Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಿಹಾದ್ ಹೆಸರಿನಲ್ಲಿ ಭೀತಿವಾದವನ್ನು...

ಜಿಹಾದ್ ಹೆಸರಿನಲ್ಲಿ ಭೀತಿವಾದವನ್ನು ಹರಡುತ್ತಿರುವ ಹಫೀಝ್ ಸಯೀದ್: ಪಾಕ್

ವಾರ್ತಾಭಾರತಿವಾರ್ತಾಭಾರತಿ14 May 2017 11:06 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಜಿಹಾದ್ ಹೆಸರಿನಲ್ಲಿ ಭೀತಿವಾದವನ್ನು ಹರಡುತ್ತಿರುವ ಹಫೀಝ್ ಸಯೀದ್: ಪಾಕ್

  ಲಾಹೋರ,ಮೇ 14: ಮುಂಬೈ ಭಯೋತ್ಪಾದಕ ದಾಳಿಯ ರೂವಾರಿ ಮತ್ತು ಜಮಾತ್-ಉದ್ ದಾವಾ (ಜೆಯುಡಿ)ದ ಮುಖ್ಯಸ್ಥ ಹಫೀಝ್ ಸಯೀದ್ ಮತ್ತು ಆತನ ನಾಲ್ವರು ಸಹಚರರನ್ನು ಜಿಹಾದ್ ಹೆಸರಿನಲ್ಲಿ ಭೀತಿವಾದವನ್ನು ಹರಡುತ್ತಿದ್ದಕ್ಕಾಗಿ ಬಂಧಿಸಲಾಗಿದೆ ಎಂದು ಪಾಕಿಸ್ತಾನದ ಆಂತರಿಕ ಸಚಿವಾಲಯವು ನ್ಯಾಯಾಂಗ ಪುನರ್‌ಪರಿಶೀಲನಾ ಮಂಡಳಿಗೆ ತಿಳಿಸಿದೆ.

ಶನಿವಾರ ಮೂವರು ಸದಸ್ಯರ ಮಂಡಳಿಯ ಎದುರು ಹಾಜರಾಗಿದ್ದ ಸಯೀದ್, ಕಾಶ್ಮೀರಿಗಳ ಪರವಾಗಿ ತಾನು ಧ್ವನಿಯೆತ್ತುತ್ತಿರುವುದನ್ನು ನಿಲ್ಲಿಸಲು ಪಾಕಿಸ್ತಾನ ಸರಕಾರವು ತನ್ನನ್ನು ಬಂಧಿಸಿದೆ ಎಂದು ತಿಳಿಸಿದ. ಆದರೆ ಆತನ ವಾದವನ್ನು ತಿರಸ್ಕರಿಸಿದ ಆಂತರಿಕ ಸಚಿವಾಲಯವು, ಜಿಹಾದ್ ಹೆಸರಿನಲ್ಲಿ ಭೀತಿವಾದವನ್ನು ಹರಡುತ್ತಿರುವುದಕ್ಕಾಗಿ ಸಯೀದ್ ಮತ್ತು ಆತನ ನಾಲ್ವರು ಸಹಚರರನ್ನು ಬಂಧಿಸಲಾಗಿದೆ ಎಂದು ತಿಳಿಸಿತು.

  ಸಯೀದ್ ಮತ್ತು ಆತನ ಸಹಚರರಾದ ಝಾಫರ್ ಇಕ್ಬಾಲ್, ಅಬ್ದುಲ್ ರಹಿಮಾನ್ ಆಬಿದ್, ಅಬ್ದುಲ್ಲಾ ಉಬೈದ್ ಮತ್ತು ಖಾಜಿ ಕಾಶಿಫ್ ನಿಯಾಝ್ ಅವರ ಬಂಧನಕ್ಕೆ ಸಂಬಂಧಿಸಿದಂತೆ ಸಮಗ್ರ ದಾಖಲೆಯನ್ನು ಮುಂದಿನ ವಿಚಾರಣಾ ದಿನಾಂಕವಾದ ಮೇ 15ರಂದು ತನಗೆ ಸಲ್ಲಿಸುವಂತೆ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಇಜಾಝ್ ಅಫ್ಝಲ್ ಖಾನ್ ನೇತೃತ್ವದ ಮಂಡಳಿಯು ಸಚಿವಾಲಯಕ್ಕೆ ನಿರ್ದೇಶ ನೀಡಿತು. ಮುಂದಿನ ವಿಚಾರಣೆ ವೇಳೆ ಮಂಡಳಿಯೆದುರು ಖುದ್ದಾಗಿ ಹಾಜರಾಗುವಂತೆ ಪಾಕಿಸ್ತಾನದ ಅಟಾರ್ನಿ ಜನರಲ್‌ಗೂ ಅದು ನಿರ್ದೇಶ ನೀಡಿತು.

  ಪೊಲೀಸರು ಭಾರೀ ಭದ್ರತೆಯ ನಡುವೆ ಸಯೀದ್ ಮತ್ತು ಆತನ ನಾಲ್ವರು ಸಹಚರರನ್ನು ಸರ್ವೋಚ್ಚ ನ್ಯಾಯಾಲಯದ ಲಾಹೋರ ರಿಜಿಸ್ಟ್ರಿಯಲ್ಲಿ ಮಂಡಳಿಯ ಎದುರು ಹಾಜರು ಪಡಿಸಿದ್ದರು. ನ್ಯಾಯಾಲಯದ ಹೊರಗೆ ಭಾರೀ ಸಂಖ್ಯೆಯಲ್ಲಿ ಸಯೀದ್‌ನ ಬೆಂಬಲಿಗರು ಸೇರಿದ್ದರು.

ತನ್ನ ವಕೀಲ ಎ.ಕೆ.ಡೋಗರ್ ನ್ಯಾಯಾಲಯದಲ್ಲಿ ಉಪಸ್ಥಿತರಿದ್ದರೂ ತನ್ನ ಪರವಾಗಿ ತಾನೇ ವಾದಿಸಿದ ಸಯೀದ್, ತನ್ನ ವಿರುದ್ಧ ಸರಕಾರವು ಹೊರಿಸಿರುವ ಆರೋಪಗಳನ್ನು ಯಾವುದೇ ಸರಕಾರಿ ಸಂಸ್ಥೆ ಎಂದಿಗೂ ಸಾಬೀತುಗೊಳಿಸಿಲ್ಲ. ಕಾಶ್ಮೀರದ ಸ್ವಾತಂತ್ರ್ಯಕ್ಕಾಗಿ ಧ್ವನಿಯೆತ್ತುತ್ತಿರುವುದಕ್ಕಾಗಿ ಮತ್ತು ಕಾಶ್ಮೀರ ವಿಷಯದಲ್ಲಿ ಸರಕಾರದ ದುರ್ಬಲ ನೀತಿಯನ್ನು ಟೀಕಿಸುತ್ತಿರುವುದಕ್ಕಾಗಿ ತನ್ನನ್ನು ಮತ್ತು ತನ್ನ ಸಂಸ್ಥೆಯನ್ನು ಬಲಿಪಶು ಮಾಡಲಾಗಿದೆ ಎಂದು ತಿಳಿಸಿದ. ತನ್ನ ಬಂಧನದ ಪಂಜಾಬ್ ಸರಕಾರದ ಆದೇಶವನ್ನು ರದ್ದುಗೊಳಿಸುವಂತೆ ಆತ ಕೋರಿಕೊಂಡ.

ಪಂಜಾಬ್ ಸರಕಾರವು ಕಳೆದ ಜ.30ರಿಂದ ಸಯೀದ್ ಮತ್ತು ಆತನ ಸಹಚರರನ್ನು ಗೃಹಬಂಧನದಲ್ಲಿರಿಸಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X