Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಪಿಲ್ ಹಿಂದೆ ಅಡಗಬೇಡಿ; ಮುಖಾಮುಖಿ...

ಕಪಿಲ್ ಹಿಂದೆ ಅಡಗಬೇಡಿ; ಮುಖಾಮುಖಿ ಹೋರಾಟಕ್ಕೆ ಬನ್ನಿ - ಬಿಜೆಪಿಗೆ ಆಪ್ ಸವಾಲು

ವಾರ್ತಾಭಾರತಿವಾರ್ತಾಭಾರತಿ14 May 2017 7:23 PM IST
share
ಕಪಿಲ್ ಹಿಂದೆ ಅಡಗಬೇಡಿ; ಮುಖಾಮುಖಿ ಹೋರಾಟಕ್ಕೆ ಬನ್ನಿ - ಬಿಜೆಪಿಗೆ ಆಪ್ ಸವಾಲು

ಹೊಸದಿಲ್ಲಿ, ಮೇ 14: ಉಚ್ಚಾಟಿತ ಸದಸ್ಯ ಕಪಿಲ್ ಮಿಶ್ರ ಜೊತೆ ಸೇರಿಕೊಂಡು ಪಕ್ಷವನ್ನು ಮುಗಿಸಲು ಮತ್ತು ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರೀವಾಲ್ ಅವರ ಹೆಸರನ್ನು ಕೆಡಿಸಲು ಬಿಜೆಪಿ ಒಳಸಂಚು ಹೂಡಿದೆ ಎಂದು ‘ಆಮ್ ಆದ್ಮಿ ಪಕ್ಷ (ಆಪ್)’ ಆರೋಪಿಸಿದೆ. ಬಿಜೆಪಿಯವರೇ, ಕಪಿಲ್ ಮಿಶ್ರ ಹಿಂದೆ ಅಡಗಿಕೊಂಡು ಕೇಜ್ರೀವಾಲ್ ಹೆಸರು ಕೆಡಿಸುವ ಯತ್ನ ಕೈಬಿಡಿ. ಆಪ್ ಜೊತೆ ಹೋರಾಡಲು ಬಯಸುವಿರಾದರೆ ಮುಂದೆ ಬನ್ನಿ, ಮುಖಾಮುಖಿ ಹೋರಾಟ ನಡೆಯಲಿ. ಯಾವುದೇ ಸಾಕ್ಷವಿಲ್ಲದೆ ಪೇಪರ್ ಚೂರುಗಳನ್ನು ಅಲ್ಲಾಡಿಸುವುದರಲ್ಲಿ ಅರ್ಥವಿಲ್ಲ ಎಂದು ‘ಆಪ್’ ಮುಖಂಡ ಸಂಜಯ ಸಿಂಗ್ ಹೇಳಿದರು.

  ಕಳೆದ ಎರಡೂವರೆ ವರ್ಷಗಳಿಂದಲೂ ಬಿಜೆಪಿಯವರು ಡೊನೇಷನ್ ಮತ್ತು 2 ಕೋಟಿ ರೂ. ಬಗ್ಗೆ ಮಾತನಾಡುತ್ತಿದ್ದರು. ಇದೀಗ ಇದೇ ಮಾತನ್ನು ಕಪಿಲ್ ಶರ್ಮ ಹೇಳುತ್ತಿದ್ದಾರೆ. ಅಷ್ಟೊಂದು ಸಶಕ್ತವಾಗಿರುವ ಕೇಂದ್ರ ಸರಕಾರಕ್ಕೂ ಈ 2 ಕೋಟಿ ರೂ. ಡೊನೇಷನ್ ಆರೋಪವನ್ನು ರುಜುವಾತು ಪಡಿಸಲು ಆಗಲಿಲ್ಲ. ಬಿಜೆಪಿಗೆ ತನ್ನ ಕಾಲ ಮೇಲೆ ನಿಲ್ಲುವ ಶಕ್ತಿಯೇ ಇಲ್ಲ ಎಂದು ಸಿಂಗ್ ಟೀಕಿಸಿದರು.
    
 ಇದಕ್ಕೂ ಮುನ್ನ ಪತ್ರಿಕಾಗೋಷ್ಠಿ ನಡೆಸಿದ್ದ ಉಚ್ಛಾಟಿತ ಆಪ್ ಮುಖಂಡ ಕಪಿಲ್ ಮಿಶ್ರ, ಕೇಜ್ರೀವಾಲ್ ಮತ್ತವರ ಆಪ್ತರು 16 ಬೇನಾಮಿ ಸಂಸ್ಥೆಗಳ ಮೂಲಕ ಹಣ ಚಲುವೆ ಮಾಡಿದ್ದಾರೆ ಎಂದು ಆರೋಪಿಸಿದ್ದರು ಮತ್ತು ‘ಆಪ್’ ಪಡೆದಿದೆ ಎನ್ನಲಾಗಿರುವ ಡೊನೇಷನ್‌ನ ಎರಡು ಚೆಕ್‌ಗಳನ್ನು ಪ್ರದರ್ಶಿಸಿದ್ದರು.  ಈ ಬಗ್ಗೆ ಪ್ರತಿಕ್ರಿಯಿಸಿದ ಸಿಂಗ್, ಇಂತಹ ಹಲವು ಚೆಕ್‌ಗಳನ್ನು ತಂದು ನಿಮಗೆ ತೋರಿಸಬಲ್ಲೆ. ಈ ಚೆಕ್‌ಗಳನ್ನು ಬರೆದವರಾರು ಮತ್ತು ಯಾರ ಹೆಸರಿಗೆ ಬರೆದಿದ್ದಾರೆ ಎಂಬದೇ ತಿಳಿದಿಲ್ಲ. ಇದನ್ನು ಪತ್ರಿಕಾಗೋಷ್ಠಿಯಲ್ಲಿ ಕಪಿಲ್ ಮಿಶ್ರಾ ಪ್ರದರ್ಶಿಸಿದರು. ಅವರ ಬೂಟಾಟಿಕೆಯ ವರ್ತನೆ ಪತ್ರಿಕಾಗೋಷ್ಠಿಯನ್ನು ಹಾಸ್ಯಾಸ್ಪದವನ್ನಾಗಿಸಿತು ಎಂದು ಟೀಕಿಸಿದರು.

   ಆಪ್ ಪಕ್ಷದ ಖಾತೆಯಲ್ಲಿ ಜಮೆಯಾಗಿರುವ ಹಣಕ್ಕೂ ಆ ಪಕ್ಷ ಚುನಾವಣಾ ಆಯೋಗಕ್ಕೆ ನೀಡಿದ ಮಾಹಿತಿಗೂ ಭಾರೀ ವ್ಯತ್ಯಾಸವಿದೆ ಎಂದು ಕಪಿಲ್ ಮಿಶ್ರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದರು. 2013ರಲ್ಲಿ ‘ಆಪ್’ ಖಾತೆಯಲ್ಲಿ 45 ಕೋಟಿ ರೂ. ಇತ್ತು. ಪಕ್ಷದ ವೆಬ್‌ಸೈಟ್‌ನಲ್ಲಿ ಈ ಮೊತ್ತವನ್ನು 19 ಕೋಟಿ ರೂ. ಎಂದು ಹಾಗೂ ಚುನಾವಣಾ ಆಯೋಗಕ್ಕೆ ನೀಡಿದ ಮಾಹಿತಿಯಲ್ಲಿ ಕೇವಲ 9 ಕೋಟಿ ರೂ. ಎಂದು ತಿಳಿಸಲಾಗಿತ್ತು. ಇದೇ ರೀತಿ, 2014-15ರಲ್ಲಿ 65 ಕೋಟಿ ರೂ. ಇತ್ತು. ಆದರೆ ವೆಬ್‌ಸೈಟ್‌ನಲ್ಲಿ 27 ಕೋಟಿ ರೂ. ಮತ್ತು ಚುನಾವಣಾ ಆಯೋಗಕ್ಕೆ ನೀಡಿದ ಮಾಹಿತಿಯಲ್ಲಿ ಕೇವಲ 32 ಕೋಟಿ ರೂ. ಎಂದು ತಿಳಿಸಲಾಗಿದೆ ಎಂದವರು ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X