಬಿತಾ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಮಿತಿಯ ಶಬರೀಶ್ ಶೆಟ್ಟಿ, ಸಂದೀಪ್ ಶೆಟ್ಟಿ, ರ ಮತ್ತಿತರರು ಉಪಸ್ಥಿತರಿದ್ದರು. ಸಪ್ನಾ ಶೆಟ್ಟಿ ಸ್ವಾಗತಿಸಿದರು. ಅರ್ಪಿತಾ ಶೆಟ್ಟಿ ಕಿನ್ನಿಗೋಳಿ ಕಾರ್ಯಕ್ರಮ ನಿರೂಪಿಸಿದರು. ಸುಧಾಕರ ಶೆಟ್ಟಿ ವಂದಿಸಿದರು.







