Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2050ರಲ್ಲಿ ಪ್ರತಿ 5 ಭಾರತೀಯರಲ್ಲಿ...

2050ರಲ್ಲಿ ಪ್ರತಿ 5 ಭಾರತೀಯರಲ್ಲಿ ಒಬ್ಬಾತನಿಗೆ 60 ವರ್ಷ

ವೃದ್ಧರ ಬಾಹುಳ್ಯದ ದೇಶವಾಗಲಿದೆ ಭಾರತ: ಸಮೀಕ್ಷಾ ವರದಿ

ವಾರ್ತಾಭಾರತಿವಾರ್ತಾಭಾರತಿ15 May 2017 9:19 PM IST
share
2050ರಲ್ಲಿ ಪ್ರತಿ 5 ಭಾರತೀಯರಲ್ಲಿ ಒಬ್ಬಾತನಿಗೆ 60 ವರ್ಷ

ಹೊಸದಿಲ್ಲಿ, ಮೇ 15: ಪ್ರಸ್ತುತ ಯುವಜನರು ಅಧಿಕ ಸಂಖ್ಯೆಯಲ್ಲಿರುವ ದೇಶವಾದ ಭಾರತವು ನಿಧಾನವಾಗಿ ವೃದ್ಧರ ಬಾಹುಳ್ಯದ ದೇಶವಾಗಿ ಪರಿವರ್ತನೆಗೊಳ್ಳಲಿದೆ ಯೆಂದು ಸಮೀಕ್ಷಾ ವರದಿಯೊಂದು ತಿಳಿಸಿದೆ. 2050ರೊಳಗೆ ಪ್ರತಿ 5 ಭಾರತೀಯರಲ್ಲಿ ಒಬ್ಬಾತ 60ರ ಹರೆಯದವನಾಗಿರುವನೆಂದು ಅದು ಹೇಳಿದೆ. ಪ್ರಸ್ತುತ ಪ್ರತಿ 12 ಮಂದಿಯಲ್ಲಿ ಓರ್ವ 60ರ ಹರೆಯದವನಾಗಿದ್ದಾನೆ.

‘‘ಯುವಜನರೇ ಅಧಿಕವಾಗಿರುವ ರಾಷ್ಟ್ರವಾದ ಭಾರತವು ವೃದ್ಧರ ದೇಶವಾಗಿ ಮಾರ್ಪಾಡಾಗುತ್ತಿದೆ. ಪ್ರಸ್ತುತ 60 ವರ್ಷಕ್ಕಿಂತ ಅಧಿಕ ವಯಸ್ಸಿನವರ ಸಂಖ್ಯೆಯು ಒಟ್ಟು ಜನಸಂಖ್ಯೆಯ ಶೇ.8.9ರಷ್ಟಿದ್ದರೆ 2050ರ ವೇಳೆಗೆ ಅದು ಶೇ.19.4ಕ್ಕೇರಲಿದೆ’’ ಎಂದು ಪಿಎಫ್‌ಆರ್‌ಡಿಎ-ಸಿಆರ್‌ಐಎಸ್‌ಐಎಲ್ ವರದಿ ತಿಳಿಸಿದೆ.

ಈ ವರದಿಯ ಪ್ರಕಾರ 80 ವರ್ಷಕ್ಕಿಂತ ಅಧಿಕ ವಯೋಮಾನದ ಜನರ ಸಂಖ್ಯೆಯು ಈಗಿನ ಶೇ.0.9ಕ್ಕಿಂತ ಶೇ.2.8ಕ್ಕೇರಲಿದೆ.

ಭಾರತೀಯ ಕುಟುಂಬಗಳಲ್ಲಿ ಹಿರಿಯ ತಲೆಮಾರುಗಳಿಗೆ ಆಧಾರವಾಗುವ ವ್ಯವಸ್ಥೆ ನಿರಂತರವಾಗಿ ಕುಸಿಯತೊಡಗಿರುವುದರಿಂದ ಅತ್ಯುತ್ತಮವಾದ ಪಿಂಚಣಿ ವ್ಯವಸ್ಥೆಯನ್ನು ದೇಶವು ಹೊಂದುವುದು ಅನಿವಾರ್ಯವಾಗಿದೆಯೆಂದು ವರದಿ ಹೇಳಿದೆ.

    2015ರಲ್ಲಿ ದೇಶದಲ್ಲಿ ಒಟ್ಟು ಜನಸಂಖ್ಯೆಯ ಶೇ.80ರಷ್ಟು ಮಂದಿ 60 ವರ್ಷಕ್ಕಿಂತ ಕೆಳಗಿನವರಾಗಿದ್ದಾರೆ ಹಾಗೂ ದುಡಿಯುವ ವಯಸ್ಸಿನವರ ಜನಸಂಖ್ಯೆ ಪ್ರಮಾಣವು ಶೇ.44ರಷ್ಟಿತ್ತು. ಉತ್ತಮವಾಗಿ ಅಭಿವೃದ್ಧಿಪಡಿಸಿದ ಪಿಂಚಣಿ ವ್ಯವಸ್ಥೆಯು ದೇಶದ ಬೊಕ್ಕಸದ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆಗೊಳಿಸುವುದಲ್ಲದೆ, ದೇಶದ ಆರ್ಥಿಕತೆ ಮೇಲೆ ಸ್ಥಿರವಾದ ಪರಿಣಾಮವನ್ನು ಬೀರಲಿದೆ. ದೀರ್ಘಾವಧಿಯ ಉಳಿತಾಯ ಜೊತೆ ದೀರ್ಘಾವಧಿಯ ಹೂಡಿಕೆಗಳನ್ನು ಉತ್ತೇಜಿಸಲಿದೆ ಎಂದು ಸಮೀಕ್ಷೆ ತಿಳಿಸಿದೆ.

ದೇಶದಲ್ಲಿನ ವಿವಿಧ ಪಿಂಚಣಿ ಯೋಜನೆಗಳ ಬಗ್ಗೆ ಸರಕಾರವು ಜನರಲ್ಲಿ ಆರ್ಥಿಕ ಜಾಗೃತಿಯನ್ನು ಮೂಡಿಸಬೇಕೆಂದು ವರದಿ ಹೇಳಿದೆ.

ಭಾರತದ ಸ್ವಯಂಪ್ರೇರಿತ ಪಿಂಚಣಿ ಯೋಜನೆಗಳು , ಭಾರತ ಪಿಂಚಣಿ ವಲಯದ ಪ್ರಗತಿಗೆ ದೊಡ್ಡ ತೊಡಕಾಗಿ ಪರಿಣಮಿಸಿದೆ ಎಂದು ವರದಿ ಹೇಳಿದೆ.

 ಉದಾಹರಣೆಗೆ ಕೇಂದ್ರ ಸರಕಾರದ ಅಟಲ್ ಪಿಂಚಣಿ ಯೋಜನೆಗೆ 49 ಲಕ್ಷ ಮಂದಿ ನೋಂದಾಯಿಸಿಕೊಂಡಿದ್ದು, ಅವರಲ್ಲಿ ಶೇ. 49 ಶೇ. ಮಂದಿ 1 ಸಾವಿರ ರೂ. ಹಾಗೂ ಶೇ.37 ಮಂದಿ 5 ಸಾವಿರ ರೂ. ಪಿಂಚಣಿಗೆ ಚಂದಾದಾರರಾಗಿದ್ದಾರೆ.

  ಈ ಪಿಂಚಣಿ ಮೊತ್ತವು ತೀರಾ ಕಡಿಮೆಯಾಗಿದ್ದರೂ, ಅಸಂಘಟಿತ ವಲಯದ ಬಹುತೇಕ ಮಂದಿಗೆ ಯೋಜನೆಗೆ ತಮ್ಮ ಚಂದಾ ದೇಣಿಗೆಯನ್ನು ನೀಡಲು ಸಾಧ್ಯವಾಗುತ್ತಿಲ್ಲವೆಂದು ಸಮೀಕ್ಷೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X