Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುದುರೆಮುಖ: ಮೂಲನಿವಾಸಿಗಳ ಕಾಲನಿಗೆ...

ಕುದುರೆಮುಖ: ಮೂಲನಿವಾಸಿಗಳ ಕಾಲನಿಗೆ ವಿದ್ಯುತ್ ಸಂಪರ್ಕ

ವಾರ್ತಾಭಾರತಿವಾರ್ತಾಭಾರತಿ15 May 2017 6:51 PM IST
share

ಬೆಳ್ತಂಗಡಿ, ಮೇ 15: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಒಳಗಿರುವ ನಡ ಗ್ರಾಮದ ಕುದ್ಕೊಳಿ, ಕಂಬುಜೆ ಹಾಗೂ ಸವಣಾಲು ಗ್ರಾಮದ ಪಿಲಿಕಳ, ಬಾಡಡ್ಕ ಪ್ರದೇಶದ ಮೂಲನಿವಾಸಿಗಳ ಕಾಲನಿಗೆ ಕೊನೆಗೂ ವಿದ್ಯುತ್ ಸಂಪರ್ಕ  ಲಭಿಸಿದೆ.

 ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಒಳಗಿರುವ ಪ್ರದೇಶಗಳಲ್ಲಿ ನೂರಾರು ಕುಟುಂಬಗಳು ವಾಸಿಸುತ್ತಿದ್ದು ಇಲ್ಲಿನ ಜನರಿಗೆ ವಿದ್ಯುತ್ ಮರೀಚಿಕೆಯಾಗಿದೆ. ಎಲ್ಲ ಮೂಲಭೂತ ಸೌಲಭ್ಯಗಳನ್ನೂ ಒದಗಿಸುವ ಭರವಸೆ ನೀಡುವ ಅಧಿಕಾರಿಗಳು ವಿದ್ಯುತ್‌ನ ವಿಚಾರ ಬಂದಾಗ ಅದಕ್ಕೆ ಅರಣ್ಯ ಇಲಾಖೆಯತ್ತ ಬೆರಳು ತೋರಿಸುತ್ತಿದ್ದರು. ಅರಣ್ಯ ಇಲಾಖೆ ಯಾವುದೇ ಕಾರಣಕ್ಕೂ ವಿದ್ಯುತ್ ಕಂಬ ಹಾಕಿ ಲೈನ್ ಎಳೆಯಲು ಸಾಧ್ಯವಿಲ್ಲ ಎಂದು ಎಲ್ಲ ಯೋಜನೆಗಳನ್ನೂ ತಿರಸ್ಕರಿಸುತ್ತಿದ್ದರು. ಇಲ್ಲಿನ ಕಾಡಿನ ನಡುವೆ ವಾಸಿಸುತ್ತಿರುವ ಒಂಬತ್ತು ಕುಟುಂಬಗಳು ನಡೆಸಿದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ ಎಂದು ಹೋರಾಟಗಾರರು ಸಂತಸ ವ್ಯಕ್ತಪಡಿಸಿದರು.
      
2016 ರ ಜೂನ್ ನಲ್ಲಿ ಮೆಸ್ಕಾಂನಿಂದ ಇಲ್ಲಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು 23 ಲಕ್ಷ ರೂ. ಮಂಜೂರಾಗಿತ್ತು. ಆದರೆ ಅಲ್ಲಿ ಅರಣ್ಯ ಇಲಾಖೆಯ ಅಡ್ಡಿ ಎದುರಾಗಿತ್ತು. ಆದರೆ ಈ ಬಾರಿ ಬಂದ ಯೋಜನೆಯನ್ನು ಕೈ ಬಿಡಲು ಜನರು ಸಿದ್ಧರಿರಲಿಲ್ಲ. ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಹೋರಾಟ ನಡೆಸಿ, ಅರಣ್ಯ ಇಲಾಖೆಯಿಂದ ಅನುಮೋದನೆ ಪಡೆದುಕೊಂಡಿದ್ದು, ಇದೀಗ ಕಾಮಗಾರಿ ಪ್ರಗತಿಯಲ್ಲಿದ್ದು 86 ಕಂಬಗಳು ಎದ್ದು ನಿಂತಿವೆ. ಬಾದಡ್ಕ ಎಂಬಲ್ಲಿಗೆ ಹೊಸ ವಿದ್ಯುತ್ ಪರಿವರ್ತಕ ಅಳವಡಿಸಲಾಗಿದೆ. ಈ ಭಾಗದಲ್ಲಿ ಒಂಭತ್ತು ಮಲೆಕುಡಿಯ ಕುಟುಂಗಳು ಇದ್ದು ಮೂಲಭೂತ ಸೌಲಭ್ಯದಿಂದ ಮತ್ತು ಅಭಿವೃದ್ದಿಯಿಂದ ವಂಚಿತರಾಗಿದ್ದು, ಇನ್ನು ಅವರ ಮನೆಗಳಲ್ಲಿ ವಿದ್ಯುತ್ ಬೆಳಗಲಿದೆ ಎಂದು ಹೋರಾಟಗಾರರು ಹರ್ಷ ವ್ಯಕ್ತಪಡಿಸಿದರು.
 
 ನಮಗೆ ಕೊನೆಗೂ ನ್ಯಾಯ ದೊರೆಕಿದೆ. ನಾವೂ ಇತರರಂತೆ ಬದುಕಬೇಕು ಎಂದು ಬಯಸುವುದು ತಪ್ಪೇ ? ನಮ್ಮ ಹಕ್ಕುಗಳನ್ನು ಪಡೆಯಲು ಹೋರಾಟ ನಡೆಸಬೇಕಾಗಿ ಬರುತ್ತಿರುವುದು ಮಾತ್ರ ದುರಂತ. ಇತರೇ ಅಭಿವೃದ್ಧಿ ಕಾರ್ಯಗಳತ್ತಲೂ ಸರಕಾರ ಗಮನ ಹರಿಸಲಿ. 

- ಜಯಾನಂದ ಪಿಲಿಕ್ಕಳ ಸ್ಥಳೀಯ ನಿವಾಸಿ.

ಕೊನೆಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಕಣ್ಣು ತೆರೆದಿದ್ದಾರೆ. ತಾಲೂಕಿನಲ್ಲಿ ಇನ್ನೂ 13 ಗ್ರಾಮಗಳಲ್ಲಿ ನೂರಾರು ಕುಟುಂಬಗಳು ವಾಸಿಸುತ್ತಿದ್ದಾರೆ. ಎಲ್ಲ ಮನೆಗಳಿಗೂ ವಿದ್ಯುತ್ ಸೌಲಭ್ಯ ಒದಗಿಸಲು ಸರಕಾರದಲ್ಲಿ ಹಲವಾರು ಯೋಜನೆಗಳಿದ್ದು ಕೂಡಲೇ ಇದೇ ಮಾದರಿಯಲ್ಲಿ ಎಲ್ಲ ಕುಟುಂಬಗಳಿಗೂ ವಿದ್ಯುತ್ ಒದಗಿಸಲು ಕ್ರಮ ಕೈಗೊಳ್ಳಬೇಕು.
  ಶೇಖರ ಲಾಯಿಲ, ರಾಜ್ಯ ಸಮಿತಿ ಸದಸ್ಯ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X