Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕುವೆಂಪು ಸೃಜನಾತ್ಮಕ ಸಾಹಿತ್ಯಕ್ಕೆ...

ಕುವೆಂಪು ಸೃಜನಾತ್ಮಕ ಸಾಹಿತ್ಯಕ್ಕೆ ಮಲೆನಾಡು ಪರಿಸರವೆ ಮೂಲದ್ರವ್ಯ: ಡಾ.ಮರುಳಸಿದ್ದಪ್ಪ

ವಾರ್ತಾಭಾರತಿವಾರ್ತಾಭಾರತಿ14 May 2017 6:54 PM IST
share
ಕುವೆಂಪು ಸೃಜನಾತ್ಮಕ ಸಾಹಿತ್ಯಕ್ಕೆ ಮಲೆನಾಡು ಪರಿಸರವೆ ಮೂಲದ್ರವ್ಯ: ಡಾ.ಮರುಳಸಿದ್ದಪ್ಪ

ಬೆಂಗಳೂರು, ಮೇ 14: ರಾಷ್ಟ್ರಕವಿ ಕುವೆಂಪುರವರ ಸೃಜನಾತ್ಮಕ ಸಾಹಿತ್ಯ ಸೃಷ್ಟಿಗೆ ಮಲೆನಾಡಿನ ಪರಿಸರವೇ ಮೂಲದ್ರವ್ಯವಾಗಿದೆ ಎಂದು ಹಿರಿಯ ಸಾಹಿತಿ ಡಾ. ಮರುಳಸಿದ್ದಪ್ಪ ಅಭಿಪ್ರಾಯಿಸಿದ್ದಾರೆ.

ರವಿವಾರ ಅವಿರತ ಟ್ರಸ್ಟ್ ಹಾಗೂ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ನಗರದ ವಾಡಿಯಾ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಕುವೆಂಪು ಮಲೆನಾಡು’ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕುವೆಂಪುರವರ ಕಾದಂಬರಿ, ಕವಿತೆ, ಸಣ್ಣಕತೆ ಹಾಗೂ ವಿಮರ್ಶಾ ಲೇಖನಗಳು ಮಲೆನಾಡಿನ ನೆನಪುಗಳನ್ನು ಹೊತ್ತುಕೊಂಡಿವೆ ಎಂದು ತಿಳಿಸಿದರು.
 ರಾಷ್ಟ್ರಕವಿ ಕುವೆಂಪು ತಮ್ಮ ಜೀವನದ ಪ್ರಾರಂಭದ 20 ವರ್ಷಗಳು ಮಾತ್ರ ಮಲೆನಾಡಿನಲ್ಲಿ ಕಳೆದಿದ್ದು. ಉಳಿದ 70 ವರ್ಷಗಳು ಮೈಸೂರಿನಲ್ಲಿ ವಾಸವಾಗಿದ್ದರು. ಇಷ್ಟಾಗಿಯೂ ಅವರ ಬಾಲ್ಯದ ಮಲೆನಾಡಿನ ನೆನಪುಗಳನ್ನೇ ತನ್ನ ಸೃಜನಾತ್ಮಕ ಸಾಹಿತ್ಯಕ್ಕೆ ಆಧಾರವಾಗಿಸಿಕೊಂಡ ಜಗತ್ತಿನಲ್ಲಿಯೇ ಅಪರೂಪದ ಸಾಹಿತಿ ಕುವೆಂಪು ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
 

ಕುವೆಂಪುರವರ ‘ಕಾನೂನು ಹೆಗ್ಗಡತಿ’ ಹಾಗೂ ‘ಮಲೆಗಳಲ್ಲಿ ಮದುಮಗಳು’ ಕಾದಂಬರಿ ಸೇರಿದಂತೆ ಅವರ ಒಟ್ಟು ಸಾಹಿತ್ಯ ಮಲೆನಾಡಿನ ಗಿರಿಶಿಖರಳಂತೆ ಎತ್ತರದ ಹಾಗೂ ಜಗತ್ತಿಗೆ ಬಹು ಉಪಕಾರಿಯಾಗುವಂತಹ ಸಾಹಿತ್ಯವಾಗಿದೆ. ಇವರ ಸಾಹಿತ್ಯವನ್ನು ಓದಿ ಮಲೆ ನಾಡಿನ ಕುರಿತು ವಿಶೇಷ ಆಸಕ್ತಿಯನ್ನು ಹೊಂದುತಿರುವವರ ಸಂಖ್ಯೆ ಏರಿಕೆಯಾಗುತ್ತಲೆ ಇದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.

ಕುವೆಂಪು ಸಾಹಿತ್ಯ ಹಾಗೂ ಅವರ ಬದುಕನ್ನು ಛಾಯಾಚಿತ್ರದ ಮೂಲಕ ಸಂಗ್ರಹಿಸಿ ಓದುಗರಿಗೆ ನೀಡುವ ನಿಟ್ಟಿನಲ್ಲಿ ‘ಕುವೆಂಪು ಮಲೆನಾಡು’ ಕೃತಿಯನ್ನು ಹೊರ ತಂದಿರುವುದು ಶ್ಲಾಘನೀಯ ಕೆಲಸವಾಗಿದೆ. ಕುವೆಂಪುರವರಿಗೆ ಸಂಬಂಧಿಸಿದ ಸುಮಾರು 300 ಛಾಯಾಚಿತ್ರ ಗಳನ್ನೊಳಗೊಂಡ ಕೃತಿ ಇದಾಗಿದ್ದು, ಕುವೆಂಪು ಬಾಲ್ಯದಿಂದ ರಾಷ್ಟ್ರಕವಿ ಸ್ಥಾನಕ್ಕೇರುವವರಿಗೆ ಸಾಗಿಬಂದ ಹಾದಿಯನ್ನು ಓದುಗರಿಗೆ ವೈಚಾರಿಕವಾಗಿ ಹಾಗೂ ಸಾಹಿತ್ಯಕವಾಗಿ ಕಟ್ಟಿಕೊಡುವುದರಲ್ಲಿ ಯಶಸ್ವಿಯಾಗಲಿದೆ ಎಂದು ಅವರು ಆಶಿಸಿದರು.

ಕುವೆಂಪು ಮಲೆನಾಡು ಕೃತಿಯ ಸಂಪಾದಕ ಹಿರಿಯ ಸಾಹಿತಿ ಡಾ.ಕೆ.ಪುಟ್ಟಸ್ವಾಮಿ ಮಾತನಾಡಿ, ಕುವೆಂಪು ಸಾಹಿತ್ಯದ ಓದು ಎನ್ನುವುದು ಸಮಕಾಲೀನ ಜಗತ್ತಿನೊಂದಿಗೆ ನಡೆಸುವ ಅನುಸಂಧಾನವಾಗಿದೆ. ಹೀಗಾಗಿ ಕುವೆಂಪು ಸಾಹಿತ್ಯ ಹಾಗೂ ಬದುಕನ್ನು ವಿವಿಧ ಮಗ್ಗಲುಗಳಲ್ಲಿ ಅಧ್ಯಾಯನ ಮಾಡುವುದು ಇಂದಿನ ತುರ್ತು ಅಗತ್ಯಗಳಲ್ಲೊಂದು ಎಂದು ಅಭಿಪ್ರಾಯಿಸಿದರು.
 

 ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ಪ್ರತಿಷ್ಟಾನದ ಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ಮಾತನಾಡಿದರು. ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ವೇಳೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ, ಹಿರಿಯ ನಾಟಕಕಾರ ಕೆ.ವೈ.ನಾರಾಯಣ ಸ್ವಾಮಿ ಹಾಗೂ ಅವಿರತ ಬಳಗದ ಸದಸ್ಯರಿದ್ದರು.


‘ಕುವೆಂಪು ಸಾಹಿತ್ಯ ಹಾಗೂ ಅವರ ಬದುಕು ಸಾವಿರಾರು ವರ್ಷಗಳಿಗೂ ಜೀವಂತವಾಗಿ ಉಳಿಯುವಂತಹದ್ದು. ಹೀಗಾಗಿ ಅವರಿಗೆ ಸಂಬಂಧಿಸಿದ ಪ್ರತಿಯೊಂದನ್ನು ಜೋಪಾನವಾಗಿ ಸಂರಕ್ಷಿಸಿ, ಮುಂದಿನ ತಲೆಮಾರಿಗೆ ಕೊಂಡೊಯ್ಯಬೇಕಾದದ್ದು ನಮ್ಮ ಜವಾಬ್ದಾರಿ. ಹಾಗೆ ನೋಡಿದರೆ ಅವರ ಹುಟ್ಟಿದ ಮನೆಯನ್ನು ಅದು ಇರುವ ಹಾಗೆಯೇ ಉಳಿಸಿಕೊಳ್ಳಬೇಕಾಗಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಇನ್ನು ಮುಂದಾದರು ಹಿರಿಯ ಸಾಹಿತಿಗಳ ಮನೆ ಹಾಗೂ ಅವರಿಗೆ ಸಂಬಂಧಿಸಿದ ಸ್ಥಳ ಹಾಗೂ ವಸ್ತುಗಳನ್ನು ಇರುವ ಹಾಗೆಯೇ ಉಳಿಸಿಕೊಳ್ಳಬೇಕು’
-ಡಾ. ಮರುಳಸಿದ್ದಪ್ಪ, ಹಿರಿಯ ಸಾಹಿತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X